Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...