Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...