Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...