Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....