Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...