Homeಮುಖಪುಟಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ...

ಸರ್ಕಾರಿ ಏಜೆಂಟ್ ನೇಮಿಸಿಕೊಳ್ಳಲು ಟ್ವಿಟರ್‌ ಮೇಲೆ ಭಾರತ ಸರ್ಕಾರ ಒತ್ತಡ; ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

- Advertisement -
- Advertisement -

ಟ್ವಿಟ್ಟರ್ ಮಾಜಿ ಭದ್ರತಾ ಮುಖ್ಯಸ್ಥ ಪೀಟರ್ ಝಟ್ಕೊ ಅವರು ಟ್ವಿಟರ್‌ ಸಂಸ್ಥೆ ವಿರುದ್ಧ ದೂರು ನೀಡಿದ್ದು, ಭಾರತದ ಸರ್ಕಾರದತ್ತಲೂ ಬೊಟ್ಟು ಮಾಡಿದ್ದಾರೆ. ‘ಸರ್ಕಾರಿ ಏಜೆಂಟ್’ ಆಗಿರುವ ಮತ್ತು ಸೂಕ್ಷ್ಮ ಬಳಕೆದಾರರ ಡೇಟಾಗೆ ಪ್ರವೇಶ ಪಡೆದಿರುವ ವ್ಯಕ್ತಿಯನ್ನು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್‌ಗೆ ನೇಮಿಸಿಕೊಳ್ಳಲು ಭಾರತ ಸರ್ಕಾರ ಒತ್ತಾಯಿಸಿತು ಎಂದು ಅವರು ಆರೋಪಿಸಿದ್ದಾರೆ.

ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್‌ ಕಮಿಷನ್‌ಗೆ ಕಳುಹಿಸಲಾದ 84-ಪುಟಗಳ ಕಡತದ ಕುರಿತು ಮಂಗಳವಾರ ಮಧ್ಯಾಹ್ನ ವಾಷಿಂಗ್ಟನ್ ಪೋಸ್ಟ್‌ ವರದಿ ಮಾಡಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷಿ ಮತ್ತು ದೃಢೀಕರಣದ ಮಾಹಿತಿಯನ್ನು ಝಟ್ಕೊ ಅವರ ವಕೀಲರು ಸಲ್ಲಿಸಿದ್ದಾರೆ. ಅಮೆರಿಕದ ನ್ಯಾಯಾಂಗ ಇಲಾಖೆಯ ರಾಷ್ಟ್ರೀಯ ಭದ್ರತಾ ವಿಭಾಗಕ್ಕೆ ಮತ್ತು ಅಮೆರಿಕದ ಗುಪ್ತಚರ ಸಮಿತಿಗೆ ದೂರು ರವಾನೆಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತನ್ನ ಸಹೋದ್ಯೋಗಿಗಳ ನಡುವೆ ‘ಮುಡ್ಜ್’ ಎಂದೇ ವ್ಯಾಪಕವಾಗಿ ಮೆಚ್ಚುಗೆ ಪಡೆದ ಹ್ಯಾಕರ್ ಝಟ್ಕೊ, “238 ಮಿಲಿಯನ್‌ನಷ್ಟು ದೈನಂದಿನ ಬಳಕೆದಾರರನ್ನು ಸರಿಯಾಗಿ ರಕ್ಷಿಸಲು ಸಾಧ್ಯವಾಗದ, ಅಸ್ತವ್ಯಸ್ತವಾಗಿರುವ ಕಂಪನಿ ಟ್ವಿಟರ್‌” ಎಂಬುದಾಗಿ ತಮ್ಮ ದೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲ ವಿಷಯಗಳನ್ನು ತನ್ನ ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಸಲ್ಲಿಸಲಾಗಿರುವ ದಾಖಲೆಯಲ್ಲಿ ‘ವಿದೇಶಿ ಗುಪ್ತಚರದಿಂದ ಒಳಪ್ರವೇಶಿಕೆ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯ’ ಎಂಬ ಶೀರ್ಷಿಕೆಯ ವಿಭಾಗವಿದ್ದು, ಟ್ವಿಟರ್ ಪ್ರಜಾಪ್ರಭುತ್ವಕ್ಕೆ ತೊಂದರೆ ನೀಡಿರುವ ಅನೇಕ ಸಂಚಿಕೆಗಳನ್ನು ಝಟ್ಕೊ ಅಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

“ಸರ್ಕಾರಿ ಏಜೆಂಟ್‌ಗಳಾಗಿರುವ ನಿರ್ದಿಷ್ಟ ವ್ಯಕ್ತಿ(ಗಳನ್ನು) ಟ್ವಿಟರ್‌ಗೆ ನೇಮಿಸಿಕೊಳ್ಳುವಂತೆ ಭಾರತೀಯ ಸರ್ಕಾರವು ಒತ್ತಾಯಿಸಿತು. ಆ ನಿರ್ದಿಷ್ಟ ವ್ಯಕ್ತಿಗಳು (ಟ್ವಿಟರ್‌ನ ಮೂಲಭೂತ ದೋಷಗಳ ಕಾರಣದಿಂದಾಗಿ) ಅಪಾರ ಪ್ರಮಾಣದ ಟ್ವಿಟರ್ ಬಳಕೆದಾರರ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿರುತ್ತಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಯಾವುದೇ ನಿರ್ಬಂಧವಿಲ್ಲದೆ ಭಾರತೀಯ ಸರ್ಕಾರಿ ಏಜೆಂಟ್‌, ಕಂಪನಿಯ ಬಳಕೆದಾರರ ಡೇಟಾಗೆ ನೇರ ಪ್ರವೇಶವನ್ನು ಪಡೆಯಲು ಅನುಮತಿ ನೀಡಲಾಗಿದೆ. ಟ್ವಿಟರ್‌ ಸಂಸ್ಥೆ ತನ್ನ ಬಳಕೆದಾರರಿಗೆ ಖಚಿತಪಡಿಸಿದ ಬದ್ಧತೆಯನ್ನು ಟ್ವಿಟರ್‌ ಅಧಿಕಾರಿಗಳು ಉಲ್ಲಂಘಿಸಿದ್ದಾರೆ” ಎಂದು ಗಂಭೀರವಾದ ಆರೋಪವನ್ನು ಅವರು ಮಾಡಿದ್ದಾರೆ.

ಇದನ್ನೂ ಓದಿರಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ವಾಷಿಂಗ್ಟನ್ ಪೋಸ್ಟ್ ತನ್ನ ವರದಿಯಲ್ಲಿ ವಿಷಯಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿದೆ. ಝಕ್ಟೋ ಮಾಡಿರುವ ಆರೋಪಗಳನ್ನು ಅವರು ಕೂಡ ಅಲ್ಲಗಳೆದಿಲ್ಲ. ನೇಮಕಗೊಂಡ ಉದ್ಯೋಗಿ ಬಹುಶಃ ಸರ್ಕಾರಿ ಏಜೆಂಟ್ ಎಂಬ ಅಂಶವನ್ನು ಅವರೂ ಪ್ರಸ್ತಾಪಿಸಿದ್ದಾರೆ.

‘ಸ್ಕ್ವೀಜಿಂಗ್ ಲೋಕಲ್ ಸ್ಟಾಫ್’ ಎಂಬ ಶೀರ್ಷಿಕೆಯ ಮತ್ತೊಂದು ವಿಭಾಗದಲ್ಲಿ ಮಾಜಿ ಟ್ವಿಟರ್ ಭದ್ರತಾ ಮುಖ್ಯಸ್ಥರು ಮತ್ತಷ್ಟು ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಹತೋಟಿಯಾಗಿ ಬಳಸಬಹುದಾದ, ಸ್ಥಳೀಯ ಪೂರ್ಣ ಸಮಯದ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಟ್ವಿಟರ್ ಅನ್ನು ಭಾರತ ಸರ್ಕಾರ ಒತ್ತಾಯಿಸಿತು ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...