Homeಕರ್ನಾಟಕಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ...

ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್ ಮಧ್ಯೆ ಸಾಮೂಹಿಕ ವಲಸೆ ಹೋಗುವುದನ್ನು ತಡೆಯಲು  1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ವಿತರಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಹೆಸರುಗಳು, ವಿಳಾಸಗಳು ಅಥವಾ ಅವರು ವಾಸಿಸುತ್ತಿದ್ದ ಜಿಲ್ಲೆಗಳಂತಹ ಮೂಲಭೂತ ಸಂಪರ್ಕ ವಿವರಗಳು ಇಲ್ಲದೇ ಹೇಗೆ ಹಣ ವಿತರಣೆ ಮಾಡಿದ್ದೀರಿ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಪ್ರಶ್ನಿಸಿದ್ದಾರೆ.

ಸರಿಯಾದ ವಿಳಾಸಗಳಿಲ್ಲದೆ 1.25 ಲಕ್ಷ ಕಾರ್ಮಿಕರಿಗೆ ತಲಾ 5,000 ರೂಗಳನ್ನು ಹೇಗೆ ನೀಡಲಾಯಿತು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ 15 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯು ಕಾರ್ಮಿಕ ಕಾರ್ಯದರ್ಶಿಗೆ ಸೂಚಿಸಿದೆ.

“ಇದು ನನಗೆ ಸಂಪೂರ್ಣ ಆಶ್ಚರ್ಯ ಉಂಟುಮಾಡಿದೆ. ಈ ಫಲಾನುಭವಿಗಳ ಜಿಲ್ಲೆಗಳ ಹೆಸರುಗಳು ಸಹ ತಿಳಿದುಬಂದಿಲ್ಲ. ಹಾಗಿದ್ದಮೇಲೆ ಅಷ್ಟೊಂದು ದೊಡ್ಡ ಹಣವನ್ನು ಹೇಗೆ ವಿತರಿಸಲಾಯಿತು? ಇಲ್ಲೇನೋ ನಡೆಯುತ್ತಿದೆ ಎಂದು ಸಮಿತಿ ಭಾವಿಸಿದೆ” ಎಂದು ಪಿಎಸಿ ಅಧ್ಯಕ್ಷ ಎಚ್.‌ಕೆ ಪಾಟೀಲ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಆರ್ಥಿಕತೆಯ ಕುಸಿತ ತಡೆಯಲು ಕೇಂದ್ರವು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ, ಕರ್ನಾಟಕದ ಬಿ.ಎಸ್ ಯಡಿಯೂರಪ್ಪ ನೇತೃಥ್ವದ ಸರ್ಕಾರವು ವಿಶೇಷ ರೈಲುಗಳನ್ನು ರದ್ದುಗೊಳಿಸಿತು. ಇಲ್ಲಿರುವ ವಲಸೆ ಕಾರ್ಮಿಕರು ಹೋಗಿಬಿಟ್ಟರೆ ಎಂಬ ಭಯ ಅವರಿಗಿತ್ತು. ಆದರೆ ಇದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿತ್ತು. ಕಾರ್ಮಿಕರನ್ನು ಸೆರೆಯಾಳುಗಳ ರೀತಿಯಲ್ಲಿ ಬಂಧನಲ್ಲಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿತ್ತು.

ಇಂತಹ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳದೆ ಇಲ್ಲಿಯೇ ಉಳಿದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದರು. ಅಲ್ಲದೇ 1,600 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇದರಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ತಲಾ 5000 ರೂ ನೀಡುವುದು ಸಹ ಸೇರಿತ್ತು.

ಈ ಪ್ಯಾಕೇಜ್ ಅಡಿಯಲ್ಲಿ, “ನೋಂದಾಯಿತ” ಕಾರ್ಮಿಕರಿಗೆ ಅವರು ಮೊದಲು ಪಡೆದ 2,000 ರೂಗಳಿಗೆ ಹೆಚ್ಚುವರಿಯಾಗಿ 3,000 ರೂ. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಸುಮಾರು 15.8 ಲಕ್ಷ “ನೋಂದಾಯಿತ” ಕಟ್ಟಡ ಕಾರ್ಮಿಕರಿದ್ದಾರೆ. ಅದರಲ್ಲಿ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5000 ತಲುಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇದನ್ನು ಪ್ರಶ್ನಿಸಿದೆ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 43,000 ಕಾರ್ಮಿಕರು ಮತ್ತು ಬೀದರ್ ಜಿಲ್ಲೆಯಲ್ಲಿ 66,000 ಕಾರ್ಮಿಕರು ನೋಂದಾಯಿಸಲಾಗಿದೆ ಎಂದು ತೋರಿಸುತ್ತದೆ. ಅತಿ ಹೆಚ್ಚು ನಿರ್ಮಾಣ ಕೆಲಸಗಳು ನಡೆಯುವ ಬೆಂಗಳೂರಿನಲ್ಲಿ ಬೀದರ್ ಮತ್ತು ಇತರ ಅನೇಕ ಸ್ಥಳಗಳಿಗಿಂತ ಅತ್ಯಂತ ಕಡಿಮೆ ಕಾರ್ಮಿಕರು ಇರಲು ಹೇಗೆ ಸಾರ್ಧಯ? ಎಂದು ಎಚ್‌.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

COVID-19 ವೈರಸ್ ಹರಡಿದ ಆರಂಭಿಕ ದಿನಗಳಲ್ಲಿನ ಅಂಕಿ ಅಂಶಗಳನ್ನು ನೀಡಲಾಗಿದೆ. ಸರ್ಕಾರವು “ಸಾಧ್ಯವಾದಷ್ಟು ಉತ್ತಮ ಅಭ್ಯಾಸ”ವನ್ನು ಅಳವಡಿಸಿಕೊಂಡಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಉತ್ತರಿಸಿದ್ದಾರೆ. ಇನ್ನೂ, ಅನುಮಾನವಿದ್ದರೆ, ನಾವು ಯಾವಾಗಲೂ ತನಿಖೆಗೆ ಸಿದ್ದರಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಟ್ಟಡ ಕಾರ್ಮಿಕರನ್ನು ಸಂಘಟಿಸುತ್ತಿರುವ ಸಿಐಟಿಯು ಬೆಂಗಳೂರು ದಕ್ಷಿಣ ಕಾರ್ಯದರ್ಶಿ ಉಮೇಶ್ ರವರನ್ನು ಮಾತನಾಡಿಸಿತು. ಅವರು “ಈ ಹಿಂದೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮೂಲಕ ರೇಷನ್ ಕಿಟ್ ಕೊಟ್ಟಿದ್ದೇವೆ ಎಂದು ಘೋಷಿಸಿಕೊಂಡಿತ್ತು. ನಾವು ಆರ್‌ಟಿಐ ಮೂಲಕ ಅರ್ಜಿ ಹಾಕಿ ಎಷ್ಟು ಜನಕ್ಕೆ ನೀಡಿದ್ದೀರಿ ಎಂದು ಮಾಹಿತಿ ಕೇಳಿದರೆ ಬಿಬಿಎಂಪಿ ನಮ್ಮ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಈಗ ಕಟ್ಟಡ ಕಾರ್ಮಿಕರಿಗೆ ತಲಾ 5000 ಕೊಟ್ಟಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ನಮ್ಮ ಸುತ್ತಲಿನ ಕಾರ್ಮಿಕರಿಗೆ ಕೇವಲ 2000 ತಲುಪಿದೆಯೇ ಹೊರತು ಉಳಿದ 3000 ತಲುಪಿಲ್ಲ. ಲಾಕ್‌ಡೌನ್‌ನಿಂದ ಅತಿ ಹೆಚ್ಚಿನ ತೊಂದರೆಗೊಳಗಾದ ಈ ಅಸಂಘಟಿತ ಕಾರ್ಮಿಕರ ಹೆಸರಿನಲ್ಲಿ ಸರ್ಕಾರ ಮೋಸ ಮಾಡುವುದನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಮುಂದಿಡಬೇಕು. ಇಲ್ಲದಿದ್ದರೆ ಸರ್ಕಾರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...