Homeಕರ್ನಾಟಕಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ...

ಹೆಸರು, ವಿಳಾಸ ಏನೂ ಇಲ್ಲದೆ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ ಹಂಚಿದ ಕರ್ನಾಟಕ ಸರ್ಕಾರ!: ಹೇಗೆ?

- Advertisement -
- Advertisement -

ಕೊರೊನಾ ವೈರಸ್ ಲಾಕ್‌ಡೌನ್ ಮಧ್ಯೆ ಸಾಮೂಹಿಕ ವಲಸೆ ಹೋಗುವುದನ್ನು ತಡೆಯಲು  1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ತಲಾ 5,000 ರೂ.ಗಳನ್ನು ವಿತರಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ. ಹೆಸರುಗಳು, ವಿಳಾಸಗಳು ಅಥವಾ ಅವರು ವಾಸಿಸುತ್ತಿದ್ದ ಜಿಲ್ಲೆಗಳಂತಹ ಮೂಲಭೂತ ಸಂಪರ್ಕ ವಿವರಗಳು ಇಲ್ಲದೇ ಹೇಗೆ ಹಣ ವಿತರಣೆ ಮಾಡಿದ್ದೀರಿ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಪ್ರಶ್ನಿಸಿದ್ದಾರೆ.

ಸರಿಯಾದ ವಿಳಾಸಗಳಿಲ್ಲದೆ 1.25 ಲಕ್ಷ ಕಾರ್ಮಿಕರಿಗೆ ತಲಾ 5,000 ರೂಗಳನ್ನು ಹೇಗೆ ನೀಡಲಾಯಿತು? ಎಂದು ಸರ್ಕಾರವನ್ನು ಪ್ರಶ್ನಿಸಿದ್ದು, ಈ ವಿಷಯದ ಬಗ್ಗೆ 15 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ)ಯು ಕಾರ್ಮಿಕ ಕಾರ್ಯದರ್ಶಿಗೆ ಸೂಚಿಸಿದೆ.

“ಇದು ನನಗೆ ಸಂಪೂರ್ಣ ಆಶ್ಚರ್ಯ ಉಂಟುಮಾಡಿದೆ. ಈ ಫಲಾನುಭವಿಗಳ ಜಿಲ್ಲೆಗಳ ಹೆಸರುಗಳು ಸಹ ತಿಳಿದುಬಂದಿಲ್ಲ. ಹಾಗಿದ್ದಮೇಲೆ ಅಷ್ಟೊಂದು ದೊಡ್ಡ ಹಣವನ್ನು ಹೇಗೆ ವಿತರಿಸಲಾಯಿತು? ಇಲ್ಲೇನೋ ನಡೆಯುತ್ತಿದೆ ಎಂದು ಸಮಿತಿ ಭಾವಿಸಿದೆ” ಎಂದು ಪಿಎಸಿ ಅಧ್ಯಕ್ಷ ಎಚ್.‌ಕೆ ಪಾಟೀಲ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಆರ್ಥಿಕತೆಯ ಕುಸಿತ ತಡೆಯಲು ಕೇಂದ್ರವು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ, ಕರ್ನಾಟಕದ ಬಿ.ಎಸ್ ಯಡಿಯೂರಪ್ಪ ನೇತೃಥ್ವದ ಸರ್ಕಾರವು ವಿಶೇಷ ರೈಲುಗಳನ್ನು ರದ್ದುಗೊಳಿಸಿತು. ಇಲ್ಲಿರುವ ವಲಸೆ ಕಾರ್ಮಿಕರು ಹೋಗಿಬಿಟ್ಟರೆ ಎಂಬ ಭಯ ಅವರಿಗಿತ್ತು. ಆದರೆ ಇದನ್ನು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿತ್ತು. ಕಾರ್ಮಿಕರನ್ನು ಸೆರೆಯಾಳುಗಳ ರೀತಿಯಲ್ಲಿ ಬಂಧನಲ್ಲಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿತ್ತು.

ಇಂತಹ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮೂರಿಗೆ ತೆರಳದೆ ಇಲ್ಲಿಯೇ ಉಳಿದುಕೊಳ್ಳಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಮನವಿ ಮಾಡಿದ್ದರು. ಅಲ್ಲದೇ 1,600 ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ಘೋಷಿಸಿದ್ದರು. ಇದರಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ತಲಾ 5000 ರೂ ನೀಡುವುದು ಸಹ ಸೇರಿತ್ತು.

ಈ ಪ್ಯಾಕೇಜ್ ಅಡಿಯಲ್ಲಿ, “ನೋಂದಾಯಿತ” ಕಾರ್ಮಿಕರಿಗೆ ಅವರು ಮೊದಲು ಪಡೆದ 2,000 ರೂಗಳಿಗೆ ಹೆಚ್ಚುವರಿಯಾಗಿ 3,000 ರೂ. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಸುಮಾರು 15.8 ಲಕ್ಷ “ನೋಂದಾಯಿತ” ಕಟ್ಟಡ ಕಾರ್ಮಿಕರಿದ್ದಾರೆ. ಅದರಲ್ಲಿ 1.25 ಲಕ್ಷ ವಲಸೆ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ತಲಾ 5000 ತಲುಪಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಇದನ್ನು ಪ್ರಶ್ನಿಸಿದೆ. ಇದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 43,000 ಕಾರ್ಮಿಕರು ಮತ್ತು ಬೀದರ್ ಜಿಲ್ಲೆಯಲ್ಲಿ 66,000 ಕಾರ್ಮಿಕರು ನೋಂದಾಯಿಸಲಾಗಿದೆ ಎಂದು ತೋರಿಸುತ್ತದೆ. ಅತಿ ಹೆಚ್ಚು ನಿರ್ಮಾಣ ಕೆಲಸಗಳು ನಡೆಯುವ ಬೆಂಗಳೂರಿನಲ್ಲಿ ಬೀದರ್ ಮತ್ತು ಇತರ ಅನೇಕ ಸ್ಥಳಗಳಿಗಿಂತ ಅತ್ಯಂತ ಕಡಿಮೆ ಕಾರ್ಮಿಕರು ಇರಲು ಹೇಗೆ ಸಾರ್ಧಯ? ಎಂದು ಎಚ್‌.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

COVID-19 ವೈರಸ್ ಹರಡಿದ ಆರಂಭಿಕ ದಿನಗಳಲ್ಲಿನ ಅಂಕಿ ಅಂಶಗಳನ್ನು ನೀಡಲಾಗಿದೆ. ಸರ್ಕಾರವು “ಸಾಧ್ಯವಾದಷ್ಟು ಉತ್ತಮ ಅಭ್ಯಾಸ”ವನ್ನು ಅಳವಡಿಸಿಕೊಂಡಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ ನಾರಾಯಣ್ ಉತ್ತರಿಸಿದ್ದಾರೆ. ಇನ್ನೂ, ಅನುಮಾನವಿದ್ದರೆ, ನಾವು ಯಾವಾಗಲೂ ತನಿಖೆಗೆ ಸಿದ್ದರಿದ್ದೇವೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಕಟ್ಟಡ ಕಾರ್ಮಿಕರನ್ನು ಸಂಘಟಿಸುತ್ತಿರುವ ಸಿಐಟಿಯು ಬೆಂಗಳೂರು ದಕ್ಷಿಣ ಕಾರ್ಯದರ್ಶಿ ಉಮೇಶ್ ರವರನ್ನು ಮಾತನಾಡಿಸಿತು. ಅವರು “ಈ ಹಿಂದೆ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಬಿಬಿಎಂಪಿ ಮೂಲಕ ರೇಷನ್ ಕಿಟ್ ಕೊಟ್ಟಿದ್ದೇವೆ ಎಂದು ಘೋಷಿಸಿಕೊಂಡಿತ್ತು. ನಾವು ಆರ್‌ಟಿಐ ಮೂಲಕ ಅರ್ಜಿ ಹಾಕಿ ಎಷ್ಟು ಜನಕ್ಕೆ ನೀಡಿದ್ದೀರಿ ಎಂದು ಮಾಹಿತಿ ಕೇಳಿದರೆ ಬಿಬಿಎಂಪಿ ನಮ್ಮ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದೆ. ಈಗ ಕಟ್ಟಡ ಕಾರ್ಮಿಕರಿಗೆ ತಲಾ 5000 ಕೊಟ್ಟಿರುವುದಾಗಿ ಸರ್ಕಾರ ಹೇಳಿಕೊಂಡಿದೆ. ಆದರೆ ನಮ್ಮ ಸುತ್ತಲಿನ ಕಾರ್ಮಿಕರಿಗೆ ಕೇವಲ 2000 ತಲುಪಿದೆಯೇ ಹೊರತು ಉಳಿದ 3000 ತಲುಪಿಲ್ಲ. ಲಾಕ್‌ಡೌನ್‌ನಿಂದ ಅತಿ ಹೆಚ್ಚಿನ ತೊಂದರೆಗೊಳಗಾದ ಈ ಅಸಂಘಟಿತ ಕಾರ್ಮಿಕರ ಹೆಸರಿನಲ್ಲಿ ಸರ್ಕಾರ ಮೋಸ ಮಾಡುವುದನ್ನು ಬಿಟ್ಟು ಅಧಿಕೃತ ದಾಖಲೆಗಳನ್ನು ಮುಂದಿಡಬೇಕು. ಇಲ್ಲದಿದ್ದರೆ ಸರ್ಕಾರ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ವರ್ಣಭೇದ ನೀತಿ, ಫೇರ್‌ನೆಸ್ ಕ್ರೀಮ್‌ಗಳು, ಮತ್ತು ಬ್ಲಾಕ್ ಲೈವ್ಸ್‌ ಮ್ಯಾಟರ್‌ ಎನ್ನುವ ನಟಿಯರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...