Homeಮುಖಪುಟಅಗತ್ಯ ವಸ್ತುಗಳ ದರ ನಿಗದಿ ಮಾಡಿದ ಕೇರಳ ಸರ್ಕಾರ, ಸರ್ಜಿಕಲ್ ಮಾಸ್ಕ್‌ 3 ರೂ., ಫೇಸ್‌ಶೀಲ್ಡ್‌ಗೆ...

ಅಗತ್ಯ ವಸ್ತುಗಳ ದರ ನಿಗದಿ ಮಾಡಿದ ಕೇರಳ ಸರ್ಕಾರ, ಸರ್ಜಿಕಲ್ ಮಾಸ್ಕ್‌ 3 ರೂ., ಫೇಸ್‌ಶೀಲ್ಡ್‌ಗೆ 21 ರೂ.ದರ

- Advertisement -
- Advertisement -

ಕೊರೊನಾ ಸೋಂಕು ನಿಯಂತ್ರಣ ಮತ್ತು ರಾಜ್ಯದಲ್ಲಿ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಪರಿಹಾರ ಒದಗಿಸುವಲ್ಲಿ ಮಾದರಿಯಾಗಿರುವ ಕೇರಳ ಸರ್ಕಾರ ಈಗ ಅಗತ್ಯ ವಸ್ತುಗಳಾದ ಮಾಸ್ಕ್, ಸ್ಯಾನಿಟೈಜರ್‌, ಫೇಸ್‌ಶೀಲ್ಡ್‌ಗೆ ಸೇರಿದಂತೆ ಹಲವು ವಸ್ತುಗಳಿಗೆ ಗರಿಷ್ಠ ದರ ನಿಗದಿ ಮಾಡಿ, ಜನರ ಪ್ರಶಂಸೆಗೆ ಪಾತ್ರವಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ಕಾರ, ಕೇರಳ ಅಗತ್ಯ ವಸ್ತುಗಳ ನಿಯಂತ್ರಣ ಕಾಯ್ದೆ- 1986 ಕಾಯ್ದೆ ಜಾರಿಗೆ ತಂದಿದೆ. ಕೊರೊನಾ ಉಲ್ಬಣವಾಗುತ್ತಿರುವ ಈ ಸಮಯದಲ್ಲಿ ಅಗತ್ಯ ವಸ್ತುಗಳು ಜನರ ಕೈಗೆಟುಕುವಂತೆ ಮಾಡಲು ಈ ಕಾಯ್ದೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ನ್ಯಾಯಾಧೀಶರು ಸರ್ವಜ್ಞರಲ್ಲ ಎಂಬ ಸಿಟಿ ರವಿ ಹೇಳಿಕೆಗೆ ವ್ಯಾಪಕ ಆಕ್ರೋಶ: ಮತ್ತೆ ಹೇಳಿಕೆ ಸಮರ್ಥಿಸಿಕೊಂಡ ಮಾಜಿ ಸಚಿವ!

ಕೇರಳ ಸರ್ಕಾರ ಹೊರಡಿಸಿರುವ ಅಗತ್ಯ ವಸ್ತುಗಳ ಗರಿಷ್ಠ ದರ ಪಟ್ಟಿ ಹೀಗಿದೆ.

ಪಿಪಿಣ ಕಿಟ್- 273 ರೂಪಾಯಿ

ಎನ್‌95 ಮಾಸ್ಕ್- 22 ರೂಪಾಯಿ,

ಟ್ರಿಪಲ್ ಲೇಯರ್ ಮಾಸ್ಕ್- 3 ರೂಪಾಯಿ 90 ಪೈಸೆ,

ಎನ್‌ಆರ್‌ಬಿ ಮಾಸ್ಕ್- 80 ರೂಪಾಯಿ

ಫೇಸ್‌ಶೀಲ್ಡ್ – 21 ರೂಪಾಯಿ

ಡಿಸ್‌ಪೋಸಬಲ್ ಏಪ್ರಾನ್‌- 12 ರೂಪಾಯಿ,

ಸರ್ಜಿಕಲ್ ಗೌನ್- 65 ರೂಪಾಯಿ,

ಗ್ಲೌಸ್- 5 ರೂಪಾಯಿ 75 ಪೈಸೆ

 

ಅರ್ಧ ಲೀಟರ್‌ ಹ್ಯಾಂಡ್ ಸ್ಯಾನಿಟೈಸರ್ 192 ರೂ, 200 ಎಂಎಲ್‌ಗೆ 98 ರೂಪಾಯಿ ಮತ್ತು 100 ಎಂಎಲ್‌ಗೆ 55 ರೂಪಾಯಿ
ಆಕ್ಸಿಜನ್ ಮಾಸ್ಕ್ – 54 ರೂಪಾಯಿ
ಪಲ್ಸ್ ಆಕ್ಸಿಮೀಟರ್ – 1500 ರೂಪಾಯಿ

ದರ ಪಟ್ಟಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಟ್ವಿಟರ್‌ ಖಾತೆಯಲ್ಲಿ ಜನರಿಗೆ ತಿಳಿಸಿದ್ದಾರೆ. ಜೊತೆಗೆ ಮೇ 23 ರವರೆಗೆ ಲಾಕ್‌ಡೌನ್ ವಿಸ್ತರಿಸಿರುವ ಕೇರಳದಲ್ಲಿ ಜೂನ್ ತಿಂಗಳಲ್ಲೂ ದಿನಸಿ ಕಿಟ್ ವಿತರಣೆ ಮುಂದುವರೆಯಲಿದೆ ಎಂದಿದ್ದಾರೆ.

“ಲಾಕ್‌ಡೌನ್ ಅನ್ನು ಮೇ 23 ರವರೆಗೆ ವಿಸ್ತರಿಸಲಾಗಿದೆ .ತಿರುವನಂತಪುರಂ, ಎರ್ನಾಕುಲಂ, ತ್ರಿಶೂರ್, ಮಲಪ್ಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ವಿಧಿಸಲಾಗಿದೆ. ಜೂನ್‌ನಲ್ಲಿಯೂ ಉಚಿತ ದಿನಸಿ ಕಿಟ್‌ಗಳನ್ನೂ ವಿತರಿಸಲಾಗುತ್ತದೆ.  823.23 ಕೋಟಿ ಹಣವನ್ನು ಮೇ ತಿಂಗಳಲ್ಲಿ ವೆಲ್‌ಫೇರ್‌ ಪಿಂಚಣಿಗಳಾಗಿ ವಿತರಿಸಲಾಗುವುದು. ವೆಲ್‌ಫೇರ್‌ ಬೋರ್ಡ್ ಸದಸ್ಯರಿಗೆ 1,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ” ಎಂದಿದ್ದಾರೆ.


ಇದನ್ನೂ ಓದಿ: ತೌಕ್ತೆ ಚಂಡಮಾರುತ ಭೀತಿ: ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ NDRF ತಂಡ ನಿಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...