Homeರಾಜಕೀಯಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

- Advertisement -
- Advertisement -

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಬಂಡಾಯ ಸಚಿವ ಏಕನಾಥ್ ಶಿಂಧೆ ಇಬ್ಬರೂ ತೀವ್ರ ಹಗ್ಗ ಜಗ್ಗಾಟದಲ್ಲಿ ತೊಡಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ. ಮಹಾವಿಕಸ್ ಅಘಾಡಿ ಸರ್ಕಾರದ ಮೂರು ಮೈತ್ರಿ ಪಕ್ಷಗಳು ತಮ್ಮ ಬೆಂಬಲಿಗ ಶಾಸಕರನ್ನು ರಕ್ಷಿಸಲು ನಾಯಕರ ನಡುವೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.

ಮಹರಾಷ್ಟ್ರದ ರಾಜಕಾರಣದಲ್ಲಿ ಇಲ್ಲಿವರೆಗೆ ಏನಾಯಿತು ಎಂಬುವುದು ಇಲ್ಲಿದೆ:

  • ಮೈತ್ರಿ ಸರ್ಕಾರದ ಸಚಿವ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಜೂನ್ 20ರ ಸೋಮವಾರದಂದು ಹಲವಾರು ಶಿವಸೇನೆ ಶಾಸಕರೊಂದಿಗೆ ಗುಜರಾತ್‌ನ ಸೂರತ್‌ನಲ್ಲಿರುವ ರೆಸಾರ್ಟ್‌‌ಗೆ ತೆರಳಿದ್ದರು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    ₹100 ₹200 ₹500 ₹1000 Others
  • ಶಿವಸೇನೆ ಮುಖ್ಯಸ್ಥ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ತಮ್ಮ ಉಳಿದ ಶಾಸಕರನ್ನು ಉಳಿಸಿಕೊಳ್ಳಲು ಮುಂದಾದರೂ, ಈ ಬೆಳವಣಿಗೆ ನಡೆದಿದೆ.
  • ಇದೇ ವೇಳೆ ಪಕ್ಷವು ಏಕನಾಥ್ ಶಿಂಧೆ ಮತ್ತು ಇತರ ಬಂಡಾಯ ಶಾಸಕರೊಂದಿಗೆ ಸಂಪರ್ಕದಲ್ಲಿದೆ, ಅವರು ಪಕ್ಷಕ್ಕೆ ಮರಳುತ್ತಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರದವರೆಗೆ ಹೇಳುತ್ತಿದ್ದರು.
  • ರಾವತ್‌ ಅವರ ಈ ಹೇಳಿಕೆಯನ್ನು ತಳ್ಳಿಹಾಕಿದ ಶಿಂಧೆ, ಬೆಂಬಲಿತ ಶಾಸಕರನ್ನು ಹೊರತುಪಡಿಸಿ ಬೇರೆ ಯಾರೊಂದಿಗೂ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದರು.
  • ಶಿವಸೇನೆಯು ಸೂರತ್ ರೆಸಾರ್ಟ್‌ಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದಂತೆ, ಎಲ್ಲಾ ಬಂಡಾಯ ಶಾಸಕರನ್ನು ಸೂರತ್‌ನಿಂದ ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂನ ಗುವಾಹಟಿಯಲ್ಲಿರುವ ಹೋಟೆಲ್‌ಗೆ ಶಿಂಧೆ ಬುಧವಾರ ಸ್ಥಳಾಂತರಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

  • ಬೆಳಗ್ಗೆ 7 ಗಂಟೆ ಸುಮಾರಿಗೆ ಬಂಡಾಯ ಶಾಸಕರು ಗುವಾಹಟಿಗೆ ಆಗಮಿಸುವ ಮುನ್ನವೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದರು.
  • ಶಿವಸೇನೆಯ 55 ಶಾಸಕರ ಪೈಕಿ 42 ಶಾಸಕರ ಬೆಂಬಲ ತಮಗೆ ಇದೆ ಎಂದು ಶಿಂಧೆ ಪ್ರತಿಪಾದಿಸಿದ್ದಾರೆ.
  • ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲವನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅವರಿಗೆ ಕನಿಷ್ಠ 37 ಶಾಸಕರ ಬೆಂಬಲ ಬೇಕಾಗುತ್ತದೆ.
  • ಬುಧವಾರ ಸಂಜೆ ಶಿವಸೇನೆಯ ಇಬ್ಬರು ಸೇರಿದಂತೆ ಮತ್ತೆ ನಾಲ್ವರು ಶಾಸಕರು ಶಿಂಧೆ ಪಾಳಯಕ್ಕೆ ಸೇರಿದ್ದಾರೆ. ಇನ್ನೂ ಮೂವರು ಬಂಡಾಯ ಪಾಳಯ ಸೇರುವ ಸಾಧ್ಯತೆ ಇತ್ತು.
  • ಮಹಾವಿಕಾಸ್ ಅಘಾಡಿ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಾವು ಶಿವಸೇನೆಯೊಂದಿಗೆ ಇದ್ದೇವೆ ಎಂದು ಹೇಳಿದ್ದಾರೆ. ಆದರೆ ಬಂಡಾಯವು ಪಕ್ಷದ ಆಂತರಿಕ ವಿಷಯವಾಗಿದ್ದು, ಅದನ್ನು ಪಕ್ಷವೇ ಪರಿಹರಿಸಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

  • ಬಿಜೆಪಿ ತಾನು ಅಧಿಕಾರ ಹಿಡಿಯಲು ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ರೂಪಿಸಿದೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿಪಿ ದೂಷಿಸಿವೆ.
  • ಬಿಕ್ಕಟ್ಟಿನ ಮಧ್ಯೆಯೆ, ಶಿವಸೇನೆ ಮಂಗಳವಾರದಂದು ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿದೆ.
  • ಆದರೆ ಗುವಾಹಟಿಯಲ್ಲಿರುವ ಬಂಡಾಯ ಶಿವಸೇನಾ ಶಾಸಕರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಗೆ ಪತ್ರ ಬರೆದು, ಏಕನಾಥ್ ಶಿಂಧೆ ಇನ್ನೂ ಕೂಡಾ ಶಾಸಕಾಂಗ ಪಕ್ಷದ ನಾಯಕ ಎಂದು ಪ್ರತಿಪಾದಿಸಿದ್ದಾರೆ.
  • ಉದ್ಧವ್ ಠಾಕ್ರೆ ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹದ ನಡುವೆಯೆ, “ಬಂಡಾಯ ಶಿವಸೇನೆ ಶಾಸಕರು ಬಯಸಿದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಉದ್ಧವ್‌‌ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

  • “ನಾನು ನನ್ನ ರಾಜೀನಾಮೆ ಪತ್ರವನ್ನು ಸಿದ್ಧಪಡಿಸುತ್ತಿದ್ದೇನೆ, ಬಂಡಾಯವೆದ್ದಿರುವವರು ಇಲ್ಲಿಗೆ ಬರಬೇಕು, ಈ ಪತ್ರವನ್ನು ತೆಗೆದುಕೊಂಡು ರಾಜ್ಯಪಾಲರಿಗೆ ಸಲ್ಲಿಸಬೇಕು” ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
  • ಉದ್ಧವ್‌ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕೆಲವೇ ಗಂಟೆಗಳ ನಂತರ, ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದರು.
  • ಉದ್ಧವ್ ಠಾಕ್ರೆ ಈಗ ಉಪನಗರ ಬಾಂದ್ರಾದಲ್ಲಿರುವ ತಮ್ಮ ಕುಟುಂಬದ ನಿವಾಸ ಮಾತೋಶ್ರೀಗೆ ತೆರಳಿದ್ದಾರೆ.
  • ಗುರುವಾರ ಮುಂಜಾನೆ, ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಅಗತ್ಯವಾದ ಶಾಸಕರ ಸಂಖ್ಯೆಯನ್ನು ಏಕನಾಥ್ ಶಿಂಧೆ ಒಟ್ಟುಗೂಡಿಸಿದಂತಿದೆ. ಹೆಚ್ಚಿನ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್‌ ರಾಡಿಸನ್ ಬ್ಲೂ‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಸರ್ಕಾರ ಉಳಿಸಲು ಬೇಕಾದ ಶಾಸಕರ ಸಂಖ್ಯೆ

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಬಲವು 287. ಹೀಗಾಗಿ ಸದನದಲ್ಲಿ ವಿಶ್ವಾಸ ಮತದ ಸಂದರ್ಭದಲ್ಲಿ ಅಗತ್ಯವಿರುವ ಬಹುಮತವು 144 ಆಗಿದೆ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಆಡಳಿತ ಒಕ್ಕೂಟವು ಪ್ರಸ್ತುತ 169 ಸ್ಥಾನಗಳನ್ನು ಹೊಂದಿದೆ.

ಒಂದು ವೇಳೆ ಶಿಂಧೆ ನೇತೃತ್ವದ ಶಾಸಕರು ರಾಜೀನಾಮೆ ನೀಡಿದರೆ, ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ. ಶಿವಸೇನೆಯು 55 ಶಾಸಕರನ್ನು ಹೊಂದಿದ್ದು, ಪಕ್ಷಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಲು ಉದ್ಧವ್ ಠಾಕ್ರೆ ಅವರ ಪರವಾಗಿ ಕನಿಷ್ಠ 37 ಶಾಸಕರು ಇರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...