Homeರಾಜಕೀಯಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

- Advertisement -
- Advertisement -

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಬಂಡಾಯ ಸಚಿವ ಏಕನಾಥ್ ಶಿಂಧೆ ಇಬ್ಬರೂ ತೀವ್ರ ಹಗ್ಗ ಜಗ್ಗಾಟದಲ್ಲಿ ತೊಡಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ ಭವಿಷ್ಯ ಡೋಲಾಯಮಾನವಾಗಿದೆ. ಮಹಾವಿಕಸ್ ಅಘಾಡಿ ಸರ್ಕಾರದ ಮೂರು ಮೈತ್ರಿ ಪಕ್ಷಗಳು ತಮ್ಮ ಬೆಂಬಲಿಗ ಶಾಸಕರನ್ನು ರಕ್ಷಿಸಲು ನಾಯಕರ ನಡುವೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ.

ಮಹರಾಷ್ಟ್ರದ ರಾಜಕಾರಣದಲ್ಲಿ ಇಲ್ಲಿವರೆಗೆ ಏನಾಯಿತು ಎಂಬುವುದು ಇಲ್ಲಿದೆ:

  • ಮೈತ್ರಿ ಸರ್ಕಾರದ ಸಚಿವ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ಜೂನ್ 20ರ ಸೋಮವಾರದಂದು ಹಲವಾರು ಶಿವಸೇನೆ ಶಾಸಕರೊಂದಿಗೆ ಗುಜರಾತ್‌ನ ಸೂರತ್‌ನಲ್ಲಿರುವ ರೆಸಾರ್ಟ್‌‌ಗೆ ತೆರಳಿದ್ದರು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    ₹100 ₹200 ₹500 ₹1000 Others
  • ಶಿವಸೇನೆ ಮುಖ್ಯಸ್ಥ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ತಮ್ಮ ಉಳಿದ ಶಾಸಕರನ್ನು ಉಳಿಸಿಕೊಳ್ಳಲು ಮುಂದಾದರೂ, ಈ ಬೆಳವಣಿಗೆ ನಡೆದಿದೆ.
  • ಇದೇ ವೇಳೆ ಪಕ್ಷವು ಏಕನಾಥ್ ಶಿಂಧೆ ಮತ್ತು ಇತರ ಬಂಡಾಯ ಶಾಸಕರೊಂದಿಗೆ ಸಂಪರ್ಕದಲ್ಲಿದೆ, ಅವರು ಪಕ್ಷಕ್ಕೆ ಮರಳುತ್ತಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರದವರೆಗೆ ಹೇಳುತ್ತಿದ್ದರು.
  • ರಾವತ್‌ ಅವರ ಈ ಹೇಳಿಕೆಯನ್ನು ತಳ್ಳಿಹಾಕಿದ ಶಿಂಧೆ, ಬೆಂಬಲಿತ ಶಾಸಕರನ್ನು ಹೊರತುಪಡಿಸಿ ಬೇರೆ ಯಾರೊಂದಿಗೂ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದರು.
  • ಶಿವಸೇನೆಯು ಸೂರತ್ ರೆಸಾರ್ಟ್‌ಗೆ ಮಧ್ಯವರ್ತಿಗಳನ್ನು ಕಳುಹಿಸುತ್ತಿದ್ದಂತೆ, ಎಲ್ಲಾ ಬಂಡಾಯ ಶಾಸಕರನ್ನು ಸೂರತ್‌ನಿಂದ ಮತ್ತೊಂದು ಬಿಜೆಪಿ ಆಡಳಿತದ ರಾಜ್ಯವಾದ ಅಸ್ಸಾಂನ ಗುವಾಹಟಿಯಲ್ಲಿರುವ ಹೋಟೆಲ್‌ಗೆ ಶಿಂಧೆ ಬುಧವಾರ ಸ್ಥಳಾಂತರಿಸಿದರು.

ಇದನ್ನೂ ಓದಿ: ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣ- ಸಾವಿಗೆ ಕಾರಣರಾದ 13 ಮಂದಿಯ ಬಂಧನ

  • ಬೆಳಗ್ಗೆ 7 ಗಂಟೆ ಸುಮಾರಿಗೆ ಬಂಡಾಯ ಶಾಸಕರು ಗುವಾಹಟಿಗೆ ಆಗಮಿಸುವ ಮುನ್ನವೇ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಹೋಟೆಲ್‌ನಲ್ಲಿ ಕಾಣಿಸಿಕೊಂಡಿದ್ದರು.
  • ಶಿವಸೇನೆಯ 55 ಶಾಸಕರ ಪೈಕಿ 42 ಶಾಸಕರ ಬೆಂಬಲ ತಮಗೆ ಇದೆ ಎಂದು ಶಿಂಧೆ ಪ್ರತಿಪಾದಿಸಿದ್ದಾರೆ.
  • ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಪಕ್ಷದ ಮೂರನೇ ಎರಡರಷ್ಟು ಶಾಸಕರ ಬೆಂಬಲವನ್ನು ಹೊಂದಿರಬೇಕಾಗುತ್ತದೆ. ಹೀಗಾಗಿ ಅವರಿಗೆ ಕನಿಷ್ಠ 37 ಶಾಸಕರ ಬೆಂಬಲ ಬೇಕಾಗುತ್ತದೆ.
  • ಬುಧವಾರ ಸಂಜೆ ಶಿವಸೇನೆಯ ಇಬ್ಬರು ಸೇರಿದಂತೆ ಮತ್ತೆ ನಾಲ್ವರು ಶಾಸಕರು ಶಿಂಧೆ ಪಾಳಯಕ್ಕೆ ಸೇರಿದ್ದಾರೆ. ಇನ್ನೂ ಮೂವರು ಬಂಡಾಯ ಪಾಳಯ ಸೇರುವ ಸಾಧ್ಯತೆ ಇತ್ತು.
  • ಮಹಾವಿಕಾಸ್ ಅಘಾಡಿ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಾವು ಶಿವಸೇನೆಯೊಂದಿಗೆ ಇದ್ದೇವೆ ಎಂದು ಹೇಳಿದ್ದಾರೆ. ಆದರೆ ಬಂಡಾಯವು ಪಕ್ಷದ ಆಂತರಿಕ ವಿಷಯವಾಗಿದ್ದು, ಅದನ್ನು ಪಕ್ಷವೇ ಪರಿಹರಿಸಬೇಕಾಗಿದೆ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಸಂಕಷ್ಟ: ಸರ್ಕಾರದ ಅಳಿವು-ಉಳಿವಿನ ನಂಬರ್ ಗೇಮ್ ಹೀಗಿದೆ

  • ಬಿಜೆಪಿ ತಾನು ಅಧಿಕಾರ ಹಿಡಿಯಲು ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟನ್ನು ರೂಪಿಸಿದೆ ಎಂದು ಕಾಂಗ್ರೆಸ್ ಮತ್ತು ಎನ್‌ಸಿಪಿ ದೂಷಿಸಿವೆ.
  • ಬಿಕ್ಕಟ್ಟಿನ ಮಧ್ಯೆಯೆ, ಶಿವಸೇನೆ ಮಂಗಳವಾರದಂದು ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿದೆ.
  • ಆದರೆ ಗುವಾಹಟಿಯಲ್ಲಿರುವ ಬಂಡಾಯ ಶಿವಸೇನಾ ಶಾಸಕರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿಗೆ ಪತ್ರ ಬರೆದು, ಏಕನಾಥ್ ಶಿಂಧೆ ಇನ್ನೂ ಕೂಡಾ ಶಾಸಕಾಂಗ ಪಕ್ಷದ ನಾಯಕ ಎಂದು ಪ್ರತಿಪಾದಿಸಿದ್ದಾರೆ.
  • ಉದ್ಧವ್ ಠಾಕ್ರೆ ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೋಹದ ನಡುವೆಯೆ, “ಬಂಡಾಯ ಶಿವಸೇನೆ ಶಾಸಕರು ಬಯಸಿದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ” ಎಂದು ಉದ್ಧವ್‌‌ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಬಂಡಾಯ ಶಾಸಕರಿಗೆ ಸಂಜೆ 5 ಗಂಟೆವರೆಗೆ ಗಡುವು ನೀಡಿದ ಉದ್ಧವ್ ಸರ್ಕಾರ

  • “ನಾನು ನನ್ನ ರಾಜೀನಾಮೆ ಪತ್ರವನ್ನು ಸಿದ್ಧಪಡಿಸುತ್ತಿದ್ದೇನೆ, ಬಂಡಾಯವೆದ್ದಿರುವವರು ಇಲ್ಲಿಗೆ ಬರಬೇಕು, ಈ ಪತ್ರವನ್ನು ತೆಗೆದುಕೊಂಡು ರಾಜ್ಯಪಾಲರಿಗೆ ಸಲ್ಲಿಸಬೇಕು” ಎಂದು ಉದ್ಧವ್‌ ಠಾಕ್ರೆ ಹೇಳಿದ್ದಾರೆ.
  • ಉದ್ಧವ್‌ ಠಾಕ್ರೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಕೆಲವೇ ಗಂಟೆಗಳ ನಂತರ, ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದರು.
  • ಉದ್ಧವ್ ಠಾಕ್ರೆ ಈಗ ಉಪನಗರ ಬಾಂದ್ರಾದಲ್ಲಿರುವ ತಮ್ಮ ಕುಟುಂಬದ ನಿವಾಸ ಮಾತೋಶ್ರೀಗೆ ತೆರಳಿದ್ದಾರೆ.
  • ಗುರುವಾರ ಮುಂಜಾನೆ, ಪಕ್ಷಾಂತರ ವಿರೋಧಿ ಕಾನೂನನ್ನು ತಪ್ಪಿಸಲು ಅಗತ್ಯವಾದ ಶಾಸಕರ ಸಂಖ್ಯೆಯನ್ನು ಏಕನಾಥ್ ಶಿಂಧೆ ಒಟ್ಟುಗೂಡಿಸಿದಂತಿದೆ. ಹೆಚ್ಚಿನ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್‌ ರಾಡಿಸನ್ ಬ್ಲೂ‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಸರ್ಕಾರ ಉಳಿಸಲು ಬೇಕಾದ ಶಾಸಕರ ಸಂಖ್ಯೆ

ಮಹಾರಾಷ್ಟ್ರ ವಿಧಾನಸಭೆಯ ಒಟ್ಟು ಬಲವು 287. ಹೀಗಾಗಿ ಸದನದಲ್ಲಿ ವಿಶ್ವಾಸ ಮತದ ಸಂದರ್ಭದಲ್ಲಿ ಅಗತ್ಯವಿರುವ ಬಹುಮತವು 144 ಆಗಿದೆ. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಆಡಳಿತ ಒಕ್ಕೂಟವು ಪ್ರಸ್ತುತ 169 ಸ್ಥಾನಗಳನ್ನು ಹೊಂದಿದೆ.

ಒಂದು ವೇಳೆ ಶಿಂಧೆ ನೇತೃತ್ವದ ಶಾಸಕರು ರಾಜೀನಾಮೆ ನೀಡಿದರೆ, ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಗುತ್ತದೆ. ಶಿವಸೇನೆಯು 55 ಶಾಸಕರನ್ನು ಹೊಂದಿದ್ದು, ಪಕ್ಷಾಂತರ ವಿರೋಧಿ ಕಾನೂನನ್ನು ಜಾರಿಗೊಳಿಸಲು ಉದ್ಧವ್ ಠಾಕ್ರೆ ಅವರ ಪರವಾಗಿ ಕನಿಷ್ಠ 37 ಶಾಸಕರು ಇರಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...