Homeಕರ್ನಾಟಕಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

"ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ"

- Advertisement -
- Advertisement -

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಯಡಿಯೂರಪ್ಪನವರ ಸರ್ಕಾರ, ಮಲೆನಾಡನ್ನು ಬೋಳುಗುಡ್ಡವಾಗಿಸಲು ಪ್ರಯತ್ನಿಸುತ್ತಿದೆ ಎಂದು ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ ಆರೋಪಿಸಿದೆ. ಸರ್ಕಾರಿ ಅರಣ್ಯ ಭೂಮಿಯನ್ನು ಕಾನೂನುಬಾಹಿರವಾಗಿ ಖಾಸಗೀಕರಣಗೊಳಿಸಿ ಅದರ ಲಾಭವನ್ನು ಖಾಸಗಿ ಉದ್ಯಮಿಗಳಿಗೆ ನೀಡಲು ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದಿಂದ ಜನವರಿ 7 ರಂದು ಸಿಸಿಎಫ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಒಕ್ಕೂಟದ ಮುಖ್ಯಸ್ಥರಾದ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೈಸೂರು ಪೇಪರ್ ಮಿಲ್ಸ್ (MPM) ಅನ್ನು ಖಾಸಗೀಕರಣ ಮಾಡುವುದರ ಜತೆಗೆ MPM ನೆಡುತೋಪಿನ ಅರಣ್ಯ ಇಲಾಖೆಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

“ನಮ್ಮದು ಮಲೆನಾಡಿನ ಕಾಡು, ಕಾಡಿನೊಂದಿಗೆ ಬದುಕುವ ಜನ, ಕಾಡುಪ್ರಾಣಿಗಳು, ಸಸ್ಯ, ಹೊಳೆ-ಹಳ್ಳ, ನದಿ-ಕಣಿವೆಗಳಿಗೆ ಸಂಚಕಾರ ತಂದಿರುವ ಅರಣ್ಯ ಖಾಸಗೀಕರಣದ ಹುನ್ನಾರದ ವಿರುದ್ಧದ ಜನಹೋರಾಟ. ಕಾಡನ್ನು ಅದರ ಪಾಡಿಗೆ ಬಿಡಿ, ಕಾಡಿನಂಚಿನ ಮಲೆನಾಡಿನ ಸಕಲ ಜೀವ ಚರಾಚರಗಳ ಬದುಕನ್ನು ನಾಶ ಮಾಡಬೇಡಿ ಎಂದು ಸರ್ಕಾರಕ್ಕೆ ಮಲೆನಾಡಿಗರು ನೀಡುತ್ತಿರುವ ಎಚ್ಚರಿಕೆಯ ಹೋರಾಟ. ಕಾಡಿನ ಹೆಸರಲ್ಲಿ ದಂಧೆ ಮಾಡುವ ದಂಧೆಕೋರರ ವಿರುದ್ಧದ ಜನದನಿ” ಎಂದು ಹೇಳಿದರು.

ಕಳೆದ ಹಲವು ದಿನಗಳಿಂದ ಈ ಹೋರಾಟವನ್ನು ಸಂಘಟಿಸುತ್ತಿರುವ ಈ ಒಕ್ಕೂಟಕ್ಕೆ ನಾಡಿನ ಹತ್ತಾರು ಚಿಂತಕರು ಸಾಹಿತಿಗಳು, ತಜ್ಞರು ಬೆಂಬಲ ನೀಡಿದ್ದಾರೆ.

 

“ಸುಮಾರು 40 ವರ್ಷಗಳ ಹಿಂದೆ MPM ಕಾಗದ ಕಾರ್ಖಾನೆಯನ್ನು ಸರ್ಕಾರ ಆರಂಭಿಸಿದಾಗ ಅದಕ್ಕೆ ಕಚ್ಚಾವಸ್ತು ಸರಬರಾಜಿಗಾಗಿ ಮಲೆನಾಡಿನ ದಟ್ಟ ಕಾಡಿನ 32,000 ಹೆಕ್ಟೇರ್ (ಅಂದಾಜು 80 ಸಾವಿರ ಎಕರೆ) ಅರಣ್ಯ ಭೂಮಿಯನ್ನು 40 ವರ್ಷದ ಲೀಸ್ (ಗುತ್ತಿಗೆ) ಆಧಾರದ ಮೇಲೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಮೇಲೆ ಒಂದು ವೇಳೆ, ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಟ್ಟರೂ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಕೊಡಬೇಕು ಎಂದು ಲೀಸಿನಲ್ಲಿ ಸರ್ಕಾರವೇ ಷರತ್ತು ಹಾಕಿತ್ತು”

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಆ ಭೂಮಿಯಲ್ಲಿ ಬೆಳೆದುನಿಂತಿದ್ದ ಸಹಜ ಕಾಡನ್ನು ನಾಶಮಾಡಿದ ಕಂಪನಿ, ಅಲ್ಲಿ ಮಲೆನಾಡಿನ ಅಂತರ್ಜಲ ಮತ್ತು ಒಟ್ಟಾರೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಹಾಗೂ ನೀಲಗಿರಿ ಬೆಳೆದಿದೆ. ಸಾವಿರಾರು ಎಕರೆ ಪ್ರದೇಶದ ಕಾಡಿನ ಜಾಗದಲ್ಲಿ ಈ ವಿದೇಶಿ ತಳಿ ಮರಗಳನ್ನು ಬೆಳೆದ ಕಾರಣ ಮಲೆನಾಡಿನ ಪರಿಸರ, ವನ್ಯಜೀವಿ, ಜನಜೀವನ, ಹವಾಮಾನ ಮತ್ತು ನದಿ ಕಣಿವೆಯ ಜೊತೆ ಅಂತರ್ಜಲ ಮಟ್ಟದ ಮೇಲೆಯೂ ಸಾಕಷ್ಟು ಪರಿಣಾಮಗಳಾಗಿವೆ. ಈ ನಡುವೆ ನಷ್ಟದ ಸುಳಿಗೆ ಸಿಲುಕಿ MPM ಕಂಪನಿ ಮುಚ್ಚಿಹೋಗಿ ವರ್ಷಗಳೇ ಉರುಳಿವೆ.

ಈಗ, ಭೂಮಿಯ ಲೀಸ್ ಅವಧಿ ಮುಗಿದಿದೆ. ಆದರೆ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ! ಏಕೆಂದರೆ; ಈ ಅಪಾರ ಪ್ರಮಾಣದ ಅಮೂಲ್ಯ ಭೂಮಿಯ ಮೇಲೆ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರ ಕಣ್ಣು ಬಿದ್ದಿದೆ. ಕಾರ್ಖಾನೆಯನ್ನು ಪುನರಾರಂಭಿಸುವ ನೆಪದಲ್ಲಿ ಮಲೆನಾಡಿನ ಈ ಭೂಮಿಯನ್ನು ತಮ್ಮ ವಶಕ್ಕೆ ಪಡೆದು ಅಲ್ಲಿ ವಾಣಿಜ್ಯ ಅರಣ್ಯಬೆಳೆ ಬೆಳೆಯುವ ದಂಧೆ ನಡೆಸಲು ಅವರು ಸಂಚು ಹೂಡಿದ್ದಾರೆ. ಅದಕ್ಕೆ ತಕ್ಕಂತೆ ಅರಣ್ಯ ಇಲಾಖೆ, ಸರ್ಕಾರ ಮತ್ತು ಸರ್ಕಾರದ ಚುಕ್ಕಾಣಿ ಹಿಡಿದವರೂ ಅವರಿಗೆ ಸಾಥ್ ನೀಡುತ್ತಿದ್ದಾರೆ. ಕಾರ್ಪೊರೇಟ್ ಕಂಪನಿಗಳೊಂದಿಗೆ ರಾಜಕಾರಣಿಗಳೂ, ಅಧಿಕಾರಿಗಳು ಕೈಜೋಡಿಸಿದ್ದಾರೆ.

ಇದನ್ನೂ ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಈ ನಾಡದ್ರೋಹಿ, ಜನದ್ರೋಹಿ ವಿಷವರ್ತುಲ, ಇಡೀ ಮಲೆನಾಡಿನ ಅರಣ್ಯ ಪ್ರದೇಶವನ್ನೇ ತಮ್ಮ ಕಬ್ಜಕ್ಕೆ ಪಡೆದು, ಮಲೆನಾಡು ಮಾತ್ರವಲ್ಲದೆ, ಇಡೀ ರಾಜ್ಯಕ್ಕೇ ಶುದ್ಧ ಗಾಳಿ, ನೀರು, ಆಹಾರ ಮೂಲಿಕೆಗಳನ್ನು ನೀಡುವ ಕಾಡನ್ನೇ ಸರ್ವನಾಶ ಮಾಡುವ ಸಂಚು ಹೂಡಿದೆ. ಜಗತ್ತಿನ ಅತ್ಯಂತ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಒಂದಾದ ಪಶ್ಚಿಮ ಘಟ್ಟದ ಸಹ್ಯಾದ್ರಿ ಶ್ರೇಣಿಯನ್ನೇ ತಮ್ಮ ಜಹಗೀರು ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಹೋರಾಟಗಾರರ ಒಕ್ಕೂಟವು ಆರೋಪಿಸಿದೆ.

ವಿರೋಧ ಯಾಕೆ?

ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ. ಅದು ಈಗಾಗಲೇ ವಿವಿಧ ಕಾರಣಗಳಿಂದಾಗಿ ಕರಗುತ್ತಿರುವ ಕಾಡಿಗೆ, ಬತ್ತಿ ಹೋಗಿರುವ ಅಂತರ್ಜಲಕ್ಕೆ, ಮಾಯವಾಗುತ್ತಿರುವ ವನ್ಯಜೀವಿಗಳಿಗೆ ಮತ್ತು ಅಂತಿಮವಾಗಿ ಸಾಕಷ್ಟು ಸಂಕಷ್ಟದಲ್ಲಿರುವ ಮಲೆನಾಡಿನ ನಮ್ಮ-ನಿಮ್ಮೆಲ್ಲರ ಬದುಕಿನ ಅಂತ್ಯವೇ ಆಗಲಿದೆ. ಕಾಡಿನ ನಡುವಿನಲ್ಲಿರುವ ನಮ್ಮ ಮನೆ, ಹೊಲ, ಗದ್ದೆಗಳಿಗೆ ಹೋಗಲೂ ಅವಕಾಶವಾಗದಂತೆ ಖಾಸಗಿ ಕಂಪನಿಗಳ ಬಲಿಷ್ಠ ಬೇಲಿಗಳು ಸುತ್ತುವರಿಯಲಿವೆ. ಅವರ ಅನುಮತಿ ಇಲ್ಲದೆ ನಮ್ಮ ಮನೆಗೆ ನಾನೇ ಹೋಗುವುದು ಕೂಡ ದುಸ್ತರವಾಗಲಿದೆ. ಹಾಗಾಗಿ ವಿರೋಧ. ನಮ್ಮ ಬದುಕಿನ ಮೇಲೆ ಮತ್ತೊಬ್ಬರ ಬೀಗ ಬೀಳುವುದಕ್ಕಾಗಿ ಈ ವಿರೋಧ, ನಮ್ಮ ಕಾಡಿನ ಮೇಲೆ, ಕಾಡಿನ ಜೀವಿಗಳ ಮೇಲೆ, ನಮ್ಮ ಹೊಳೆ-ಹಳ್ಳ-ನದಿ-ಕಣಿವೆಗಳ ಮೇಲೆ ದೊಣ್ಣೆ ನಾಯಕನ ಅಪ್ಪಣೆಯ ತೂಗುಗತ್ತಿ ಬೇಡ ಎಂದು ಈ ವಿರೋಧ! ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...