Homeಕರ್ನಾಟಕಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

"ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ"

- Advertisement -
- Advertisement -

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಯಡಿಯೂರಪ್ಪನವರ ಸರ್ಕಾರ, ಮಲೆನಾಡನ್ನು ಬೋಳುಗುಡ್ಡವಾಗಿಸಲು ಪ್ರಯತ್ನಿಸುತ್ತಿದೆ ಎಂದು ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ ಆರೋಪಿಸಿದೆ. ಸರ್ಕಾರಿ ಅರಣ್ಯ ಭೂಮಿಯನ್ನು ಕಾನೂನುಬಾಹಿರವಾಗಿ ಖಾಸಗೀಕರಣಗೊಳಿಸಿ ಅದರ ಲಾಭವನ್ನು ಖಾಸಗಿ ಉದ್ಯಮಿಗಳಿಗೆ ನೀಡಲು ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದಿಂದ ಜನವರಿ 7 ರಂದು ಸಿಸಿಎಫ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಒಕ್ಕೂಟದ ಮುಖ್ಯಸ್ಥರಾದ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೈಸೂರು ಪೇಪರ್ ಮಿಲ್ಸ್ (MPM) ಅನ್ನು ಖಾಸಗೀಕರಣ ಮಾಡುವುದರ ಜತೆಗೆ MPM ನೆಡುತೋಪಿನ ಅರಣ್ಯ ಇಲಾಖೆಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

“ನಮ್ಮದು ಮಲೆನಾಡಿನ ಕಾಡು, ಕಾಡಿನೊಂದಿಗೆ ಬದುಕುವ ಜನ, ಕಾಡುಪ್ರಾಣಿಗಳು, ಸಸ್ಯ, ಹೊಳೆ-ಹಳ್ಳ, ನದಿ-ಕಣಿವೆಗಳಿಗೆ ಸಂಚಕಾರ ತಂದಿರುವ ಅರಣ್ಯ ಖಾಸಗೀಕರಣದ ಹುನ್ನಾರದ ವಿರುದ್ಧದ ಜನಹೋರಾಟ. ಕಾಡನ್ನು ಅದರ ಪಾಡಿಗೆ ಬಿಡಿ, ಕಾಡಿನಂಚಿನ ಮಲೆನಾಡಿನ ಸಕಲ ಜೀವ ಚರಾಚರಗಳ ಬದುಕನ್ನು ನಾಶ ಮಾಡಬೇಡಿ ಎಂದು ಸರ್ಕಾರಕ್ಕೆ ಮಲೆನಾಡಿಗರು ನೀಡುತ್ತಿರುವ ಎಚ್ಚರಿಕೆಯ ಹೋರಾಟ. ಕಾಡಿನ ಹೆಸರಲ್ಲಿ ದಂಧೆ ಮಾಡುವ ದಂಧೆಕೋರರ ವಿರುದ್ಧದ ಜನದನಿ” ಎಂದು ಹೇಳಿದರು.

ಕಳೆದ ಹಲವು ದಿನಗಳಿಂದ ಈ ಹೋರಾಟವನ್ನು ಸಂಘಟಿಸುತ್ತಿರುವ ಈ ಒಕ್ಕೂಟಕ್ಕೆ ನಾಡಿನ ಹತ್ತಾರು ಚಿಂತಕರು ಸಾಹಿತಿಗಳು, ತಜ್ಞರು ಬೆಂಬಲ ನೀಡಿದ್ದಾರೆ.

 

“ಸುಮಾರು 40 ವರ್ಷಗಳ ಹಿಂದೆ MPM ಕಾಗದ ಕಾರ್ಖಾನೆಯನ್ನು ಸರ್ಕಾರ ಆರಂಭಿಸಿದಾಗ ಅದಕ್ಕೆ ಕಚ್ಚಾವಸ್ತು ಸರಬರಾಜಿಗಾಗಿ ಮಲೆನಾಡಿನ ದಟ್ಟ ಕಾಡಿನ 32,000 ಹೆಕ್ಟೇರ್ (ಅಂದಾಜು 80 ಸಾವಿರ ಎಕರೆ) ಅರಣ್ಯ ಭೂಮಿಯನ್ನು 40 ವರ್ಷದ ಲೀಸ್ (ಗುತ್ತಿಗೆ) ಆಧಾರದ ಮೇಲೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಮೇಲೆ ಒಂದು ವೇಳೆ, ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಟ್ಟರೂ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಕೊಡಬೇಕು ಎಂದು ಲೀಸಿನಲ್ಲಿ ಸರ್ಕಾರವೇ ಷರತ್ತು ಹಾಕಿತ್ತು”

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಆ ಭೂಮಿಯಲ್ಲಿ ಬೆಳೆದುನಿಂತಿದ್ದ ಸಹಜ ಕಾಡನ್ನು ನಾಶಮಾಡಿದ ಕಂಪನಿ, ಅಲ್ಲಿ ಮಲೆನಾಡಿನ ಅಂತರ್ಜಲ ಮತ್ತು ಒಟ್ಟಾರೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಹಾಗೂ ನೀಲಗಿರಿ ಬೆಳೆದಿದೆ. ಸಾವಿರಾರು ಎಕರೆ ಪ್ರದೇಶದ ಕಾಡಿನ ಜಾಗದಲ್ಲಿ ಈ ವಿದೇಶಿ ತಳಿ ಮರಗಳನ್ನು ಬೆಳೆದ ಕಾರಣ ಮಲೆನಾಡಿನ ಪರಿಸರ, ವನ್ಯಜೀವಿ, ಜನಜೀವನ, ಹವಾಮಾನ ಮತ್ತು ನದಿ ಕಣಿವೆಯ ಜೊತೆ ಅಂತರ್ಜಲ ಮಟ್ಟದ ಮೇಲೆಯೂ ಸಾಕಷ್ಟು ಪರಿಣಾಮಗಳಾಗಿವೆ. ಈ ನಡುವೆ ನಷ್ಟದ ಸುಳಿಗೆ ಸಿಲುಕಿ MPM ಕಂಪನಿ ಮುಚ್ಚಿಹೋಗಿ ವರ್ಷಗಳೇ ಉರುಳಿವೆ.

ಈಗ, ಭೂಮಿಯ ಲೀಸ್ ಅವಧಿ ಮುಗಿದಿದೆ. ಆದರೆ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ! ಏಕೆಂದರೆ; ಈ ಅಪಾರ ಪ್ರಮಾಣದ ಅಮೂಲ್ಯ ಭೂಮಿಯ ಮೇಲೆ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರ ಕಣ್ಣು ಬಿದ್ದಿದೆ. ಕಾರ್ಖಾನೆಯನ್ನು ಪುನರಾರಂಭಿಸುವ ನೆಪದಲ್ಲಿ ಮಲೆನಾಡಿನ ಈ ಭೂಮಿಯನ್ನು ತಮ್ಮ ವಶಕ್ಕೆ ಪಡೆದು ಅಲ್ಲಿ ವಾಣಿಜ್ಯ ಅರಣ್ಯಬೆಳೆ ಬೆಳೆಯುವ ದಂಧೆ ನಡೆಸಲು ಅವರು ಸಂಚು ಹೂಡಿದ್ದಾರೆ. ಅದಕ್ಕೆ ತಕ್ಕಂತೆ ಅರಣ್ಯ ಇಲಾಖೆ, ಸರ್ಕಾರ ಮತ್ತು ಸರ್ಕಾರದ ಚುಕ್ಕಾಣಿ ಹಿಡಿದವರೂ ಅವರಿಗೆ ಸಾಥ್ ನೀಡುತ್ತಿದ್ದಾರೆ. ಕಾರ್ಪೊರೇಟ್ ಕಂಪನಿಗಳೊಂದಿಗೆ ರಾಜಕಾರಣಿಗಳೂ, ಅಧಿಕಾರಿಗಳು ಕೈಜೋಡಿಸಿದ್ದಾರೆ.

ಇದನ್ನೂ ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಈ ನಾಡದ್ರೋಹಿ, ಜನದ್ರೋಹಿ ವಿಷವರ್ತುಲ, ಇಡೀ ಮಲೆನಾಡಿನ ಅರಣ್ಯ ಪ್ರದೇಶವನ್ನೇ ತಮ್ಮ ಕಬ್ಜಕ್ಕೆ ಪಡೆದು, ಮಲೆನಾಡು ಮಾತ್ರವಲ್ಲದೆ, ಇಡೀ ರಾಜ್ಯಕ್ಕೇ ಶುದ್ಧ ಗಾಳಿ, ನೀರು, ಆಹಾರ ಮೂಲಿಕೆಗಳನ್ನು ನೀಡುವ ಕಾಡನ್ನೇ ಸರ್ವನಾಶ ಮಾಡುವ ಸಂಚು ಹೂಡಿದೆ. ಜಗತ್ತಿನ ಅತ್ಯಂತ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಒಂದಾದ ಪಶ್ಚಿಮ ಘಟ್ಟದ ಸಹ್ಯಾದ್ರಿ ಶ್ರೇಣಿಯನ್ನೇ ತಮ್ಮ ಜಹಗೀರು ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಹೋರಾಟಗಾರರ ಒಕ್ಕೂಟವು ಆರೋಪಿಸಿದೆ.

ವಿರೋಧ ಯಾಕೆ?

ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ. ಅದು ಈಗಾಗಲೇ ವಿವಿಧ ಕಾರಣಗಳಿಂದಾಗಿ ಕರಗುತ್ತಿರುವ ಕಾಡಿಗೆ, ಬತ್ತಿ ಹೋಗಿರುವ ಅಂತರ್ಜಲಕ್ಕೆ, ಮಾಯವಾಗುತ್ತಿರುವ ವನ್ಯಜೀವಿಗಳಿಗೆ ಮತ್ತು ಅಂತಿಮವಾಗಿ ಸಾಕಷ್ಟು ಸಂಕಷ್ಟದಲ್ಲಿರುವ ಮಲೆನಾಡಿನ ನಮ್ಮ-ನಿಮ್ಮೆಲ್ಲರ ಬದುಕಿನ ಅಂತ್ಯವೇ ಆಗಲಿದೆ. ಕಾಡಿನ ನಡುವಿನಲ್ಲಿರುವ ನಮ್ಮ ಮನೆ, ಹೊಲ, ಗದ್ದೆಗಳಿಗೆ ಹೋಗಲೂ ಅವಕಾಶವಾಗದಂತೆ ಖಾಸಗಿ ಕಂಪನಿಗಳ ಬಲಿಷ್ಠ ಬೇಲಿಗಳು ಸುತ್ತುವರಿಯಲಿವೆ. ಅವರ ಅನುಮತಿ ಇಲ್ಲದೆ ನಮ್ಮ ಮನೆಗೆ ನಾನೇ ಹೋಗುವುದು ಕೂಡ ದುಸ್ತರವಾಗಲಿದೆ. ಹಾಗಾಗಿ ವಿರೋಧ. ನಮ್ಮ ಬದುಕಿನ ಮೇಲೆ ಮತ್ತೊಬ್ಬರ ಬೀಗ ಬೀಳುವುದಕ್ಕಾಗಿ ಈ ವಿರೋಧ, ನಮ್ಮ ಕಾಡಿನ ಮೇಲೆ, ಕಾಡಿನ ಜೀವಿಗಳ ಮೇಲೆ, ನಮ್ಮ ಹೊಳೆ-ಹಳ್ಳ-ನದಿ-ಕಣಿವೆಗಳ ಮೇಲೆ ದೊಣ್ಣೆ ನಾಯಕನ ಅಪ್ಪಣೆಯ ತೂಗುಗತ್ತಿ ಬೇಡ ಎಂದು ಈ ವಿರೋಧ! ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...