Homeಕರ್ನಾಟಕಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಸರ್ಕಾರ: ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ ಆರೋಪ

"ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ"

- Advertisement -
- Advertisement -

ಕಾಡನ್ನೂ ಖಾಸಗೀಕರಣಗೊಳಿಸುತ್ತಿರುವ ಯಡಿಯೂರಪ್ಪನವರ ಸರ್ಕಾರ, ಮಲೆನಾಡನ್ನು ಬೋಳುಗುಡ್ಡವಾಗಿಸಲು ಪ್ರಯತ್ನಿಸುತ್ತಿದೆ ಎಂದು ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ ಆರೋಪಿಸಿದೆ. ಸರ್ಕಾರಿ ಅರಣ್ಯ ಭೂಮಿಯನ್ನು ಕಾನೂನುಬಾಹಿರವಾಗಿ ಖಾಸಗೀಕರಣಗೊಳಿಸಿ ಅದರ ಲಾಭವನ್ನು ಖಾಸಗಿ ಉದ್ಯಮಿಗಳಿಗೆ ನೀಡಲು ಪ್ರಯತ್ನಿಸಲಾಗುತ್ತಿದೆ. ಹಾಗಾಗಿ ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟದಿಂದ ಜನವರಿ 7 ರಂದು ಸಿಸಿಎಫ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಒಕ್ಕೂಟದ ಮುಖ್ಯಸ್ಥರಾದ ಕೆ.ಪಿ.ಶ್ರೀಪಾಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೈಸೂರು ಪೇಪರ್ ಮಿಲ್ಸ್ (MPM) ಅನ್ನು ಖಾಸಗೀಕರಣ ಮಾಡುವುದರ ಜತೆಗೆ MPM ನೆಡುತೋಪಿನ ಅರಣ್ಯ ಇಲಾಖೆಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ” ಎಂದು ಆರೋಪಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ವಿಶ್ವದ ಅತ್ಯಂತ ಕಿರಿಯ ಪರಿಸರ ಹೋರಾಟಗಾರ್ತಿಯ ಬೆಂಬಲ

“ನಮ್ಮದು ಮಲೆನಾಡಿನ ಕಾಡು, ಕಾಡಿನೊಂದಿಗೆ ಬದುಕುವ ಜನ, ಕಾಡುಪ್ರಾಣಿಗಳು, ಸಸ್ಯ, ಹೊಳೆ-ಹಳ್ಳ, ನದಿ-ಕಣಿವೆಗಳಿಗೆ ಸಂಚಕಾರ ತಂದಿರುವ ಅರಣ್ಯ ಖಾಸಗೀಕರಣದ ಹುನ್ನಾರದ ವಿರುದ್ಧದ ಜನಹೋರಾಟ. ಕಾಡನ್ನು ಅದರ ಪಾಡಿಗೆ ಬಿಡಿ, ಕಾಡಿನಂಚಿನ ಮಲೆನಾಡಿನ ಸಕಲ ಜೀವ ಚರಾಚರಗಳ ಬದುಕನ್ನು ನಾಶ ಮಾಡಬೇಡಿ ಎಂದು ಸರ್ಕಾರಕ್ಕೆ ಮಲೆನಾಡಿಗರು ನೀಡುತ್ತಿರುವ ಎಚ್ಚರಿಕೆಯ ಹೋರಾಟ. ಕಾಡಿನ ಹೆಸರಲ್ಲಿ ದಂಧೆ ಮಾಡುವ ದಂಧೆಕೋರರ ವಿರುದ್ಧದ ಜನದನಿ” ಎಂದು ಹೇಳಿದರು.

ಕಳೆದ ಹಲವು ದಿನಗಳಿಂದ ಈ ಹೋರಾಟವನ್ನು ಸಂಘಟಿಸುತ್ತಿರುವ ಈ ಒಕ್ಕೂಟಕ್ಕೆ ನಾಡಿನ ಹತ್ತಾರು ಚಿಂತಕರು ಸಾಹಿತಿಗಳು, ತಜ್ಞರು ಬೆಂಬಲ ನೀಡಿದ್ದಾರೆ.

 

“ಸುಮಾರು 40 ವರ್ಷಗಳ ಹಿಂದೆ MPM ಕಾಗದ ಕಾರ್ಖಾನೆಯನ್ನು ಸರ್ಕಾರ ಆರಂಭಿಸಿದಾಗ ಅದಕ್ಕೆ ಕಚ್ಚಾವಸ್ತು ಸರಬರಾಜಿಗಾಗಿ ಮಲೆನಾಡಿನ ದಟ್ಟ ಕಾಡಿನ 32,000 ಹೆಕ್ಟೇರ್ (ಅಂದಾಜು 80 ಸಾವಿರ ಎಕರೆ) ಅರಣ್ಯ ಭೂಮಿಯನ್ನು 40 ವರ್ಷದ ಲೀಸ್ (ಗುತ್ತಿಗೆ) ಆಧಾರದ ಮೇಲೆ ನೀಡಲಾಗಿತ್ತು. ಲೀಸ್ ಅವಧಿ ಮುಗಿದ ಮೇಲೆ ಒಂದು ವೇಳೆ, ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸಿಕೊಟ್ಟರೂ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿಕೊಡಬೇಕು ಎಂದು ಲೀಸಿನಲ್ಲಿ ಸರ್ಕಾರವೇ ಷರತ್ತು ಹಾಕಿತ್ತು”

ಇದನ್ನೂ ಓದಿ: ಹೆಸರಘಟ್ಟದಲ್ಲಿ ಚಿತ್ರನಗರಿ ಬೇಡ; ಪರಿಸರವಾದಿಗಳು ಸೇರಿದಂತೆ ಹಲವರಿಂದ ಒತ್ತಾಯ

ಆ ಭೂಮಿಯಲ್ಲಿ ಬೆಳೆದುನಿಂತಿದ್ದ ಸಹಜ ಕಾಡನ್ನು ನಾಶಮಾಡಿದ ಕಂಪನಿ, ಅಲ್ಲಿ ಮಲೆನಾಡಿನ ಅಂತರ್ಜಲ ಮತ್ತು ಒಟ್ಟಾರೆ ಪರಿಸರಕ್ಕೆ ಮಾರಕವಾದ ಅಕೇಶಿಯಾ ಹಾಗೂ ನೀಲಗಿರಿ ಬೆಳೆದಿದೆ. ಸಾವಿರಾರು ಎಕರೆ ಪ್ರದೇಶದ ಕಾಡಿನ ಜಾಗದಲ್ಲಿ ಈ ವಿದೇಶಿ ತಳಿ ಮರಗಳನ್ನು ಬೆಳೆದ ಕಾರಣ ಮಲೆನಾಡಿನ ಪರಿಸರ, ವನ್ಯಜೀವಿ, ಜನಜೀವನ, ಹವಾಮಾನ ಮತ್ತು ನದಿ ಕಣಿವೆಯ ಜೊತೆ ಅಂತರ್ಜಲ ಮಟ್ಟದ ಮೇಲೆಯೂ ಸಾಕಷ್ಟು ಪರಿಣಾಮಗಳಾಗಿವೆ. ಈ ನಡುವೆ ನಷ್ಟದ ಸುಳಿಗೆ ಸಿಲುಕಿ MPM ಕಂಪನಿ ಮುಚ್ಚಿಹೋಗಿ ವರ್ಷಗಳೇ ಉರುಳಿವೆ.

ಈಗ, ಭೂಮಿಯ ಲೀಸ್ ಅವಧಿ ಮುಗಿದಿದೆ. ಆದರೆ ಸರ್ಕಾರ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆಗೆ ಮರಳಿ ಪಡೆಯುವ ಬದಲು, ಮತ್ತೆ ಲೀಸ್ ನವೀಕರಣದ ಮೂಲಕ ಆ ಭೂಮಿಯನ್ನು ಮುಚ್ಚಿಹೋಗಿರುವ ಕಂಪನಿಗೆ ಪರಭಾರೆ ಮಾಡಿದೆ! ಏಕೆಂದರೆ; ಈ ಅಪಾರ ಪ್ರಮಾಣದ ಅಮೂಲ್ಯ ಭೂಮಿಯ ಮೇಲೆ ಸರ್ಕಾರದ ಆಯಕಟ್ಟಿನ ಜಾಗದಲ್ಲಿರುವವರ ಕಣ್ಣು ಬಿದ್ದಿದೆ. ಕಾರ್ಖಾನೆಯನ್ನು ಪುನರಾರಂಭಿಸುವ ನೆಪದಲ್ಲಿ ಮಲೆನಾಡಿನ ಈ ಭೂಮಿಯನ್ನು ತಮ್ಮ ವಶಕ್ಕೆ ಪಡೆದು ಅಲ್ಲಿ ವಾಣಿಜ್ಯ ಅರಣ್ಯಬೆಳೆ ಬೆಳೆಯುವ ದಂಧೆ ನಡೆಸಲು ಅವರು ಸಂಚು ಹೂಡಿದ್ದಾರೆ. ಅದಕ್ಕೆ ತಕ್ಕಂತೆ ಅರಣ್ಯ ಇಲಾಖೆ, ಸರ್ಕಾರ ಮತ್ತು ಸರ್ಕಾರದ ಚುಕ್ಕಾಣಿ ಹಿಡಿದವರೂ ಅವರಿಗೆ ಸಾಥ್ ನೀಡುತ್ತಿದ್ದಾರೆ. ಕಾರ್ಪೊರೇಟ್ ಕಂಪನಿಗಳೊಂದಿಗೆ ರಾಜಕಾರಣಿಗಳೂ, ಅಧಿಕಾರಿಗಳು ಕೈಜೋಡಿಸಿದ್ದಾರೆ.

ಇದನ್ನೂ ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಈ ನಾಡದ್ರೋಹಿ, ಜನದ್ರೋಹಿ ವಿಷವರ್ತುಲ, ಇಡೀ ಮಲೆನಾಡಿನ ಅರಣ್ಯ ಪ್ರದೇಶವನ್ನೇ ತಮ್ಮ ಕಬ್ಜಕ್ಕೆ ಪಡೆದು, ಮಲೆನಾಡು ಮಾತ್ರವಲ್ಲದೆ, ಇಡೀ ರಾಜ್ಯಕ್ಕೇ ಶುದ್ಧ ಗಾಳಿ, ನೀರು, ಆಹಾರ ಮೂಲಿಕೆಗಳನ್ನು ನೀಡುವ ಕಾಡನ್ನೇ ಸರ್ವನಾಶ ಮಾಡುವ ಸಂಚು ಹೂಡಿದೆ. ಜಗತ್ತಿನ ಅತ್ಯಂತ ಸೂಕ್ಷ್ಮ ಪರಿಸರ ಪ್ರದೇಶಗಳಲ್ಲಿ ಒಂದಾದ ಪಶ್ಚಿಮ ಘಟ್ಟದ ಸಹ್ಯಾದ್ರಿ ಶ್ರೇಣಿಯನ್ನೇ ತಮ್ಮ ಜಹಗೀರು ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಹೋರಾಟಗಾರರ ಒಕ್ಕೂಟವು ಆರೋಪಿಸಿದೆ.

ವಿರೋಧ ಯಾಕೆ?

ಈ 80 ಸಾವಿರ ಎಕರೆಯಷ್ಟು ಭಾರೀ ಭೂ ಪ್ರದೇಶವನ್ನು, ಸಹಜ ಕಾಡು ಬೆಳೆಯಬೇಕಾದ ಜಾಗವನ್ನು ಯಾರೋ ಒಬ್ಬ ವ್ಯಕ್ತಿ ಅಥವಾ ಒಂದು ಕಂಪನಿಯ ಲಾಭಕ್ಕಾಗಿ, ದಂಧೆಗಾಗಿ ಮತ್ತೆ ಬಿಟ್ಟುಕೊಡಲಾಗುತ್ತಿದೆ. ಅದು ಈಗಾಗಲೇ ವಿವಿಧ ಕಾರಣಗಳಿಂದಾಗಿ ಕರಗುತ್ತಿರುವ ಕಾಡಿಗೆ, ಬತ್ತಿ ಹೋಗಿರುವ ಅಂತರ್ಜಲಕ್ಕೆ, ಮಾಯವಾಗುತ್ತಿರುವ ವನ್ಯಜೀವಿಗಳಿಗೆ ಮತ್ತು ಅಂತಿಮವಾಗಿ ಸಾಕಷ್ಟು ಸಂಕಷ್ಟದಲ್ಲಿರುವ ಮಲೆನಾಡಿನ ನಮ್ಮ-ನಿಮ್ಮೆಲ್ಲರ ಬದುಕಿನ ಅಂತ್ಯವೇ ಆಗಲಿದೆ. ಕಾಡಿನ ನಡುವಿನಲ್ಲಿರುವ ನಮ್ಮ ಮನೆ, ಹೊಲ, ಗದ್ದೆಗಳಿಗೆ ಹೋಗಲೂ ಅವಕಾಶವಾಗದಂತೆ ಖಾಸಗಿ ಕಂಪನಿಗಳ ಬಲಿಷ್ಠ ಬೇಲಿಗಳು ಸುತ್ತುವರಿಯಲಿವೆ. ಅವರ ಅನುಮತಿ ಇಲ್ಲದೆ ನಮ್ಮ ಮನೆಗೆ ನಾನೇ ಹೋಗುವುದು ಕೂಡ ದುಸ್ತರವಾಗಲಿದೆ. ಹಾಗಾಗಿ ವಿರೋಧ. ನಮ್ಮ ಬದುಕಿನ ಮೇಲೆ ಮತ್ತೊಬ್ಬರ ಬೀಗ ಬೀಳುವುದಕ್ಕಾಗಿ ಈ ವಿರೋಧ, ನಮ್ಮ ಕಾಡಿನ ಮೇಲೆ, ಕಾಡಿನ ಜೀವಿಗಳ ಮೇಲೆ, ನಮ್ಮ ಹೊಳೆ-ಹಳ್ಳ-ನದಿ-ಕಣಿವೆಗಳ ಮೇಲೆ ದೊಣ್ಣೆ ನಾಯಕನ ಅಪ್ಪಣೆಯ ತೂಗುಗತ್ತಿ ಬೇಡ ಎಂದು ಈ ವಿರೋಧ! ಎಂದು ಹೋರಾಟಗಾರರು ತಿಳಿಸಿದ್ದಾರೆ.


ಇದನ್ನೂ ಓದಿ: ಸಾಂಕ್ರಾಮಿಕ ಪಿಡುಗು ಸಮಯದಲ್ಲಿಯೂ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...