Homeಮುಖಪುಟಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

ಕುಸ್ತಿಪಟುಗಳೊಂದಿಗೆ ಮತ್ತೊಮ್ಮೆ ಚರ್ಚಿಸಲು ಸರ್ಕಾರ ಸಿದ್ಧವಿದೆ; ಅನುರಾಗ್ ಠಾಕೂರ್‌

- Advertisement -
- Advertisement -

ಕೇಂದ್ರ ಸರ್ಕಾರವು ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ‘ಚರ್ಚೆ’ ನಡೆಸಲು ಸಿದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಟ್ವೀಟ್ ಮಾಡಿದ್ದಾರೆ.

ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ಅದಕ್ಕಾಗಿ ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಆಹ್ವಾನಿಸಿದ್ದೇನೆ ಎಂದು ಠಾಕೂರ್ ಬುಧವಾರ ಮಧ್ಯರಾತ್ರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಧಾನಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳ ನಿಯೋಗವನ್ನು ಭೇಟಿಯಾದ ನಾಲ್ಕು ದಿನಗಳ ನಂತರ ಈ ಹೇಳಿಕೆ ಹೊರಬಿದ್ದಿದೆ.

ಎರಡು ಗಂಟೆಗಳ ಕಾಲ ನಡೆದ ಸಭೆಯು ಮಧ್ಯರಾತ್ರಿಯ ನಂತರ ಕೊನೆಗೊಂಡಿತ್ತು. ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ಹಲವಾರು ತರಬೇತುದಾರರು ಭಾಗವಹಿಸಿದ್ದರು ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಈ ಹಿಂದೆ ವರದಿ ಮಾಡಿದೆ. “ನಾವು ಗೃಹ ಸಚಿವರೊಂದಿಗೆ ಸಭೆ ನಡೆಸಿದ್ದೇವೆ. ನಾನು ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ” ಎಂದು ಬಜರಂಗ್ ಪ್ರತಿಕ್ರಿಯಿಸಿದ್ದರು.

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿ ಪೊಲೀಸರು ಏಪ್ರಿಲ್ 28 ರಂದು ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅದರಲ್ಲಿ ಪೋಕ್ಸೋ ಪ್ರಕರಣವೂ ಸೇರಿದೆ.

ಪ್ರತಿಭಟನೆ ಮುಂದುವರಿಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಯಾವುದೇ ಹೊಂದಾಣಿಕೆ ಅಥವಾ ಡೀಲ್ ಮಾಡಿಕೊಂಡಿಲ್ಲ ಕುಸ್ತಿಪಟುಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬ್ರಿಜ್‌ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ಹಿಂಪಡೆದಿಲ್ಲ; ಮಾಧ್ಯಮಗಳ ಸುಳ್ಳು ಸುದ್ದಿಗೆ ದೂರುದಾರರ ಸ್ಪಷ್ಟನೆ

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಪುನಿಯಾ ಮಾತನಾಡಿದ್ದು, “ಗೃಹ ಸಚಿವ ಅಮಿತ್ ಶಾ ಅವರನ್ನು ಶನಿವಾರ ತಡರಾತ್ರಿ ಭೇಟಿಯಾದ ಬಗ್ಗೆ ಮಾತನಾಡದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳಲ್ಲಿ ಭಾರತ ಸರ್ಕಾರ ಕೋರಿದೆ” ಎಂದು ತಿಳಿಸಿದ್ದಾರೆ.

ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವವರಲ್ಲಿ ಒಬ್ಬರಾದ ಅಪ್ರಾಪ್ತ ಕುಸ್ತಿಪಟು ತನ್ನ ದೂರನ್ನು ಹಿಂಪಡೆದಿದ್ದಾರೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಪ್ರಕಟಿಸಿವೆ.

ಈ ಬಗ್ಗೆ ಮಾತನಾಡಿದ ಪುನಿಯಾ, ”ಪೋಸ್ಕೋ ಕಾಯ್ದೆಯಡಿ ಬ್ರಿಜ್ ಭೂಷಣ್ ವಿರುದ್ದ ಪ್ರಕರಣ ದಾಖಲಿಸಿರುವ ಸಂತ್ರಸ್ತೆಯ ತಂದೆ ಮತ್ತು ಆ ಬಾಲಕಿ, ದೂರನ್ನು ಹಿಂಪಡೆದಿಲ್ಲ. ಆದರೆ ಬ್ರಿಜ್ ಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಸಂಬಂಧಿತ ವಿವರಗಳೊಂದಿಗೆ ಹೊಸದಾಗಿ ಹೇಳಿಕೆ ಸಲ್ಲಿಸಿದ್ದಾರೆ” ಎಂದು ವಿವರಿಸಿದ್ದಾರೆ.

ಪ್ರತಿಭಟನಾ ನಿರತ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಭಾರತೀಯ ರೈಲ್ವೇಯಲ್ಲಿ ತಮ್ಮ ಒಎಸ್‌ಡಿ ಸೇವೆಗಳನ್ನು ಪುನರಾರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...