Homeಕರ್ನಾಟಕಒಳ ಮೀಸಲಾತಿ ವರದಿ ಸ್ವೀಕರಿಸಿದ ಸರ್ಕಾರ; ಜಾರಿ ಕುರಿತು ಆ.16 ರಂದು ವಿಶೇಷ ಸಚಿವ ಸಂಪುಟ...

ಒಳ ಮೀಸಲಾತಿ ವರದಿ ಸ್ವೀಕರಿಸಿದ ಸರ್ಕಾರ; ಜಾರಿ ಕುರಿತು ಆ.16 ರಂದು ವಿಶೇಷ ಸಚಿವ ಸಂಪುಟ ಸಭೆ

- Advertisement -
- Advertisement -

ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳ ಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿದ್ದು, ಮೀಸಲಾತಿ ಜಾರಿ ಕುರಿತು ಆಗಸ್ಟ್‌ 16 ರಂದು ಸರ್ಕಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ.

ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದ್ದು, “ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ ಅವರ ಆಯೋಗವನ್ನು ನೇಮಕ ಮಾಡಿದ್ದು, ವರದಿ ಸಲ್ಲಿಕೆಯಾಗಿದೆ. ಶ್ರಮವಹಿಸಿ ಕಡಿಮೆ ಸಮಯದಲ್ಲಿ ವೈಜ್ಞಾನಿಕವಾದ ಅಧ್ಯಯನ ಮಾಡುವ ಮೂಲಕ ಶೇ 95 ರಷ್ಟು ಸಮುದಾಯದ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಿ ವರದಿ ಸಲ್ಲಿಸಿದ್ದಾರೆ. ಸದರಿ ವರದಿಯನ್ನು ಎಲ್ಲ ಸಚಿವರಿಗೆ ನೀಡಲಾಗಿದೆ. ಸಚಿವ ಸಂಪುಟ ವರದಿಯನ್ನು ಸ್ವೀಕರಿಸಿದೆ. ಈ ಬಗ್ಗೆ ಅಧ್ಯಯನ ಮಾಡಿ ಆಗಸ್ಟ್ 16 ರಂದು, ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗುವುದು” ಎಂದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್ ಅವರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆ!

ಸಿದ್ದರಾಮಯ್ಯ ಅವರು ಮೊದಲ ಭಾರಿಗೆ ಮುಖ್ಯಮಂತ್ರಿಯಾಗಿದ್ದಾಗ, 2015 ರಲ್ಲಿ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ನಡೆಸಲಾಗಿತ್ತು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ವರದಿಯನ್ನು ಸಿದ್ಧಪಡಿಸಿತ್ತು. ವರದಿ ಸಿದ್ದಪಡಿಸಿ ಈಗಾಗಲೇ 10 ವರ್ಷ ಕಳೆದಿದ್ದು, ಅದನ್ನು ಈವರೆಗೆ ಬಹಿರಂಗಪಡಿಸಿಲ್ಲ. ಆದರೆ. ಇದೀಗ ಮತ್ತೊಮ್ಮೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಡಿಜಿಟಲ್ ಮಾದರಿಯಲ್ಲಿ ಸಮೀಕ್ಷೆಯನ್ನು ಕೈಗೊಳ್ಳುವುದು, ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ನ್ಯಾ.ನಾಗಮೋಹನ್‌ದಾಸ್ ರವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳುವ ಜೊತೆಗೆ, ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು ಎಂದು ಸಚಿವರು ತಿಳಿಸಿದ್ದಾರೆ.

2021-22ನೇ ಸಾಲಿನ À RIDF ಟ್ರಾಂಚ್-27ರಡಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ ರೂ.171.91 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಹಾಗೂ ಹೆಚ್ಚುವರಿ ಮೊತ್ತ ರೂ.47.81 ಕೋಟಿಗಳನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಿಂದ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಮಹದೇವಪುರ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ್ಳತನ: ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...