Homeಕರ್ನಾಟಕಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

ಮಾಸಿಕ 25,000 ರೂ ಫೆಲೋಶಿಪ್ ನೀಡುತ್ತಿದ್ದ ಸರ್ಕಾರ ಈಗ ಮಾಸಿಕ 10,000 ದಂತೆ ವಾರ್ಷಿಕ 1,00,000 ಮೀರದಂತೆ ನೀಡಲಾಗುವುದು ಎಂದು ಆದೇಶ ಹೊರಡಿಸಿದೆ.

- Advertisement -
- Advertisement -

ಪಿಎಚ್‌ಡಿ ಹಾಗು ಎಂಫಿಲ್ ಅಧ್ಯಯನ ಕೈಗೊಳ್ಳುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ರಾಜ್ಯ ಅಲ್ಪಸಂಖ್ಯಾತ ಇಲಾಖೆ ಕಡಿತಗೊಳಿಸಿ ಆದೇಶ ಹೊರಡಿಸಿರುವುದು ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ.

ಪಿಎಚ್‌ಡಿ ಅಧ್ಯಯನ ಕೈಗೊಂಡ ಅಲ್ಪಸಂಖ್ಯಾತ ವಿಧ್ಯಾರ್ಥಿಗಳಿಗೆ 3 ವರ್ಷಕ್ಕೆ ಹಾಗೂ ಎಂಫಿಲ್ ಮಾಡುವ ವಿದ್ಯಾರ್ಥಿಗಳಿಗೆ ಜೆ.ಆರ್‌.ಎಫ್‌‌. ಮಾದರಿಯಲ್ಲಿ 2 ವರ್ಷಕ್ಕೆ ಪ್ರತಿ ತಿಂಗಳು 25 ಸಾವಿರ ರುಪಾಯಿಗಳಂತೆ, ಜೊತೆಗೆ ವರ್ಷಕ್ಕೆ 10 ಸಾವಿರ ರೂಗಳನ್ನು ನಿರ್ವಹಣಾ ವೆಚ್ಚವನ್ನು ಫೆಲೋಶಿಪ್ ಆಗಿ ಅಲ್ಪಸಂಖ್ಯಾತ ಇಲಾಖೆ ಇದುವರೆಗೂ ನೀಡುತ್ತಿತ್ತು.

ಆದರೆ ಇದೀಗ ಇಲಾಖೆಯು ಹೊಸ ಆದೇಶ ಹೊರಡಿಸಿದ್ದು, ಪಿಎಚ್.ಡಿ. ಅಧ್ಯಯನ ಕೈಗೊಂಡ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ನೀಡುತ್ತಿದ್ದ ಮಾಸಿಕ ರೂ. 25000 ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಇನ್ನು ಮುಂದೆ ಮಾಸಿಕ 10,000 ದಂತೆ ವಾರ್ಷಿಕ 1,00,000 ಮೀರದಂತೆ ನೀಡಲಾಗುವುದು ಎಂದು ಆದೇಶ ಹೊರಡಿಸಿದೆ. ಮಾತ್ರವಲ್ಲದೆ ವಾರ್ಷಿಕವಾಗಿ ನೀಡುತ್ತಿದ್ದ 10 ಸಾವಿರ ರೂಗಳ ನಿರ್ವಹಣಾ ವೆಚ್ಚವನ್ನು ಕೂಡಾ ಹಿಂತೆಗೆದುಕೊಂಡಿದೆ.

ಇದನ್ನೂ ಓದಿ: ಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌‌ಡಿ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ಸರ್ಕಾರವು ಫೆಲೋಶಿಪ್ ತಿದ್ದುಪಡಿ ಮಾಡಿರುವುದು ವಿದ್ಯಾರ್ಥಿಗಳ ಭವಿಷ್ಯವನ್ನೇ ಮಂಕಾಗಿಸಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿಂದಿನ ಸರ್ಕಾರಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಉನ್ನತ ಶಿಕ್ಷಣದ ಕೊರತೆಯಿದೆ ಎಂದು ಈ ಯೋಜನೆಯನ್ನು ಪ್ರಾರಂಭಿಸಿತ್ತಾದರೂ ಆ ಹಣವನ್ನು ಕೂಡಾ ಸಮಯ ಮೀರಿ ನೀಡುತ್ತಿತ್ತು. ಇದೀಗ ಅದನ್ನೂ ಮಾಸಿಕ ಹತ್ತು ಸಾವಿರಕ್ಕೆ ಇಳಿಸಿದೆ. ಜನರು ಕೊರೊನಾ ಸಂಕಷ್ಟದಲ್ಲಿ ಇರುವಾಗ ವಿದ್ಯಾರ್ಥಿಗಳಿಗೆ ನೆರವಾಗುವುದನ್ನು ಬಿಟ್ಟು, ಗಾಯದ ಮೇಲೆ ಬರೆ ಎಳೆಯಲು ಸರ್ಕಾರ ಹೊರಟಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಉನ್ನತ ಶಿಕ್ಷಣ ಪಡೆಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗುತ್ತದೆ. ಆದ್ದರಿಂದ ಸರ್ಕಾರ ಹೊಸ ಆದೇಶವನ್ನು ಹಿಂಪಡೆದು, ಹಿಂದಿನ ನೀತಿಯನ್ನು ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಪಿಎಚ್‌ಡಿ ಮಾಡುವ ವಿದ್ಯಾರ್ಥಿಗಳು ಈ ಯೋಜನೆಯ ಅವಧಿಯನ್ನು 3 ರಿಂದ 5 ವರ್ಷಕ್ಕೆ ಏರಿಸಬೇಕು ಎಂಬ ಒತ್ತಾಯವನ್ನು ಮಾಡುತ್ತಿದ್ದ ಈ ಸಂದರ್ಭದಲ್ಲಿ, ಇಲಾಖೆಯ ಈ ಆದೇಶ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದ್ದು ತೀರಾ ಆರ್ಥಿವಾಗಿ ಹಿಂದುಳಿದವರಿಗೆ ಇನ್ನು ಮುಂದೆ ಸಂಶೋಧನಾ ಕ್ಷೇತ್ರದಲ್ಲಿ ಮುಂದುವರೆಯುವುದು ಕಷ್ಟಕರವಾಗಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಸಾಂವಿಧಾನಿಕ ರಕ್ಷಣೆಯನ್ನು ಎತ್ತಿಹಿಡಿದ ಈ ಎರಡು ಮಹತ್ವದ ತೀರ್ಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...