Homeಕರ್ನಾಟಕಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

ಮಾಸಿಕ 25,000 ರೂ ಫೆಲೋಶಿಪ್ ನೀಡುತ್ತಿದ್ದ ಸರ್ಕಾರ ಈಗ ಮಾಸಿಕ 10,000 ದಂತೆ ವಾರ್ಷಿಕ 1,00,000 ಮೀರದಂತೆ ನೀಡಲಾಗುವುದು ಎಂದು ಆದೇಶ ಹೊರಡಿಸಿದೆ.

- Advertisement -
- Advertisement -

ಪಿಎಚ್‌ಡಿ ಹಾಗು ಎಂಫಿಲ್ ಅಧ್ಯಯನ ಕೈಗೊಳ್ಳುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ರಾಜ್ಯ ಅಲ್ಪಸಂಖ್ಯಾತ ಇಲಾಖೆ ಕಡಿತಗೊಳಿಸಿ ಆದೇಶ ಹೊರಡಿಸಿರುವುದು ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ.

ಪಿಎಚ್‌ಡಿ ಅಧ್ಯಯನ ಕೈಗೊಂಡ ಅಲ್ಪಸಂಖ್ಯಾತ ವಿಧ್ಯಾರ್ಥಿಗಳಿಗೆ 3 ವರ್ಷಕ್ಕೆ ಹಾಗೂ ಎಂಫಿಲ್ ಮಾಡುವ ವಿದ್ಯಾರ್ಥಿಗಳಿಗೆ ಜೆ.ಆರ್‌.ಎಫ್‌‌. ಮಾದರಿಯಲ್ಲಿ 2 ವರ್ಷಕ್ಕೆ ಪ್ರತಿ ತಿಂಗಳು 25 ಸಾವಿರ ರುಪಾಯಿಗಳಂತೆ, ಜೊತೆಗೆ ವರ್ಷಕ್ಕೆ 10 ಸಾವಿರ ರೂಗಳನ್ನು ನಿರ್ವಹಣಾ ವೆಚ್ಚವನ್ನು ಫೆಲೋಶಿಪ್ ಆಗಿ ಅಲ್ಪಸಂಖ್ಯಾತ ಇಲಾಖೆ ಇದುವರೆಗೂ ನೀಡುತ್ತಿತ್ತು.

ಆದರೆ ಇದೀಗ ಇಲಾಖೆಯು ಹೊಸ ಆದೇಶ ಹೊರಡಿಸಿದ್ದು, ಪಿಎಚ್.ಡಿ. ಅಧ್ಯಯನ ಕೈಗೊಂಡ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ನೀಡುತ್ತಿದ್ದ ಮಾಸಿಕ ರೂ. 25000 ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಇನ್ನು ಮುಂದೆ ಮಾಸಿಕ 10,000 ದಂತೆ ವಾರ್ಷಿಕ 1,00,000 ಮೀರದಂತೆ ನೀಡಲಾಗುವುದು ಎಂದು ಆದೇಶ ಹೊರಡಿಸಿದೆ. ಮಾತ್ರವಲ್ಲದೆ ವಾರ್ಷಿಕವಾಗಿ ನೀಡುತ್ತಿದ್ದ 10 ಸಾವಿರ ರೂಗಳ ನಿರ್ವಹಣಾ ವೆಚ್ಚವನ್ನು ಕೂಡಾ ಹಿಂತೆಗೆದುಕೊಂಡಿದೆ.

ಇದನ್ನೂ ಓದಿ: ಸ್ಟಾರ್ಟ್‌‌ಅಪ್‍: ಮೈಸೂರಿನಲ್ಲಿ ಬಯೋಪಾಲಿಮರ್‌ ಉದ್ಯಮ ಆರಂಭಿಸಿದ ಚೀನಾ ರಿಟರ್ನ್‌ ಗುರುಪ್ರಸಾದ್!

ಈ ಬಗ್ಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌‌ಡಿ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಯೊಬ್ಬರು ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ಸರ್ಕಾರವು ಫೆಲೋಶಿಪ್ ತಿದ್ದುಪಡಿ ಮಾಡಿರುವುದು ವಿದ್ಯಾರ್ಥಿಗಳ ಭವಿಷ್ಯವನ್ನೇ ಮಂಕಾಗಿಸಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಈ ಹಿಂದಿನ ಸರ್ಕಾರಗಳು ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಉನ್ನತ ಶಿಕ್ಷಣದ ಕೊರತೆಯಿದೆ ಎಂದು ಈ ಯೋಜನೆಯನ್ನು ಪ್ರಾರಂಭಿಸಿತ್ತಾದರೂ ಆ ಹಣವನ್ನು ಕೂಡಾ ಸಮಯ ಮೀರಿ ನೀಡುತ್ತಿತ್ತು. ಇದೀಗ ಅದನ್ನೂ ಮಾಸಿಕ ಹತ್ತು ಸಾವಿರಕ್ಕೆ ಇಳಿಸಿದೆ. ಜನರು ಕೊರೊನಾ ಸಂಕಷ್ಟದಲ್ಲಿ ಇರುವಾಗ ವಿದ್ಯಾರ್ಥಿಗಳಿಗೆ ನೆರವಾಗುವುದನ್ನು ಬಿಟ್ಟು, ಗಾಯದ ಮೇಲೆ ಬರೆ ಎಳೆಯಲು ಸರ್ಕಾರ ಹೊರಟಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಉನ್ನತ ಶಿಕ್ಷಣ ಪಡೆಯುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಹಿನ್ನಡೆ ಉಂಟಾಗುತ್ತದೆ. ಆದ್ದರಿಂದ ಸರ್ಕಾರ ಹೊಸ ಆದೇಶವನ್ನು ಹಿಂಪಡೆದು, ಹಿಂದಿನ ನೀತಿಯನ್ನು ಜಾರಿಗೊಳಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಪಿಎಚ್‌ಡಿ ಮಾಡುವ ವಿದ್ಯಾರ್ಥಿಗಳು ಈ ಯೋಜನೆಯ ಅವಧಿಯನ್ನು 3 ರಿಂದ 5 ವರ್ಷಕ್ಕೆ ಏರಿಸಬೇಕು ಎಂಬ ಒತ್ತಾಯವನ್ನು ಮಾಡುತ್ತಿದ್ದ ಈ ಸಂದರ್ಭದಲ್ಲಿ, ಇಲಾಖೆಯ ಈ ಆದೇಶ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದ್ದು ತೀರಾ ಆರ್ಥಿವಾಗಿ ಹಿಂದುಳಿದವರಿಗೆ ಇನ್ನು ಮುಂದೆ ಸಂಶೋಧನಾ ಕ್ಷೇತ್ರದಲ್ಲಿ ಮುಂದುವರೆಯುವುದು ಕಷ್ಟಕರವಾಗಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಸಾಂವಿಧಾನಿಕ ರಕ್ಷಣೆಯನ್ನು ಎತ್ತಿಹಿಡಿದ ಈ ಎರಡು ಮಹತ್ವದ ತೀರ್ಪುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...