Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...