Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....