Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...