Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...