Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...