Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...