Homeಕರೋನಾ ತಲ್ಲಣExplained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

Explained: ಹೋಮ್‌‌‌ ಐಸೋಲೇಶನ್‌ ರೋಗಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

- Advertisement -
- Advertisement -

ದೇಶದಾದ್ಯಂತ ಕೊರೊನಾ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಮಧ್ಯೆ, ಸೌಮ್ಯ ಮತ್ತು ಲಕ್ಷಣರಹಿತ ರೋಗಿಗಳಿಗೆ ಮನೆಯಲ್ಲೇ ಪ್ರತ್ಯೇಕವಾಗಿ (ಹೋಂ ಐಸೋಲೇಶನ್‌‌) ಇರುವುದಕ್ಕಾಗಿ ಒಕ್ಕೂಟ ಸರ್ಕಾರವು ಬುಧವಾರದಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಮತ್ತು ಲಕ್ಷಣರಹಿತ ಸೋಂಕಿತರಿಗೆ ಮಾತ್ರ ಅನ್ವಯವಾಗುತ್ತದೆ.

ಹೊಸ ಮಾರ್ಗಸೂಚಿಗಳು ಇಲ್ಲಿವೆ:

  • ಸೋಂಕಿತ ವ್ಯಕ್ತಿ ಪಾಸಿಟಿವ್‌ ಪರೀಕ್ಷೆಯ ವರದಿ ಏಳು ದಿನಗಳ ನಂತರ, ಮೂರು ದಿನಗಳು ಜ್ವರ ಕಾಣಿಸಿಕೊಳ್ಳದಿದ್ದರೆ, ಐಸೋಲೇಶನ್‌ನಿಂದ ಹೊರಬರಬಹುದು. ಆದರೆ ಅವರು ಮಾಸ್ಕ್‌ ಧರಿಸುವುದನ್ನು ಮುಂದುವರೆಸಬೇಕು.
  • ಈ ಹೋಮ್‌ ಐಸೋಲೇಶನ್‌‌ ಅವಧಿ ಮುಗಿದ ನಂತರ ಮತ್ತೇ ಕೊರೊನಾ ಪರೀಕ್ಷೆ ಮಾಡುವ ಅಗತ್ಯವಿಲ್ಲ.
  • ಸೋಂಕಿತ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದ ಲಕ್ಷಣರಹಿತ ವ್ಯಕ್ತಿಗಳು ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ.
  • ಹೋಂ ಐಸೋಲೇಶನ್‌‌ನಲ್ಲಿರುವ ರೋಗಿಯು ಯಾವಾಗಲೂ ಟ್ರಿಪಲ್ ಲೇಯರ್ ವೈದ್ಯಕೀಯ ಮುಖವಾಡವನ್ನು ಬಳಸಬೇಕು.
  • 8 ಗಂಟೆಗಳ ಬಳಕೆಯ ನಂತರ ಅಥವಾ ಒದ್ದೆಯಾಗಿದ್ದರೆ ಅಥವಾ ಮಣ್ಣಾಗಿದ್ದು ಕಾಣುತ್ತಿದ್ದರೆ ಅಂತಹ ಮಾಸ್ಕ್‌ ಅನ್ನು ಬಳಸಬಾರದು.

ಇದನ್ನೂ ಓದಿ:ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

  • ಹೋಂ ಐಸೋಲೇಶನ್‌ ರೋಗಿಯ ಆರೈಕೆದಾರರು ಕೋಣೆಗೆ ಪ್ರವೇಶಿಸುವ ಸಂದರ್ಭದಲ್ಲಿ, ಆರೈಕೆದಾರ ಮತ್ತು ರೋಗಿಯಿಬ್ಬರೂ N-95 ಮುಖವಾಡವನ್ನು ಬಳಸಲು ಆದ್ಯತೆ ನೀಡಬೇಕು.
  • ಬಳಸಿದ ಮಾಸ್ಕ್‌ಗಳನ್ನು ತುಂಡುಗಳಾಗಿ ಕತ್ತರಿಸಿ, ಅದನ್ನು ಪೇಪರ್‌‌ ಚೀಲದಲ್ಲಿ ಹಾಕಿಟ್ಟು 72 ಗಂಟೆಗಳ ನಂತರ ಅದನ್ನು ಎಸೆಯಬೇಕು.
  • ಹೋಂ ಐಸೋಲೇಶನ್‌ ಹೊಂದಿರುವ ರೋಗಿ, ವಿಶೇಷವಾಗಿ ಇತರ ಕಾಯಿಲೆ ಹೊಂದಿರುವ ವಯಸ್ಸಾದವರಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳಬೇಕು ಮತ್ತು ಚೆನ್ನಾಗಿ ಗಾಳಿಯಡುವ ಕೋಣೆಯಲ್ಲಿ ಉಳಿಯಬೇಕು.
  • ರೋಗಿಗಳೇ ಪಲ್ಸ್ ಆಕ್ಸಿಮೀಟರ್ನೊಂದಿಗೆ ರಕ್ತದ ಆಮ್ಲಜನಕದ ಶುದ್ಧತ್ವವನ್ನು ಸ್ವಯಂ ಮೇಲ್ವಿಚಾರಣೆ ಮಾಡಬಹುದು.
  • ರೋಗಿಯು ತಾನಿರುವ ಸ್ಥಳದಲ್ಲೇ ಇದ್ದು ಉಸಿರಾಟದ ಪ್ರಮಾಣವನ್ನು ಸ್ವಯಂ-ಮೇಲ್ವಿಚಾರಣೆ ಮಾಡಬಹುದು. 1 ನಿಮಿಷದಲ್ಲಿ ಮಾಡಿದ ಉಸಿರಾಟದ ಸಂಖ್ಯೆಯನ್ನು ಎಣಿಸುವ ಮೂಲಕ ಇದನ್ನು ಮಾಡಬಹುದು. ಸಾಮಾನ್ಯವಾಗಿ ಒಂದು ನಿಮಿಷಕ್ಕೆ 24 ಬಾರಿ ಉಸಿರಾಡುತ್ತಾರೆ.
  • ಇತರ ಕಾಯಿಲೆಗಳಿರುವ ವಯಸ್ಸಾದ (60+) ರೋಗಿಗಳಿಗೆ ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರೀಕ್ಷೆ ನಡೆಸಿದ ನಂತರ ಮಾತ್ರ ಹೋಂ ಐಸೋಲೇಷನ್‌ ಅನುಮತಿಸಲಾಗುತ್ತದೆ.
  • ಎಚ್‌ಐವಿ, ಕಸಿ ಪಡೆಯುವ, ಕ್ಯಾನ್ಸರ್ ಚಿಕಿತ್ಸೆ ಇತ್ಯಾದಿ ಪಡೆಯುತ್ತಿರುವ ರೋಗಿಗಳು ಹೋಮ್ ಐಸೋಲೇಷನ್‌ಗೆ ಶಿಫಾರಸು ಮಾಡಲಾಗುವುದಿಲ್ಲ. ಅವರಿಗೆ ಚಿಕಿತ್ಸೆ ನೀಡುವ ವೈದ್ಯರಿಂದ ಸರಿಯಾದ ಪರಿಕ್ಷೆಯಾದರೆ ಮಾತ್ರ ಹೋಮ್ ಐಸೋಲೇಶನ್ ಮಾಡಬಹುದು.

ಇದನ್ನೂ ಓದಿ:ಶೀಘ್ರದಲ್ಲೇ ರಾಜ್ಯಕ್ಕೆ ಅಮಿತ್‌ ಶಾ ಭೇಟಿ: BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕುತ್ತು, ಸಿಎಂ ಬದಲಾವಣೆ ಸಾಧ್ಯತೆ?

  • ರೋಗಿಗಳು ಆನ್‌ಲೈನ್‌ ವೇದಿಕೆಯನ್ನು ಸಮಾಲೋಚನೆಗೆ ಬಳಸಿಕೊಳ್ಳಬಹುದು.
  • ದಿನಕ್ಕೆ ನಾಲ್ಕು ಬಾರಿ ಪ್ಯಾರೆಸಿಟಮಾಲ್ 650 ಮಿಗ್ರಾಂ ಸೇವಿಸಿಯೂ ಜ್ವರ ನಿಯಂತ್ರಣಕ್ಕೆ ಬರದಿದ್ದರೆ, ಚಿಕಿತ್ಸೆ ನೀಡುವ ವೈದ್ಯರನ್ನು ಸಂಪರ್ಕಿಸಬೇಕು.
  • ದಿನಕ್ಕೆ ಮೂರು ಬಾರಿ ಬೆಚ್ಚಗಿನ ನೀರಿನಲ್ಲಿ ಗಾರ್ಗಲ್ ಮಾಡಲು ಅಥವಾ ಹಬೆ ತೆಗೆದುಕೊಳ್ಳಲು ರೋಗಿಗಳಿಗೆ ಸಲಹೆ.
  • ತಾವೆ ಸ್ವಯಂ ಔಷಧಿ ತೆಗೆದುಕೊಳ್ಳುವುದು, ವೈದ್ಯರ ಸಮಾಲೋಚನೆಯಿಲ್ಲದೆ ರಕ್ತದ ಪರೀಕ್ಷೆ, ಎದೆಯ ಎಕ್ಸ್-ರೇ ಅಥವಾ ಎದೆಯ CT ಸ್ಕ್ಯಾನ್‌ ತೆಗೆದುಕೊಳ್ಳುವುದಕ್ಕೆ ನಿಷೇಧ.
  • ಸೌಮ್ಯವಾದ ಕಾಯಿಲೆಗಳಲ್ಲಿ ಸ್ಟೀರಾಯ್ಡ್‌ಗಳನ್ನು ನೀಡಲಾಗುವುದಿಲ್ಲ ಮತ್ತು ಸ್ವಯಂ ಚಿಕಿತ್ಸೆ ಮಾಡಬಾರದು. ಸ್ಟೀರಾಯ್ಡ್‌ಗಳ ಅತಿಯಾದ ಬಳಕೆ ಮತ್ತು ಅನುಚಿತ ಬಳಕೆಯು ಹೆಚ್ಚುವರಿ ತೊಡಕುಗಳಿಗೆ ಕಾರಣವಾಗಬಹುದು ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ.
  • 3 ದಿನಗಳಿಗಿಂತ ಹೆಚ್ಚು ಕಾಲ 100 ಡಿಗ್ರಿ ಎಫ್‌ಗಿಂತ ಹೆಚ್ಚಿನ ತೀವ್ರತರವಾದ ಜ್ವರ, ಇತರ ಗಂಭೀರ ರೋಗಲಕ್ಷಣಗಳು ಕಂಡರೆ ವೈದ್ಯಕೀಯ ಆರೈಕೆಯನ್ನು ಪಡೆಯಬೇಕು.

ಹೋಮ್‌ ಐಸೋಲೇಶನ್‌ ಆಗಿರುವ ರೋಗಿಗಳ ಮೇಲ್ವಿಚಾರಣೆಯನ್ನು ಪ್ರತಿದಿನ ಜಿಲ್ಲಾಡಳಿತ ಮಾಡಬೇಕು ಎಂದು ಒಕ್ಕೂಟ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಹೇಳಿದೆ.

Covid-19 Home Isolation Gui… by The Indian Express

ಇದನ್ನೂ ಓದಿ:ವೀಕೆಂಡ್‌ ಕರ್ಫ್ಯೂ: ಹೊಸ ಕೊರೊನಾ ಮಾರ್ಗಸೂಚಿಯಲ್ಲಿ ಏನೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...