Homeಕರ್ನಾಟಕತೆರೆಯದ ಸರ್ಕಾರಿ ವಸತಿ ಶಾಲೆಗಳು: 30,000 ಕ್ಕೂ ಹೆಚ್ಚು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ತೆರೆಯದ ಸರ್ಕಾರಿ ವಸತಿ ಶಾಲೆಗಳು: 30,000 ಕ್ಕೂ ಹೆಚ್ಚು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಪಾಲಕರು ಈ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಉದ್ದೇಶದಿಂದ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 5ನೇ ತರಗತಿ ಪೂರೈಸಿರುವ ಮಕ್ಕಳ ವರ್ಗಾವಣೆ ಪ್ರಮಾಣ ಪತ್ರ ಪಡೆದು ವಸತಿ ಶಾಲೆಗಳ ಪ್ರವೇಶಕ್ಕಾಗಿ ಕಾದು ಕುಳಿತಿದ್ದಾರೆ- ರಜಾಕ್ ಉಸ್ತಾದ್

- Advertisement -
- Advertisement -

ರಾಜ್ಯದಲ್ಲಿರುವ ಸರ್ಕಾರಿ ವಸತಿ ಶಾಲೆಗಳನ್ನು ಇನ್ನೂ ತೆರೆಯದೇ ಇರುವುದರಿಂದ ಸಾವಿರಾರು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಜೀವನ ಅತಂತ್ರ ಸ್ಥಿತಿ ತಲುಪಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಜಾಕ್ ಉಸ್ತಾದ್ ಕಳವಳ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಸರಕಾರ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 819 ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು, ಏಕಲವ್ಯ ಮಾದರಿ ವಸತಿ ಶಾಲೆಗಳು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಗಳು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ನಡೆಸುತ್ತದೆ. ಈ ಎಲ್ಲ 819 ವಸತಿ ಶಾಲೆಗಳಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಸುಮಾರು 1,63,070 ವಿದ್ಯಾರ್ಥಿಗಳು 6ನೇ ತರಗತಿಯಿಂದ 10ನೇ ತರಗತಿಯವರೆಗೆ ವಸತಿ ಸಹಿತ ಶಿಕ್ಷಣವನ್ನು ಪೂರೈಸುತ್ತಿದ್ದಾರೆ. 2020-21ನೇ ಶೈಕ್ಷಣಿಕ ಸಾಲಿಗೆ ಕೋವಿಡ್-19 ಕಾರಣದಿಂದ ಲಾಕ್-ಡೌನ್ ಘೋಷಣೆ ಮಾಡಿರುವುದರಿಂದ ತರಗತಿಗಳು ಪ್ರಾರಂಭವಾಗಿಲ್ಲ” ಎಂದು ನಾನುಗೌರಿ.ಕಾಮ್ ಜೊತೆ ಮಾತನಾಡಿದ ರಜಾಕ್ ಉಸ್ತಾದ್ ಹೇಳಿದರು.

ಇದನ್ನೂ ಓದಿ: ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

“ಇತ್ತೀಚಿಗೆ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಮಾತ್ರ ತರಗತಿಗಳು ನಡೆಸಲು ಸರಕಾರ ಅನುಮತಿ ನೀಡಿದೆ. ಈ ಲಾಕ್-ಡೌನ್ ಕಾರಣದಿಂದ ಈ ವರ್ಷ 9ನೇ ತರಗತಿಗೆ ಸರಕಾರ ವಸತಿ ಶಾಲೆಗಳ ಪ್ರವೇಶವನ್ನು ತೆಗೆದುಕೊಳ್ಳದೇ ಇರುವುದರಿಂದ ರಾಜ್ಯದ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಸುಮಾರು 32614 ವಿದ್ಯಾರ್ಥಿಗಳಿಗೆ ಮುಂದೇನು ಎಂಬುದು ತಿಳಿಯದೇ ಅತಂತ್ರರಾಗಿದ್ದಾರೆ. ಪಾಲಕರು ಈ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಉದ್ದೇಶದಿಂದ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 5ನೇ ತರಗತಿ ಪೂರೈಸಿರುವ ಮಕ್ಕಳ ವರ್ಗಾವಣೆ ಪ್ರಮಾಣ ಪತ್ರ ಪಡೆದು ವಸತಿ ಶಾಲೆಗಳ ಪ್ರವೇಶಕ್ಕಾಗಿ ಕಾದು ಕುಳಿತಿದ್ದಾರೆ” ಎಂದು ಹೇಳಿದರು.

“ಇದೇ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ 2020-21ನೇ ಸಾಲಿಗಾಗಿ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಆದರೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತಮ್ಮ ಇಲಾಖೆಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸದೇ ಅನ್ಯಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ಒಂದು ಕಡೆ ಶಿಕ್ಷಣ ಸಚಿವರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಮಕ್ಕಳ ಪಾಲಕರಿಗೆ 2020-21ನೇ ಸಾಲಿಗಾಗಿ ತರಗತಿಗಳು ನಡೆಯಲಿ ಅಥವಾ ನಡೆಯದೇ ಇರಲಿ ಮುಂದಿನ ತರಗತಿಗೆ ಪ್ರವೇಶ ಪಡೆಯಲೇಬೇಕು ಎಂದು ಆದೇಶ ನೀಡಿದ್ದಾರೆ. ಇದೇ ಸಚಿವರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ಮಾಡಲು ಹಿಂದೇಟು ಹಾಕುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರಕಾರ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಅಭಿವೃದ್ದಿಯ ಬಗ್ಗೆ ಪುಂಕಾನು ಪುಂಖವಾಗಿ ಮಾತನಾಡುತ್ತಿದೆಯೇ ಹೊರತು ಆ ಸಮುದಾಯದ ಮಕ್ಕಳ ಭವಿಷ್ಯದ ಬಗ್ಗೆ ನೈಜ ಕಾಳಜಿ ತೋರಿಸುತ್ತಿಲ್ಲ. ಅವರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಇದರಿಂದ ಆ ಸಮುದಾಯದ ಮಕ್ಕಳಿಗೆ ಅನ್ಯಾಯವಾಗುವುದಿಲ್ಲವೇ? ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಅಭಿವೃದ್ದಿಯ ಬಗ್ಗೆ ಉದ್ದುದ್ದ ಭಾಷಣ ಮಾಡುವ ಜನಪ್ರತಿನಿಧಿಗಳು ಸರಕಾರವನ್ನು ಪ್ರಶ್ನಿಸದೇ ಏನು ಮಾಡುತ್ತಿದ್ದಾರೆ?” ಎಂದು ಕಿಡಿಕಾರಿದ್ದಾರೆ.

“ಸರಕಾರ 2020-21ನೇ ಶೈಕ್ಷಣಿಕ ಸಾಲಿನ ತರಗತಿಗಳು ಯಾವಾಗ ಬೇಕಾದರೂ ಪ್ರಾರಂಭ ಮಾಡಲಿ. ಈ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಪಾಲಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಈ ಮೂಲಕ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಹೋರಾಟನಿರತ ಕಿಸಾನ್‌ಗೆ ಆದ ಅವಮಾನ ಗಡಿಯಲ್ಲಿರುವ ಜವಾನ್‌ರಿಗೆ ನೋವು ತರಿಸುತ್ತದೆ: ಪ್ರತಿ ಸೈನಿಕನೂ ಸಮವಸ್ತ್ರದಲ್ಲಿರುವ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...