Homeಕರ್ನಾಟಕತೆರೆಯದ ಸರ್ಕಾರಿ ವಸತಿ ಶಾಲೆಗಳು: 30,000 ಕ್ಕೂ ಹೆಚ್ಚು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ತೆರೆಯದ ಸರ್ಕಾರಿ ವಸತಿ ಶಾಲೆಗಳು: 30,000 ಕ್ಕೂ ಹೆಚ್ಚು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಪಾಲಕರು ಈ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಉದ್ದೇಶದಿಂದ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 5ನೇ ತರಗತಿ ಪೂರೈಸಿರುವ ಮಕ್ಕಳ ವರ್ಗಾವಣೆ ಪ್ರಮಾಣ ಪತ್ರ ಪಡೆದು ವಸತಿ ಶಾಲೆಗಳ ಪ್ರವೇಶಕ್ಕಾಗಿ ಕಾದು ಕುಳಿತಿದ್ದಾರೆ- ರಜಾಕ್ ಉಸ್ತಾದ್

- Advertisement -
- Advertisement -

ರಾಜ್ಯದಲ್ಲಿರುವ ಸರ್ಕಾರಿ ವಸತಿ ಶಾಲೆಗಳನ್ನು ಇನ್ನೂ ತೆರೆಯದೇ ಇರುವುದರಿಂದ ಸಾವಿರಾರು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಜೀವನ ಅತಂತ್ರ ಸ್ಥಿತಿ ತಲುಪಿದೆ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ರಜಾಕ್ ಉಸ್ತಾದ್ ಕಳವಳ ವ್ಯಕ್ತಪಡಿಸಿದ್ದಾರೆ.

“ಕರ್ನಾಟಕ ಸರಕಾರ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 819 ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳು, ಏಕಲವ್ಯ ಮಾದರಿ ವಸತಿ ಶಾಲೆಗಳು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳು, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಗಳು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ ನಡೆಸುತ್ತದೆ. ಈ ಎಲ್ಲ 819 ವಸತಿ ಶಾಲೆಗಳಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಸುಮಾರು 1,63,070 ವಿದ್ಯಾರ್ಥಿಗಳು 6ನೇ ತರಗತಿಯಿಂದ 10ನೇ ತರಗತಿಯವರೆಗೆ ವಸತಿ ಸಹಿತ ಶಿಕ್ಷಣವನ್ನು ಪೂರೈಸುತ್ತಿದ್ದಾರೆ. 2020-21ನೇ ಶೈಕ್ಷಣಿಕ ಸಾಲಿಗೆ ಕೋವಿಡ್-19 ಕಾರಣದಿಂದ ಲಾಕ್-ಡೌನ್ ಘೋಷಣೆ ಮಾಡಿರುವುದರಿಂದ ತರಗತಿಗಳು ಪ್ರಾರಂಭವಾಗಿಲ್ಲ” ಎಂದು ನಾನುಗೌರಿ.ಕಾಮ್ ಜೊತೆ ಮಾತನಾಡಿದ ರಜಾಕ್ ಉಸ್ತಾದ್ ಹೇಳಿದರು.

ಇದನ್ನೂ ಓದಿ: ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

“ಇತ್ತೀಚಿಗೆ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಮಾತ್ರ ತರಗತಿಗಳು ನಡೆಸಲು ಸರಕಾರ ಅನುಮತಿ ನೀಡಿದೆ. ಈ ಲಾಕ್-ಡೌನ್ ಕಾರಣದಿಂದ ಈ ವರ್ಷ 9ನೇ ತರಗತಿಗೆ ಸರಕಾರ ವಸತಿ ಶಾಲೆಗಳ ಪ್ರವೇಶವನ್ನು ತೆಗೆದುಕೊಳ್ಳದೇ ಇರುವುದರಿಂದ ರಾಜ್ಯದ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಸುಮಾರು 32614 ವಿದ್ಯಾರ್ಥಿಗಳಿಗೆ ಮುಂದೇನು ಎಂಬುದು ತಿಳಿಯದೇ ಅತಂತ್ರರಾಗಿದ್ದಾರೆ. ಪಾಲಕರು ಈ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಉದ್ದೇಶದಿಂದ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 5ನೇ ತರಗತಿ ಪೂರೈಸಿರುವ ಮಕ್ಕಳ ವರ್ಗಾವಣೆ ಪ್ರಮಾಣ ಪತ್ರ ಪಡೆದು ವಸತಿ ಶಾಲೆಗಳ ಪ್ರವೇಶಕ್ಕಾಗಿ ಕಾದು ಕುಳಿತಿದ್ದಾರೆ” ಎಂದು ಹೇಳಿದರು.

“ಇದೇ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ 2020-21ನೇ ಸಾಲಿಗಾಗಿ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಆದರೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ತಮ್ಮ ಇಲಾಖೆಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸದೇ ಅನ್ಯಾಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

ಒಂದು ಕಡೆ ಶಿಕ್ಷಣ ಸಚಿವರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ಮಕ್ಕಳ ಪಾಲಕರಿಗೆ 2020-21ನೇ ಸಾಲಿಗಾಗಿ ತರಗತಿಗಳು ನಡೆಯಲಿ ಅಥವಾ ನಡೆಯದೇ ಇರಲಿ ಮುಂದಿನ ತರಗತಿಗೆ ಪ್ರವೇಶ ಪಡೆಯಲೇಬೇಕು ಎಂದು ಆದೇಶ ನೀಡಿದ್ದಾರೆ. ಇದೇ ಸಚಿವರು ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶ ಮಾಡಲು ಹಿಂದೇಟು ಹಾಕುತ್ತಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರಕಾರ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಅಭಿವೃದ್ದಿಯ ಬಗ್ಗೆ ಪುಂಕಾನು ಪುಂಖವಾಗಿ ಮಾತನಾಡುತ್ತಿದೆಯೇ ಹೊರತು ಆ ಸಮುದಾಯದ ಮಕ್ಕಳ ಭವಿಷ್ಯದ ಬಗ್ಗೆ ನೈಜ ಕಾಳಜಿ ತೋರಿಸುತ್ತಿಲ್ಲ. ಅವರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಇದರಿಂದ ಆ ಸಮುದಾಯದ ಮಕ್ಕಳಿಗೆ ಅನ್ಯಾಯವಾಗುವುದಿಲ್ಲವೇ? ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಅಭಿವೃದ್ದಿಯ ಬಗ್ಗೆ ಉದ್ದುದ್ದ ಭಾಷಣ ಮಾಡುವ ಜನಪ್ರತಿನಿಧಿಗಳು ಸರಕಾರವನ್ನು ಪ್ರಶ್ನಿಸದೇ ಏನು ಮಾಡುತ್ತಿದ್ದಾರೆ?” ಎಂದು ಕಿಡಿಕಾರಿದ್ದಾರೆ.

“ಸರಕಾರ 2020-21ನೇ ಶೈಕ್ಷಣಿಕ ಸಾಲಿನ ತರಗತಿಗಳು ಯಾವಾಗ ಬೇಕಾದರೂ ಪ್ರಾರಂಭ ಮಾಡಲಿ. ಈ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಪಾಲಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಈ ಮೂಲಕ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಹೋರಾಟನಿರತ ಕಿಸಾನ್‌ಗೆ ಆದ ಅವಮಾನ ಗಡಿಯಲ್ಲಿರುವ ಜವಾನ್‌ರಿಗೆ ನೋವು ತರಿಸುತ್ತದೆ: ಪ್ರತಿ ಸೈನಿಕನೂ ಸಮವಸ್ತ್ರದಲ್ಲಿರುವ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...