Homeಕರ್ನಾಟಕಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

- Advertisement -
- Advertisement -

ಅನಿರ್ದಿಷ್ಟಾವಧಿ ಹೋರಾಟವನ್ನು ಕೈಗೊಂಡಿದ್ದ ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮಳೆ, ಬಿಸಿಲು, ಚಳಿಯೆನ್ನದೆ ಹೋರಾಟಕ್ಕೆ ಕುಳಿತ್ತಿದ್ದ ತಾಯಂದಿಯರು ಕೊಂಚ ನಿರಾಳವಾಗಿದ್ದು, ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ‌ಗ್ರ್ಯಾಚುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು ಒತ್ತಾಯಿಸಲಾಗಿತ್ತು.

ಜೊತೆಗೆ ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಸ್ಪಂದಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲ್ಕೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು.

ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ ನೀಡಿದೆ. ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ. ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂಘಟಕರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಚ್ಯುಟಿಗೆ ಸಂಬಂಧಿಸಿ ಇಂದು 1-2-2023 ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು 1-2-2023 ರಂದು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆ ಸಲ್ಲಿಸಿದ್ದಾರೆ.

ಸಂಘಟಕರಾದ ಎಸ್. ವರಲಕ್ಷ್ಮಿ, ಶಾಂತಾ ಘಂಟೆ, ಎಚ್ ಎಸ್ ಸುನಂದಾ, ಜಿ ಕಮಲಾ, ಯಮುನಾ ಗಾಂವ್ಕರ್, ಜಯಶ್ರೀ ಹಿರೇಕರ್, ಲಲಿತಾ ಹೆಗಡೆ, ವಿದ್ಯಾ ವೈದ್ಯ, ಗೀತಾ ನಾಯ್ಕ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...