Homeಕರ್ನಾಟಕಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

- Advertisement -
- Advertisement -

ಅನಿರ್ದಿಷ್ಟಾವಧಿ ಹೋರಾಟವನ್ನು ಕೈಗೊಂಡಿದ್ದ ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮಳೆ, ಬಿಸಿಲು, ಚಳಿಯೆನ್ನದೆ ಹೋರಾಟಕ್ಕೆ ಕುಳಿತ್ತಿದ್ದ ತಾಯಂದಿಯರು ಕೊಂಚ ನಿರಾಳವಾಗಿದ್ದು, ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ‌ಗ್ರ್ಯಾಚುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು ಒತ್ತಾಯಿಸಲಾಗಿತ್ತು.

ಜೊತೆಗೆ ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಸ್ಪಂದಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲ್ಕೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು.

ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ ನೀಡಿದೆ. ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ. ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂಘಟಕರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಚ್ಯುಟಿಗೆ ಸಂಬಂಧಿಸಿ ಇಂದು 1-2-2023 ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು 1-2-2023 ರಂದು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆ ಸಲ್ಲಿಸಿದ್ದಾರೆ.

ಸಂಘಟಕರಾದ ಎಸ್. ವರಲಕ್ಷ್ಮಿ, ಶಾಂತಾ ಘಂಟೆ, ಎಚ್ ಎಸ್ ಸುನಂದಾ, ಜಿ ಕಮಲಾ, ಯಮುನಾ ಗಾಂವ್ಕರ್, ಜಯಶ್ರೀ ಹಿರೇಕರ್, ಲಲಿತಾ ಹೆಗಡೆ, ವಿದ್ಯಾ ವೈದ್ಯ, ಗೀತಾ ನಾಯ್ಕ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...