Homeಕರ್ನಾಟಕಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

- Advertisement -
- Advertisement -

ಅನಿರ್ದಿಷ್ಟಾವಧಿ ಹೋರಾಟವನ್ನು ಕೈಗೊಂಡಿದ್ದ ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮಳೆ, ಬಿಸಿಲು, ಚಳಿಯೆನ್ನದೆ ಹೋರಾಟಕ್ಕೆ ಕುಳಿತ್ತಿದ್ದ ತಾಯಂದಿಯರು ಕೊಂಚ ನಿರಾಳವಾಗಿದ್ದು, ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ‌ಗ್ರ್ಯಾಚುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು ಒತ್ತಾಯಿಸಲಾಗಿತ್ತು.

ಜೊತೆಗೆ ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಸ್ಪಂದಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲ್ಕೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು.

ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ ನೀಡಿದೆ. ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ. ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂಘಟಕರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಚ್ಯುಟಿಗೆ ಸಂಬಂಧಿಸಿ ಇಂದು 1-2-2023 ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು 1-2-2023 ರಂದು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆ ಸಲ್ಲಿಸಿದ್ದಾರೆ.

ಸಂಘಟಕರಾದ ಎಸ್. ವರಲಕ್ಷ್ಮಿ, ಶಾಂತಾ ಘಂಟೆ, ಎಚ್ ಎಸ್ ಸುನಂದಾ, ಜಿ ಕಮಲಾ, ಯಮುನಾ ಗಾಂವ್ಕರ್, ಜಯಶ್ರೀ ಹಿರೇಕರ್, ಲಲಿತಾ ಹೆಗಡೆ, ವಿದ್ಯಾ ವೈದ್ಯ, ಗೀತಾ ನಾಯ್ಕ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...