Homeಕರ್ನಾಟಕಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

- Advertisement -
- Advertisement -

ಅನಿರ್ದಿಷ್ಟಾವಧಿ ಹೋರಾಟವನ್ನು ಕೈಗೊಂಡಿದ್ದ ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮಳೆ, ಬಿಸಿಲು, ಚಳಿಯೆನ್ನದೆ ಹೋರಾಟಕ್ಕೆ ಕುಳಿತ್ತಿದ್ದ ತಾಯಂದಿಯರು ಕೊಂಚ ನಿರಾಳವಾಗಿದ್ದು, ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ‌ಗ್ರ್ಯಾಚುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು ಒತ್ತಾಯಿಸಲಾಗಿತ್ತು.

ಜೊತೆಗೆ ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಸ್ಪಂದಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲ್ಕೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು.

ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ ನೀಡಿದೆ. ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ. ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂಘಟಕರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಚ್ಯುಟಿಗೆ ಸಂಬಂಧಿಸಿ ಇಂದು 1-2-2023 ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು 1-2-2023 ರಂದು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆ ಸಲ್ಲಿಸಿದ್ದಾರೆ.

ಸಂಘಟಕರಾದ ಎಸ್. ವರಲಕ್ಷ್ಮಿ, ಶಾಂತಾ ಘಂಟೆ, ಎಚ್ ಎಸ್ ಸುನಂದಾ, ಜಿ ಕಮಲಾ, ಯಮುನಾ ಗಾಂವ್ಕರ್, ಜಯಶ್ರೀ ಹಿರೇಕರ್, ಲಲಿತಾ ಹೆಗಡೆ, ವಿದ್ಯಾ ವೈದ್ಯ, ಗೀತಾ ನಾಯ್ಕ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...