Homeಕರ್ನಾಟಕಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

- Advertisement -
- Advertisement -

ಅನಿರ್ದಿಷ್ಟಾವಧಿ ಹೋರಾಟವನ್ನು ಕೈಗೊಂಡಿದ್ದ ಅಂಗನವಾಡಿ ನೌಕರರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮಳೆ, ಬಿಸಿಲು, ಚಳಿಯೆನ್ನದೆ ಹೋರಾಟಕ್ಕೆ ಕುಳಿತ್ತಿದ್ದ ತಾಯಂದಿಯರು ಕೊಂಚ ನಿರಾಳವಾಗಿದ್ದು, ಹೋರಾಟವನ್ನು ಅಂತ್ಯಗೊಳಿಸಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ 2023 ಜನವರಿ 23ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಬೆಂಗಳೂರಿನ ಫ್ರೀಡಂ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸುಪ್ರೀಂ ಕೋರ್ಟಿನ ತೀರ್ಪಿನಂತೆ ‌ಗ್ರ್ಯಾಚುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು ಒತ್ತಾಯಿಸಲಾಗಿತ್ತು.

ಜೊತೆಗೆ ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ನಡೆಸಿದ ಈ ಐತಿಹಾಸಿಕ ಹೋರಾಟ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಸ್ಪಂದಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮಧ್ಯೆ ನಮ್ಮ ಹೋರಾಟಕ್ಕೆ ಸ್ಪಂದಿಸಿ ನಾಲ್ಕೈದು ಬಾರಿ ಸರ್ಕಾರದೊಂದಿಗೆ ಮಾತುಕತೆಗಳು ನಡೆದವು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾನ್ಯ ಮಂತ್ರಿಗಳು ಹೋರಾಟದ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ನಿರ್ದೇಶಕರು, ಜಂಟಿ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಇತರ ಹಿರಿಯ ಅಧಿಕಾರಿಗಳ ಜೊತೆಗೆ ನಿರ್ಧಿಷ್ಟ ವಿಷಯಗಳ ಕುರಿತು ಚರ್ಚೆಗಳು ನಡೆದವು. ಆದರೆ ಬೇಡಿಕೆ ಈಡೇರಿಕೆಗೆ ಸ್ಪಷ್ಟತೆ ಬಾರದೇ ಇರುವುದರಿಂದ ಹೋರಾಟವನ್ನು ಮುಂದುವರಿಸುವುದಾಗಿ ಘೋಷಿಸಲಾಗಿತ್ತು. ಮೂಲಸೌಕರ್ಯಗಳ ಕೊರತೆಯ ಮಧ್ಯೆಯೂ ಹೋರಾಟ ತೀವ್ರತೆ ಪಡೆದಿತ್ತು.

ಸಿಐಟಿಯುನ ಹೋರಾಟಕ್ಕೆ ಮಣಿದ ಇಲಾಖೆಯು ಶಾಲಾಪೂರ್ವ ಶಿಕ್ಷಣಕ್ಕಾಗಿ ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಿರ್ದಿಷ್ಟ ಸಮಯ ಮೀಸಲಿರಿಸಿದ ಸ್ಪಷ್ಟ ಆದೇಶವನ್ನು ಲಿಖಿತವಾಗಿ ನೀಡಿದೆ. ಮಿನಿ ಅಂಗನವಾಡಿ ಹಾಗೂ ಸಹಾಯಕಿಯರ ಪದೋನ್ನತಿಯ ಕುರಿತು ಲೋಪದೋಷಗಳಿರುವ ಆದೇಶ ವಾಪಸ್ ಪಡೆದು, ಮಾರ್ಪಡಿಸಿದ ತಿದ್ದುಪಡಿ ಆದೇಶವನ್ನು ಲಿಖಿತವಾಗಿ ಪಡೆಯಲಾಗಿದೆ. ಕಟ್ಟಡದ ವೆಚ್ಚ 12 ಲಕ್ಷದಿಂದ 20 ಲಕ್ಷಕ್ಕೆ ಏರಿಕೆಗೆ ಒಪ್ಪಿಗೆ ನೀಡಿದೆ. ಮಕ್ಕಳಿಗೆ ಶೂ, ಸಮವಸ್ತ್ರ ಹಾಗೂ ಮೂಲಸೌಕರ್ಯ ಹೆಚ್ಚಿಸಲು ಒಪ್ಪಿಗೆ ಸೂಚಿಸಿದೆ. ಅಂಗನವಾಡಿಗಳಲ್ಲಿ ಶಾಲಾಪೂರ್ವ ಶಿಕ್ಷಣ ಪಡೆದ ದೃಢೀಕರಣ ಪತ್ರ ನೀಡಲು ಸಮ್ಮತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತುಕತೆಯ ವೇಳೆಯಲ್ಲಿ ಇನ್ನುಳಿದ ಬೇಡಿಕೆಗಳೊಂದಿಗೆ ರಾಜ್ಯದ ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಪೂರ್ಣ ಆರೋಗ್ಯ ತಪಾಸಣೆ ಇತ್ಯಾದಿ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರಕಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಸಂಘಟಕರು ಸಂತಸ ವ್ಯಕ್ತಪಡಿಸಿದ್ದಾರೆ.

ಗ್ರಾಚ್ಯುಟಿಗೆ ಸಂಬಂಧಿಸಿ ಇಂದು 1-2-2023 ಮಾನ್ಯ ಮುಖ್ಯಮಂತ್ರಿಗಳ ಸಲಹೆಯಂತೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರಾಚ್ಯುಟಿ ಕಾಯ್ದೆ 1972 ರ ಪ್ರಕಾರ ಉಪಧನ (ಗ್ರಾಚ್ಯುಟಿ) ನೀಡುವ ಕುರಿತು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು 1-2-2023 ರಂದು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹೋರಾಟದ ಸಂದರ್ಭದಲ್ಲಿ ಸಂಘಟನೆಯ ಬೇಡಿಕೆಗಳ ಈಡೇರಿಕೆಗೆ ಸಹಾಯ ಸಹಕಾರ ನೀಡಿದವರಿಗೆ, ಬೆಂಬಲಿಸಿದವರಿಗೆ, ಮಾರ್ಗದರ್ಶನ ಮಾಡಿದ ನಾಡಿನ ಗಣ್ಯರಿಗೆ ಹಿತೈಷಿಗಳಿಗೆ, ಹೋರಾಟವನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡಿದವರಿಗೆ, ಸೂಕ್ತ ರಕ್ಷಣೆ ನೀಡಿದ ಆರಕ್ಷಕರಿಗೆ ಸಂಘಟನೆಯ ಪರವಾಗಿ ವಂದನೆ ಸಲ್ಲಿಸಿದ್ದಾರೆ.

ಸಂಘಟಕರಾದ ಎಸ್. ವರಲಕ್ಷ್ಮಿ, ಶಾಂತಾ ಘಂಟೆ, ಎಚ್ ಎಸ್ ಸುನಂದಾ, ಜಿ ಕಮಲಾ, ಯಮುನಾ ಗಾಂವ್ಕರ್, ಜಯಶ್ರೀ ಹಿರೇಕರ್, ಲಲಿತಾ ಹೆಗಡೆ, ವಿದ್ಯಾ ವೈದ್ಯ, ಗೀತಾ ನಾಯ್ಕ ಅವರು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...