Homeಕರ್ನಾಟಕಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ...

ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

‘ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರನ್ನು ನೇಮಕ ಮಾಡುವ ಮುನ್ನ ಶೋಧನಾ ಸಮಿತಿ ರಚನೆ ಮಾಡಿರಲಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ನೇಮಕಾತಿಗೆ ತಡೆ ಕೋರಿರುವ ಅರ್ಜಿದಾರರ ಮಧ್ಯಂತರ ಕೋರಿಕೆಗೆ ಸಂಬಂಧಿಸಿದಂತ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಜೆ.ಪಿ ನಗರ 7ನೇ ಹಂತದ ನಿವಾಸಿ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಫೆ. 18) ವಿಚಾರಣೆ ನಡೆಸಿದೆ.

ಈ ವೇಳೆ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್ ಶೆಟ್ಟಿ ಅವರು, “ಶೋಧನಾ ಸಮಿತಿಯನ್ನು ಕಡ್ಡಾಯವಾಗಿ ರಚಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದಿಷ್ಟ ನಿರ್ದೇಶನವನ್ನೂ ನೀಡಿಲ್ಲ. ಶೋಧನಾ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆಯಷ್ಟೇ” ಎಂದಿದ್ದಾರೆ.

“ನೇಮಕಾತಿಯಲ್ಲಿ ಯಾವ ಪ್ರಕ್ರಿಯೆ ಅನುಸರಿಸಲಾಗಿದೆ ಎಂಬುವುದರ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿದೆ. ಅದನ್ನು ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು. ಅರ್ಜಿಯು ಸುಪ್ರೀಂ ಕೋರ್ಟ್‌ ಪರಿಗಣನೆಗೆ ಒಳಪಟ್ಟಿರುವಾಗ ಇಲ್ಲಿ ಈ ಅರ್ಜಿಯನ್ನು ಪುರಸ್ಕರಿಸುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಸಿಐಸಿ ಮತ್ತು ಕೆಲ ಮಾಹಿತಿ ಆಯುಕ್ತರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಅರ್ಜಿದಾರರು ಸಿಐಸಿ ಹುದ್ದೆಗೆ ಅರ್ಜಿ ಹಾಕಿರಲಿಲ್ಲ ಎಂದಾಗಲಿ, ಸಿಐಸಿಯಾಗಿ ನೇಮಕವಾಗಲು ಆಶಿತ್‌ ಮೋಹನ್‌ ಪ್ರಸಾದ್‌ ಅರ್ಹರಲ್ಲ ಎಂಬುದಕ್ಕೆ ಸಂಬಂಧಿಸಿದಂತೆಯಾಗಲಿ ಯಾವುದೇ ಗುಮಾನಿಯೂ ಅರ್ಜಿಯಲಿಲ್ಲ. ಹೀಗಾಗಿ, ಅರ್ಜಿ ವಜಾ ಮಾಡಬೇಕು” ಎಂದು ಕೋರಿದ್ದಾರೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಅಶೋಕ್‌ ಪಾಟೀಲ್‌ ಅವರು “ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ ಮತ್ತು ತ್ರಿಪುರದಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್‌ ನಿರ್ದೇಶನಗಳು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎನ್ನಲಾಗದು. ರಾಜ್ಯ ಸರ್ಕಾರವು 2024ರ ಜೂನ್‌ 11ರಂದು ಮುಖ್ಯ ಮಾಹಿತಿ ಆಯುಕ್ತರು ಮತ್ತು ಒಂದು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆದರೆ, ಸಿಐಸಿ ಮತ್ತು ಏಳು ಮಾಹಿತಿ ಆಯುಕ್ತರನ್ನು ನೇಮಿಸಲಾಗಿದೆ. ಇಲ್ಲಿ ಎರಡು ಅಧಿಸೂಚನೆಗಳನ್ನು ಒಟ್ಟುಗೂಡಿಸಿ ಶೋಧನಾ ಸಮಿತಿ ಇಲ್ಲದೇ ನೇಮಕಾತಿ ಮಾಡಲಾಗಿದೆ. ಕಾನೂನು ಪಾಲಿಸದೇ ನೇಮಕ ಮಾಡಿರುವವರು ಪ್ರಮಾಣ ಸ್ವೀಕರಿಸಿ, ಕೆಲಸ ಮಾಡುತ್ತಿರುವುದರಿಂದ ಮಧ್ಯಂತರ ಆದೇಶ ಮಾಡಬೇಕು. ಆನಂತರ ಅವರು ಆಕ್ಷೇಪಣೆ ಸಲ್ಲಿಸಬಹುದು” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಕೋರಿಕೆಯ ಕುರಿತು ಆದೇಶ ಕಾಯ್ದಿರಿಸಿದೆ. ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ ಎಂದು ಫೆಬ್ರವರಿ 4ರಂದು ನ್ಯಾಯಾಲಯ ಹೇಳಿತ್ತು.

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾಗಿ ಕೆ‌.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ.ಬದ್ರುದ್ದೀನ್ ಮತ್ತು ಬಿ.ಆರ್.ಮಮತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಮತ್ತು ಇತರ ಆಯುಕ್ತರು ಫೆಬ್ರವರಿ 4ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸೌಜನ್ಯ : ಬಾರ್ & ಬೆಂಚ್

ಕುಡಿಯುವ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಲು ನಿರ್ಧರಿಸಿದ ಬೆಂಗಳೂರು ಜಲಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...