Homeಕರ್ನಾಟಕಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ...

ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

‘ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರನ್ನು ನೇಮಕ ಮಾಡುವ ಮುನ್ನ ಶೋಧನಾ ಸಮಿತಿ ರಚನೆ ಮಾಡಿರಲಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ನೇಮಕಾತಿಗೆ ತಡೆ ಕೋರಿರುವ ಅರ್ಜಿದಾರರ ಮಧ್ಯಂತರ ಕೋರಿಕೆಗೆ ಸಂಬಂಧಿಸಿದಂತ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಜೆ.ಪಿ ನಗರ 7ನೇ ಹಂತದ ನಿವಾಸಿ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಫೆ. 18) ವಿಚಾರಣೆ ನಡೆಸಿದೆ.

ಈ ವೇಳೆ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್ ಶೆಟ್ಟಿ ಅವರು, “ಶೋಧನಾ ಸಮಿತಿಯನ್ನು ಕಡ್ಡಾಯವಾಗಿ ರಚಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದಿಷ್ಟ ನಿರ್ದೇಶನವನ್ನೂ ನೀಡಿಲ್ಲ. ಶೋಧನಾ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆಯಷ್ಟೇ” ಎಂದಿದ್ದಾರೆ.

“ನೇಮಕಾತಿಯಲ್ಲಿ ಯಾವ ಪ್ರಕ್ರಿಯೆ ಅನುಸರಿಸಲಾಗಿದೆ ಎಂಬುವುದರ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿದೆ. ಅದನ್ನು ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು. ಅರ್ಜಿಯು ಸುಪ್ರೀಂ ಕೋರ್ಟ್‌ ಪರಿಗಣನೆಗೆ ಒಳಪಟ್ಟಿರುವಾಗ ಇಲ್ಲಿ ಈ ಅರ್ಜಿಯನ್ನು ಪುರಸ್ಕರಿಸುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಸಿಐಸಿ ಮತ್ತು ಕೆಲ ಮಾಹಿತಿ ಆಯುಕ್ತರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಅರ್ಜಿದಾರರು ಸಿಐಸಿ ಹುದ್ದೆಗೆ ಅರ್ಜಿ ಹಾಕಿರಲಿಲ್ಲ ಎಂದಾಗಲಿ, ಸಿಐಸಿಯಾಗಿ ನೇಮಕವಾಗಲು ಆಶಿತ್‌ ಮೋಹನ್‌ ಪ್ರಸಾದ್‌ ಅರ್ಹರಲ್ಲ ಎಂಬುದಕ್ಕೆ ಸಂಬಂಧಿಸಿದಂತೆಯಾಗಲಿ ಯಾವುದೇ ಗುಮಾನಿಯೂ ಅರ್ಜಿಯಲಿಲ್ಲ. ಹೀಗಾಗಿ, ಅರ್ಜಿ ವಜಾ ಮಾಡಬೇಕು” ಎಂದು ಕೋರಿದ್ದಾರೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಅಶೋಕ್‌ ಪಾಟೀಲ್‌ ಅವರು “ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ ಮತ್ತು ತ್ರಿಪುರದಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್‌ ನಿರ್ದೇಶನಗಳು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎನ್ನಲಾಗದು. ರಾಜ್ಯ ಸರ್ಕಾರವು 2024ರ ಜೂನ್‌ 11ರಂದು ಮುಖ್ಯ ಮಾಹಿತಿ ಆಯುಕ್ತರು ಮತ್ತು ಒಂದು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆದರೆ, ಸಿಐಸಿ ಮತ್ತು ಏಳು ಮಾಹಿತಿ ಆಯುಕ್ತರನ್ನು ನೇಮಿಸಲಾಗಿದೆ. ಇಲ್ಲಿ ಎರಡು ಅಧಿಸೂಚನೆಗಳನ್ನು ಒಟ್ಟುಗೂಡಿಸಿ ಶೋಧನಾ ಸಮಿತಿ ಇಲ್ಲದೇ ನೇಮಕಾತಿ ಮಾಡಲಾಗಿದೆ. ಕಾನೂನು ಪಾಲಿಸದೇ ನೇಮಕ ಮಾಡಿರುವವರು ಪ್ರಮಾಣ ಸ್ವೀಕರಿಸಿ, ಕೆಲಸ ಮಾಡುತ್ತಿರುವುದರಿಂದ ಮಧ್ಯಂತರ ಆದೇಶ ಮಾಡಬೇಕು. ಆನಂತರ ಅವರು ಆಕ್ಷೇಪಣೆ ಸಲ್ಲಿಸಬಹುದು” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಕೋರಿಕೆಯ ಕುರಿತು ಆದೇಶ ಕಾಯ್ದಿರಿಸಿದೆ. ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ ಎಂದು ಫೆಬ್ರವರಿ 4ರಂದು ನ್ಯಾಯಾಲಯ ಹೇಳಿತ್ತು.

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾಗಿ ಕೆ‌.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ.ಬದ್ರುದ್ದೀನ್ ಮತ್ತು ಬಿ.ಆರ್.ಮಮತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಮತ್ತು ಇತರ ಆಯುಕ್ತರು ಫೆಬ್ರವರಿ 4ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸೌಜನ್ಯ : ಬಾರ್ & ಬೆಂಚ್

ಕುಡಿಯುವ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಲು ನಿರ್ಧರಿಸಿದ ಬೆಂಗಳೂರು ಜಲಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...