Homeಕರ್ನಾಟಕಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ...

ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

‘ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರನ್ನು ನೇಮಕ ಮಾಡುವ ಮುನ್ನ ಶೋಧನಾ ಸಮಿತಿ ರಚನೆ ಮಾಡಿರಲಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ನೇಮಕಾತಿಗೆ ತಡೆ ಕೋರಿರುವ ಅರ್ಜಿದಾರರ ಮಧ್ಯಂತರ ಕೋರಿಕೆಗೆ ಸಂಬಂಧಿಸಿದಂತ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಜೆ.ಪಿ ನಗರ 7ನೇ ಹಂತದ ನಿವಾಸಿ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಫೆ. 18) ವಿಚಾರಣೆ ನಡೆಸಿದೆ.

ಈ ವೇಳೆ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್ ಶೆಟ್ಟಿ ಅವರು, “ಶೋಧನಾ ಸಮಿತಿಯನ್ನು ಕಡ್ಡಾಯವಾಗಿ ರಚಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದಿಷ್ಟ ನಿರ್ದೇಶನವನ್ನೂ ನೀಡಿಲ್ಲ. ಶೋಧನಾ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆಯಷ್ಟೇ” ಎಂದಿದ್ದಾರೆ.

“ನೇಮಕಾತಿಯಲ್ಲಿ ಯಾವ ಪ್ರಕ್ರಿಯೆ ಅನುಸರಿಸಲಾಗಿದೆ ಎಂಬುವುದರ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿದೆ. ಅದನ್ನು ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು. ಅರ್ಜಿಯು ಸುಪ್ರೀಂ ಕೋರ್ಟ್‌ ಪರಿಗಣನೆಗೆ ಒಳಪಟ್ಟಿರುವಾಗ ಇಲ್ಲಿ ಈ ಅರ್ಜಿಯನ್ನು ಪುರಸ್ಕರಿಸುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಸಿಐಸಿ ಮತ್ತು ಕೆಲ ಮಾಹಿತಿ ಆಯುಕ್ತರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಅರ್ಜಿದಾರರು ಸಿಐಸಿ ಹುದ್ದೆಗೆ ಅರ್ಜಿ ಹಾಕಿರಲಿಲ್ಲ ಎಂದಾಗಲಿ, ಸಿಐಸಿಯಾಗಿ ನೇಮಕವಾಗಲು ಆಶಿತ್‌ ಮೋಹನ್‌ ಪ್ರಸಾದ್‌ ಅರ್ಹರಲ್ಲ ಎಂಬುದಕ್ಕೆ ಸಂಬಂಧಿಸಿದಂತೆಯಾಗಲಿ ಯಾವುದೇ ಗುಮಾನಿಯೂ ಅರ್ಜಿಯಲಿಲ್ಲ. ಹೀಗಾಗಿ, ಅರ್ಜಿ ವಜಾ ಮಾಡಬೇಕು” ಎಂದು ಕೋರಿದ್ದಾರೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಅಶೋಕ್‌ ಪಾಟೀಲ್‌ ಅವರು “ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ ಮತ್ತು ತ್ರಿಪುರದಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್‌ ನಿರ್ದೇಶನಗಳು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎನ್ನಲಾಗದು. ರಾಜ್ಯ ಸರ್ಕಾರವು 2024ರ ಜೂನ್‌ 11ರಂದು ಮುಖ್ಯ ಮಾಹಿತಿ ಆಯುಕ್ತರು ಮತ್ತು ಒಂದು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆದರೆ, ಸಿಐಸಿ ಮತ್ತು ಏಳು ಮಾಹಿತಿ ಆಯುಕ್ತರನ್ನು ನೇಮಿಸಲಾಗಿದೆ. ಇಲ್ಲಿ ಎರಡು ಅಧಿಸೂಚನೆಗಳನ್ನು ಒಟ್ಟುಗೂಡಿಸಿ ಶೋಧನಾ ಸಮಿತಿ ಇಲ್ಲದೇ ನೇಮಕಾತಿ ಮಾಡಲಾಗಿದೆ. ಕಾನೂನು ಪಾಲಿಸದೇ ನೇಮಕ ಮಾಡಿರುವವರು ಪ್ರಮಾಣ ಸ್ವೀಕರಿಸಿ, ಕೆಲಸ ಮಾಡುತ್ತಿರುವುದರಿಂದ ಮಧ್ಯಂತರ ಆದೇಶ ಮಾಡಬೇಕು. ಆನಂತರ ಅವರು ಆಕ್ಷೇಪಣೆ ಸಲ್ಲಿಸಬಹುದು” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಕೋರಿಕೆಯ ಕುರಿತು ಆದೇಶ ಕಾಯ್ದಿರಿಸಿದೆ. ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ ಎಂದು ಫೆಬ್ರವರಿ 4ರಂದು ನ್ಯಾಯಾಲಯ ಹೇಳಿತ್ತು.

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾಗಿ ಕೆ‌.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ.ಬದ್ರುದ್ದೀನ್ ಮತ್ತು ಬಿ.ಆರ್.ಮಮತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಮತ್ತು ಇತರ ಆಯುಕ್ತರು ಫೆಬ್ರವರಿ 4ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸೌಜನ್ಯ : ಬಾರ್ & ಬೆಂಚ್

ಕುಡಿಯುವ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಲು ನಿರ್ಧರಿಸಿದ ಬೆಂಗಳೂರು ಜಲಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...