Homeಕರ್ನಾಟಕಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ...

ಮಾಹಿತಿ ಆಯುಕ್ತರ ನೇಮಕಕ್ಕೆ ಶೋಧನಾ ಸಮಿತಿ ರಚಿಸಿಲ್ಲ ಎಂದ ಸರ್ಕಾರ : ಮಧ್ಯಂತರ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

- Advertisement -
- Advertisement -

‘ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರನ್ನು ನೇಮಕ ಮಾಡುವ ಮುನ್ನ ಶೋಧನಾ ಸಮಿತಿ ರಚನೆ ಮಾಡಿರಲಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ನೇಮಕಾತಿಗೆ ತಡೆ ಕೋರಿರುವ ಅರ್ಜಿದಾರರ ಮಧ್ಯಂತರ ಕೋರಿಕೆಗೆ ಸಂಬಂಧಿಸಿದಂತ ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.

ಮಾಹಿತಿ ಆಯುಕ್ತರ ಹುದ್ದೆಯ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಜೆ.ಪಿ ನಗರ 7ನೇ ಹಂತದ ನಿವಾಸಿ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ (ಫೆ. 18) ವಿಚಾರಣೆ ನಡೆಸಿದೆ.

ಈ ವೇಳೆ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್ ಶೆಟ್ಟಿ ಅವರು, “ಶೋಧನಾ ಸಮಿತಿಯನ್ನು ಕಡ್ಡಾಯವಾಗಿ ರಚಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದಿಷ್ಟ ನಿರ್ದೇಶನವನ್ನೂ ನೀಡಿಲ್ಲ. ಶೋಧನಾ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆಯಷ್ಟೇ” ಎಂದಿದ್ದಾರೆ.

“ನೇಮಕಾತಿಯಲ್ಲಿ ಯಾವ ಪ್ರಕ್ರಿಯೆ ಅನುಸರಿಸಲಾಗಿದೆ ಎಂಬುವುದರ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಿದೆ. ಅದನ್ನು ಸಲ್ಲಿಸಿ ಒಪ್ಪಿಗೆ ಪಡೆಯಲಾಗುವುದು. ಅರ್ಜಿಯು ಸುಪ್ರೀಂ ಕೋರ್ಟ್‌ ಪರಿಗಣನೆಗೆ ಒಳಪಟ್ಟಿರುವಾಗ ಇಲ್ಲಿ ಈ ಅರ್ಜಿಯನ್ನು ಪುರಸ್ಕರಿಸುವುದು ಸೂಕ್ತವಲ್ಲ” ಎಂದು ಹೇಳಿದ್ದಾರೆ.

ಸಿಐಸಿ ಮತ್ತು ಕೆಲ ಮಾಹಿತಿ ಆಯುಕ್ತರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ ಅವರು “ಅರ್ಜಿದಾರರು ಸಿಐಸಿ ಹುದ್ದೆಗೆ ಅರ್ಜಿ ಹಾಕಿರಲಿಲ್ಲ ಎಂದಾಗಲಿ, ಸಿಐಸಿಯಾಗಿ ನೇಮಕವಾಗಲು ಆಶಿತ್‌ ಮೋಹನ್‌ ಪ್ರಸಾದ್‌ ಅರ್ಹರಲ್ಲ ಎಂಬುದಕ್ಕೆ ಸಂಬಂಧಿಸಿದಂತೆಯಾಗಲಿ ಯಾವುದೇ ಗುಮಾನಿಯೂ ಅರ್ಜಿಯಲಿಲ್ಲ. ಹೀಗಾಗಿ, ಅರ್ಜಿ ವಜಾ ಮಾಡಬೇಕು” ಎಂದು ಕೋರಿದ್ದಾರೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ವಕೀಲ ಅಶೋಕ್‌ ಪಾಟೀಲ್‌ ಅವರು “ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರ ನೇಮಕಾತಿಗೂ ಮುನ್ನ ತಮಿಳುನಾಡು, ಮಹಾರಾಷ್ಟ್ರ, ಹರಿಯಾಣ ಮತ್ತು ತ್ರಿಪುರದಲ್ಲಿ ಶೋಧನಾ ಸಮಿತಿ ರಚಿಸಲಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್‌ ನಿರ್ದೇಶನಗಳು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ ಎನ್ನಲಾಗದು. ರಾಜ್ಯ ಸರ್ಕಾರವು 2024ರ ಜೂನ್‌ 11ರಂದು ಮುಖ್ಯ ಮಾಹಿತಿ ಆಯುಕ್ತರು ಮತ್ತು ಒಂದು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಆಹ್ವಾನಿಸಿತ್ತು. ಆದರೆ, ಸಿಐಸಿ ಮತ್ತು ಏಳು ಮಾಹಿತಿ ಆಯುಕ್ತರನ್ನು ನೇಮಿಸಲಾಗಿದೆ. ಇಲ್ಲಿ ಎರಡು ಅಧಿಸೂಚನೆಗಳನ್ನು ಒಟ್ಟುಗೂಡಿಸಿ ಶೋಧನಾ ಸಮಿತಿ ಇಲ್ಲದೇ ನೇಮಕಾತಿ ಮಾಡಲಾಗಿದೆ. ಕಾನೂನು ಪಾಲಿಸದೇ ನೇಮಕ ಮಾಡಿರುವವರು ಪ್ರಮಾಣ ಸ್ವೀಕರಿಸಿ, ಕೆಲಸ ಮಾಡುತ್ತಿರುವುದರಿಂದ ಮಧ್ಯಂತರ ಆದೇಶ ಮಾಡಬೇಕು. ಆನಂತರ ಅವರು ಆಕ್ಷೇಪಣೆ ಸಲ್ಲಿಸಬಹುದು” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಕೋರಿಕೆಯ ಕುರಿತು ಆದೇಶ ಕಾಯ್ದಿರಿಸಿದೆ. ರಾಜ್ಯ ಮುಖ್ಯ ಮಾಹಿತಿ ಆಯುಕ್ತ ಮತ್ತು ಮಾಹಿತಿ ಆಯುಕ್ತರು ಪ್ರಮಾಣ ವಚನ ಸ್ವೀಕರಿಸಿದ ಮಾತ್ರಕ್ಕೆ ಅರ್ಜಿದಾರರು ಮಧ್ಯಂತರ ಆದೇಶ ಕೋರಿರುವುದನ್ನು ಪರಿಗಣಿಸಬಾರದು ಎಂದೇನಿಲ್ಲ. ರಾಜ್ಯ ಸರ್ಕಾರವು ದಾಖಲೆಗಳನ್ನು ಸಲ್ಲಿಸಿದ ಬಳಿಕ ನ್ಯಾಯಾಲಯವು ಸೂಕ್ತ ಆದೇಶ ಮಾಡಲಿದೆ ಎಂದು ಫೆಬ್ರವರಿ 4ರಂದು ನ್ಯಾಯಾಲಯ ಹೇಳಿತ್ತು.

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾಗಿ ಕೆ‌.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ‌.ಚನ್ನಾಳ, ಎಸ್.ರಾಜಶೇಖರ, ಕೆ.ಬದ್ರುದ್ದೀನ್ ಮತ್ತು ಬಿ.ಆರ್.ಮಮತಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತ ಮತ್ತು ಇತರ ಆಯುಕ್ತರು ಫೆಬ್ರವರಿ 4ರಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸೌಜನ್ಯ : ಬಾರ್ & ಬೆಂಚ್

ಕುಡಿಯುವ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಲು ನಿರ್ಧರಿಸಿದ ಬೆಂಗಳೂರು ಜಲಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...