Homeಕರ್ನಾಟಕಚಲ್ಯ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಜೀವ ಭಯದಲ್ಲಿ ಶಾಲೆ ಬಿಡುತ್ತಿದ್ದಾರೆ ವಿದ್ಯಾರ್ಥಿಗಳು

ಚಲ್ಯ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಜೀವ ಭಯದಲ್ಲಿ ಶಾಲೆ ಬಿಡುತ್ತಿದ್ದಾರೆ ವಿದ್ಯಾರ್ಥಿಗಳು

- Advertisement -
- Advertisement -

ಸರ್ಕಾರದ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳು ದೂರ ಉಳಿದು, ಖಾಸಗೀ ಶಾಲೆಗಳ ಮೆಟ್ಟಿಲೇರುತ್ತಿದ್ದಾರೆ. ಕೊರೊನಾದಿಂದಾಗಿ  ಜನರ ಬದುಕು ಅತಂತ್ರಗೊಂಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಂದಾಗಿದ್ದಾರೆ.

ಇಂತಹ ಸಮಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಅಭಿವೃದ್ದಿ ಪಡಿಸಬೇಕಿದ್ದ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಹಲವು ಸರ್ಕಾರಿಗಳು ಶಾಲೆಗಳ ವಾತಾವರಣವೇ ಹದಗೆಟ್ಟಿದೆ. ಹೀಗೆ ಶಿಥಿಲಗೊಂಡಿರುವ ಶಾಲೆಗಳ ಪಟ್ಟಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂರಿನ ಚಲ್ಯ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಸೇರಿದೆ. 

ಶಾಲೆಯ ಕೆಲವು ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿವೆ. ಹೆಂಚುಗಳು ಬಿದ್ದುಹೋಗಿದ್ದು, ಶಾಲಾ ಕೊಠಡಿಗಳಿಗೆ ಸೂರು ಇಲ್ಲದಂತಾಗಿದೆ. ಮಳೆ ಬಂದರೆ ನೀರು ನೇರವಾಗಿ ಕೊಠಡಿಯೊಳಗೇ ಸೋರುತ್ತಿದೆ. ಶಾಲೆಗಾಗಿ ಕಟ್ಟಿದ್ದ ರಂಗಮಂದಿರ ಕುಸಿದು ಬಿದ್ದಿದೆ. ರಂಗಮಂದಿರಕ್ಕೆ ಹೊದಿಸಿದ್ದ ಶೀಟುಗಳು ಮಳೆ-ಗಾಳಿಯಿಂದ ಒಡೆದು, ಹಾರಿಹೋಗಿವೆ. ಬಿರುಕು ಬಿಟ್ಟಿರುವ ಗೋಡೆಗಳು ಯಾವಾಗ ಬೀಳುತ್ತವೋ ಎಂಬ ಆತಂಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಕಾಡುತ್ತಿದ್ದು, ಜೀವ ಭಯ ಎದುರಾಗಿದೆ. 

ಗೋಡೆಗಳು ಶಿಥಿಲವಾಗಿರುವುದು…

ಶಾಲೆಯ ಮುಖ್ಯಶಿಕ್ಷಕರು ಗ್ರಾಮ ಪಂಚಾಯಿತಿ, ಶಿಕ್ಷಣ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದಾರೆ. ಶಿಥಿಲಗೊಂಡಿರುವ ಶಾಲೆಯ ಕೊಠಡಿಗಳನ್ನು ರಿಪೇರಿ ಮಾಡಿಸಬೇಕು. ಹೆಂಚುಗಳನ್ನು ಹೊದಿಸಬೇಕು ಎಂದು ಹಲವಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. 

ಮನವಿ ಪತ್ರಗಳು ಮತ್ತು ಅರ್ಜಿಗಳನ್ನು ಪಡೆದ ಅಧಿಕಾರಿಗಳು, ಆ ಪತ್ರಗಳನ್ನು ಫೈಲ್‌ನಲ್ಲಿ ಭದ್ರವಾಗಿಟ್ಟಿದ್ದಾರೆಯೇ ಹೊರತು. ಇದೂವರೆಗೂ ಯಾವುದೇ ಕೆಲಸಗಳಾಗಿಲ್ಲ. 2019ರಿಂದ ಇದೂವರೆಗೂ ನಾಲ್ಕೈದು ಬಾರಿ ಶಾಲೆಯ ಮುಖ್ಯ ಶಿಕ್ಷಕರು ಇಲಾಖೆಯ ಗಮನಕ್ಕೆ ತಂದರೂ ಯಾರೂ ಶಾಲೆಯತ್ತ ಸುಳಿದಿಲ್ಲ ಎಂದು ಶಾಲೆಯ ಹಿರಿಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. 

ಹೀಗಾಗಿ, ಶಾಲೆಯ ಗೋಡೆಯೇನಾದರೂ ಕುಸಿದರೆ, ತಮ್ಮ ಮಕ್ಕಳ ಜೀವಕ್ಕೇ ಆಪತ್ತು ಎಂಬ ಭಯದಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ, ಅಕ್ಕ-ಪಕ್ಕದ ಊರುಗಳಲ್ಲಿರುವ ಖಾಸಗೀ ಶಾಲೆಗೆ ಸೇರಿಸುತ್ತಿದ್ದಾರೆ. 

ಕೆಲವು ವರ್ಷಗಳ ಹಿಂದೆ 100ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ್ದ ಈ ಸರ್ಕಾರಿ ಶಾಲೆ, ಈಗ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳನ್ನು ಮಾತ್ರ ಹೊಂದಿದೆ. ಶಾಲೆಯನ್ನು ಅಭಿವೃದ್ದಿ ಪಡಿಸಿ, ಹೆಚ್ಚು ಮಕ್ಕಳು ದಾಖಲಾಗುವಂತೆ ಮಾಡುವುದಕ್ಕಾಗಿ ಶಾಲೆಯ ಶಿಕ್ಷಕರು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರಿಗೆ ಇಲಾಖೆಯಿಂದಾಗಲೀ, ಗ್ರಾಮ ಪಂಚಾಯತಿಯಿಂದಾಗಲೀ ಸಹಕಾರ ದೊರೆಯುತ್ತಿಲ್ಲ ಎಂದು ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಆರೋಪಿಸಿದ್ದಾರೆ. 

ಇದೂವರೆಗೂ ಸಾವಿರಾರು ಗ್ರಾಮೀಣ ಮಕ್ಕಳು ವಿದ್ಯಾಭ್ಯಾಸ ಪಡೆದಿದ್ದ ಸರ್ಕಾರಿ ಶಾಲೆ ಈಗ ಮುಚ್ಚಿವ ಹಂತಕ್ಕೆ ಬಂದು ನಿಂತಿದೆ. ಶಾಲೆಯ ಹಿರಿಯ ವಿದ್ಯಾರ್ಥಿಗಳೂ ಮುಖ್ಯ ಶಿಕ್ಷಕರ ಜೊತೆ ನಿಂತು ಶಾಲೆಯ ಉಳಿವಿಗಾಗಿ ಯತ್ನಿಸುತ್ತಿದ್ದಾರೆ. ಸರ್ಕಾರ, ಶಿಕ್ಷಣ ಇಲಾಖೆ ಈ ಶಾಲೆಯತ್ತ ಗಮನ ಹರಿಸಬೇಕು. ಶಾಲೆಯನ್ನು ಅಭಿವೃದ್ದಿ ಪಡಿಸಲು ಮುಂದಾಗಬೇಕು ಎಂದು ಶಾಲೆಯ ಹಿರಿಯ ವಿದ್ಯಾರ್ಥಿ ಸುನೀಲ್‌ ಹೇಳಿದ್ದಾರೆ. 

ವರದಿ – ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...