Homeಕರ್ನಾಟಕಚಲ್ಯ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಜೀವ ಭಯದಲ್ಲಿ ಶಾಲೆ ಬಿಡುತ್ತಿದ್ದಾರೆ ವಿದ್ಯಾರ್ಥಿಗಳು

ಚಲ್ಯ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಜೀವ ಭಯದಲ್ಲಿ ಶಾಲೆ ಬಿಡುತ್ತಿದ್ದಾರೆ ವಿದ್ಯಾರ್ಥಿಗಳು

- Advertisement -
- Advertisement -

ಸರ್ಕಾರದ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳು ದೂರ ಉಳಿದು, ಖಾಸಗೀ ಶಾಲೆಗಳ ಮೆಟ್ಟಿಲೇರುತ್ತಿದ್ದಾರೆ. ಕೊರೊನಾದಿಂದಾಗಿ  ಜನರ ಬದುಕು ಅತಂತ್ರಗೊಂಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಂದಾಗಿದ್ದಾರೆ.

ಇಂತಹ ಸಮಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಅಭಿವೃದ್ದಿ ಪಡಿಸಬೇಕಿದ್ದ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಹಲವು ಸರ್ಕಾರಿಗಳು ಶಾಲೆಗಳ ವಾತಾವರಣವೇ ಹದಗೆಟ್ಟಿದೆ. ಹೀಗೆ ಶಿಥಿಲಗೊಂಡಿರುವ ಶಾಲೆಗಳ ಪಟ್ಟಿಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂರಿನ ಚಲ್ಯ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಸೇರಿದೆ. 

ಶಾಲೆಯ ಕೆಲವು ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟಿವೆ. ಹೆಂಚುಗಳು ಬಿದ್ದುಹೋಗಿದ್ದು, ಶಾಲಾ ಕೊಠಡಿಗಳಿಗೆ ಸೂರು ಇಲ್ಲದಂತಾಗಿದೆ. ಮಳೆ ಬಂದರೆ ನೀರು ನೇರವಾಗಿ ಕೊಠಡಿಯೊಳಗೇ ಸೋರುತ್ತಿದೆ. ಶಾಲೆಗಾಗಿ ಕಟ್ಟಿದ್ದ ರಂಗಮಂದಿರ ಕುಸಿದು ಬಿದ್ದಿದೆ. ರಂಗಮಂದಿರಕ್ಕೆ ಹೊದಿಸಿದ್ದ ಶೀಟುಗಳು ಮಳೆ-ಗಾಳಿಯಿಂದ ಒಡೆದು, ಹಾರಿಹೋಗಿವೆ. ಬಿರುಕು ಬಿಟ್ಟಿರುವ ಗೋಡೆಗಳು ಯಾವಾಗ ಬೀಳುತ್ತವೋ ಎಂಬ ಆತಂಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಕಾಡುತ್ತಿದ್ದು, ಜೀವ ಭಯ ಎದುರಾಗಿದೆ. 

ಗೋಡೆಗಳು ಶಿಥಿಲವಾಗಿರುವುದು…

ಶಾಲೆಯ ಮುಖ್ಯಶಿಕ್ಷಕರು ಗ್ರಾಮ ಪಂಚಾಯಿತಿ, ಶಿಕ್ಷಣ ಇಲಾಖೆಗೆ ಹಲವು ಬಾರಿ ಮನವಿ ಮಾಡಿದ್ದಾರೆ. ಶಿಥಿಲಗೊಂಡಿರುವ ಶಾಲೆಯ ಕೊಠಡಿಗಳನ್ನು ರಿಪೇರಿ ಮಾಡಿಸಬೇಕು. ಹೆಂಚುಗಳನ್ನು ಹೊದಿಸಬೇಕು ಎಂದು ಹಲವಾರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆದರೂ, ಯಾವುದೇ ಪ್ರಯೋಜನವಾಗಿಲ್ಲ. 

ಮನವಿ ಪತ್ರಗಳು ಮತ್ತು ಅರ್ಜಿಗಳನ್ನು ಪಡೆದ ಅಧಿಕಾರಿಗಳು, ಆ ಪತ್ರಗಳನ್ನು ಫೈಲ್‌ನಲ್ಲಿ ಭದ್ರವಾಗಿಟ್ಟಿದ್ದಾರೆಯೇ ಹೊರತು. ಇದೂವರೆಗೂ ಯಾವುದೇ ಕೆಲಸಗಳಾಗಿಲ್ಲ. 2019ರಿಂದ ಇದೂವರೆಗೂ ನಾಲ್ಕೈದು ಬಾರಿ ಶಾಲೆಯ ಮುಖ್ಯ ಶಿಕ್ಷಕರು ಇಲಾಖೆಯ ಗಮನಕ್ಕೆ ತಂದರೂ ಯಾರೂ ಶಾಲೆಯತ್ತ ಸುಳಿದಿಲ್ಲ ಎಂದು ಶಾಲೆಯ ಹಿರಿಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. 

ಹೀಗಾಗಿ, ಶಾಲೆಯ ಗೋಡೆಯೇನಾದರೂ ಕುಸಿದರೆ, ತಮ್ಮ ಮಕ್ಕಳ ಜೀವಕ್ಕೇ ಆಪತ್ತು ಎಂಬ ಭಯದಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆ ಬಿಡಿಸಿ, ಅಕ್ಕ-ಪಕ್ಕದ ಊರುಗಳಲ್ಲಿರುವ ಖಾಸಗೀ ಶಾಲೆಗೆ ಸೇರಿಸುತ್ತಿದ್ದಾರೆ. 

ಕೆಲವು ವರ್ಷಗಳ ಹಿಂದೆ 100ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ್ದ ಈ ಸರ್ಕಾರಿ ಶಾಲೆ, ಈಗ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳನ್ನು ಮಾತ್ರ ಹೊಂದಿದೆ. ಶಾಲೆಯನ್ನು ಅಭಿವೃದ್ದಿ ಪಡಿಸಿ, ಹೆಚ್ಚು ಮಕ್ಕಳು ದಾಖಲಾಗುವಂತೆ ಮಾಡುವುದಕ್ಕಾಗಿ ಶಾಲೆಯ ಶಿಕ್ಷಕರು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರಿಗೆ ಇಲಾಖೆಯಿಂದಾಗಲೀ, ಗ್ರಾಮ ಪಂಚಾಯತಿಯಿಂದಾಗಲೀ ಸಹಕಾರ ದೊರೆಯುತ್ತಿಲ್ಲ ಎಂದು ಶಾಲೆಯ ಹಳೆಯ ವಿದ್ಯಾರ್ಥಿಯೊಬ್ಬರು ಆರೋಪಿಸಿದ್ದಾರೆ. 

ಇದೂವರೆಗೂ ಸಾವಿರಾರು ಗ್ರಾಮೀಣ ಮಕ್ಕಳು ವಿದ್ಯಾಭ್ಯಾಸ ಪಡೆದಿದ್ದ ಸರ್ಕಾರಿ ಶಾಲೆ ಈಗ ಮುಚ್ಚಿವ ಹಂತಕ್ಕೆ ಬಂದು ನಿಂತಿದೆ. ಶಾಲೆಯ ಹಿರಿಯ ವಿದ್ಯಾರ್ಥಿಗಳೂ ಮುಖ್ಯ ಶಿಕ್ಷಕರ ಜೊತೆ ನಿಂತು ಶಾಲೆಯ ಉಳಿವಿಗಾಗಿ ಯತ್ನಿಸುತ್ತಿದ್ದಾರೆ. ಸರ್ಕಾರ, ಶಿಕ್ಷಣ ಇಲಾಖೆ ಈ ಶಾಲೆಯತ್ತ ಗಮನ ಹರಿಸಬೇಕು. ಶಾಲೆಯನ್ನು ಅಭಿವೃದ್ದಿ ಪಡಿಸಲು ಮುಂದಾಗಬೇಕು ಎಂದು ಶಾಲೆಯ ಹಿರಿಯ ವಿದ್ಯಾರ್ಥಿ ಸುನೀಲ್‌ ಹೇಳಿದ್ದಾರೆ. 

ವರದಿ – ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...