Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...