Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...