Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...