Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...