Homeಕರ್ನಾಟಕಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್...

ಸರ್ಕಾರಿ ಶಾಲೆ ಅವರ ಅಪ್ಪನದ್ದಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯ ಕುಮಾರ್ ಆಕ್ರೋಶ

- Advertisement -
- Advertisement -

ಪ್ರಾಥಮಿಕ ಆಗಲಿ ಉನ್ನತ ಶಿಕ್ಷಣವಾಗಲಿ ಅದು ಬಂಡವಾಳಶಾಹಿಗಳ ಕೈಗೆ ಹೋಗಿಬಿಟ್ಟಾಗಿದೆ. ಆರೋಗ್ಯ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಉದ್ಯೋಗದ ವಿಚಾರದಲ್ಲಿ ಖಾಲಿ ಉದ್ಯೋಗಗಳನ್ನು ತುಂಬುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್ ಗುರುವಾರ ಹೇಳಿದರು. ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ಎರಡನೇ ದಿನದ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರ್ಕಾರಿ ಶಾಲೆ

“ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿಗೆ ಪ್ರಾಧಾನ್ಯತೆ ನೀಡುತ್ತಿಲ್ಲ. ಕೃಷಿಯಿಂದ ಯುವಜನರು ವಲಸೆ ಹೋಗುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯನ್ನು ನೀಡುತ್ತಿಲ್ಲ. ಕೃಷಿ ವಲಯವನ್ನು ಗಟ್ಟಿ ಮಾಡಿದರೆ ವಲಸೆ ಕಡಿಮೆ ಆಗಲಿದೆ. ಕೃಷಿ ಕ್ಷೇತ್ರದಲ್ಲಿ ಕೂಲಿಕಾರರು ಇಲ್ಲದೆ ಭೂಮಿ ಬೀಳು ಬಿದ್ದಿದೆ. ಈ ಕೂಲಿಕಾರರಿಗೆ ಸರ್ಕಾರ ಪ್ರೋತ್ಸಾಹ ಮಾಡಬೇಕು.‌ ಆರೊಗ್ಯ, ಶಿಕ್ಷಣ, ಕೃಷಿಯನ್ನು ಖಾಸಗಿಗೆ ವಹಿಸುವುದು ಎಂದರೆ ಅದೊಂದು ಹುನ್ನಾರ ಆಗಿದೆ” ಎಂದು ಹೇಳಿದರು. ಸರ್ಕಾರಿ ಶಾಲೆ

ವಿಚಾರಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್, “ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ 2.5% ಶಿಕ್ಷಣಕ್ಕಾಗಿ ಮೀಸಲಿಟ್ಟರೆ ಮತ್ತು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 10% ಮಾತ್ರ ಶಿಕ್ಷಣಕ್ಕೆ ಮೀಸಲಿಟ್ಟಿದೆ. ವಿಶ್ವದ ಸಣ್ಣ ಸಣ್ಣ ದೇಶಗಳು ತನ್ನ ಬಜೆಟ್‌ನಲ್ಲಿ 15% ದಿಂದ 20%ದ ವರೆಗೆ ಶಿಕ್ಷಣಕ್ಕಾಗಿ ಮೀಸಲಿಡುತ್ತಿದೆ” ಎಂದು ಹೇಳಿದರು.

ಕೋಲಾರದಲ್ಲಿ ರಾಜ್ಯ ಸರ್ಕಾರ ವೈದ್ಯಕೀಯ ಕಾಲೇಜನ್ನು ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸುತ್ತಿದೆ. ಆದರೆ ಈ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಬಾರದು. ಅದನ್ನು ಸರ್ಕಾರವೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲೀ ಪಾಟೀಲ್

“ಶಾಲೆಗಳನ್ನು ಮುಚ್ಚಲು ಬಿಜೆಪಿಯ ಸುನಿಲ್ ಕುಮಾರ್ ಮತ್ತು ಕಾಂಗ್ರೆಸ್‌ನ ಶಿವಲಿಂಗೇಗೌಡ ಅವರು ಬೆಂಬಲ ನೀಡುತ್ತಿದ್ದಾರೆ. ಖಾಸಗಿ ಅನಧೀಕೃತ ಶಾಲೆಗಳನ್ನು ಮುಚ್ದಲು ಧಮ್ ಇಲ್ಲದ ಸರ್ಕಾರ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಲು ಅದು ಅವರ ಅಪ್ಪನದ್ದಾ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೈಲಿನಲ್ಲಿರುವ ಖೈದಿಗಳ ಆಹಾರಕ್ಕೆ 75 ರೂ. ಕೊಡುವ ಸರ್ಕಾರ, ಹಾಸ್ಟೆಲ್‌ನಲ್ಲಿ ಓದುವ ವಿದ್ಯಾರ್ಥಿಗಳಿಗೆ 61 ರೂ. ನೀಡುತ್ತಿದೆ. ಬಜೆಟ್‌ನ ಮೊತ್ತದಲ್ಲಿ ಏನೂ ಅಲ್ಲದ, 150 ಕೋಟಿ ರೂ. ನೀಡಿ ಸೈಕಲ್ ವಿತರಣೆ ಮಾಡಲು ಕೂಡಾ ಸರ್ಕಾರ ಮುಂದಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಐಎಸ್‌ಎ ರಾಷ್ಟ್ರೀಯ ಕಾರ್ಯದರ್ಶಿ ಲೇಖಾ ಅಡವಿ ಮಾತನಾಡಿ, ಶಿಕ್ಷಣದ ಕೇಂದ್ರಿಕರಣ, ಕೋಮುವಾದಿಕರಣ ಮತ್ತು ಕಾರ್ಪೋರೇಟೀಕರಣ ಬಗ್ಗೆ ನಾವು ಮಾತಾಡಬೇಕಾಗುತ್ತದೆ. ಬಿಜೆಪಿ ತಂದ ಎನ್‌ಇಪಿಯನ್ನು ಕಾಂಗ್ರೆಸ್ ಸರ್ಕಾರ ಹಿಂಬಾಗಿಲಿನ ಮೂಲಕ ಜಾರಿ ಮಾಡುತ್ತಿದೆ. ಕೇಂದ್ರದಂತೆ ರಾಜ್ಯ ಸರ್ಕಾರ ಕೂಡಾ ಸಾಲ ಮಾಡಿ ಯುನಿವರ್ಸಿಟಿಗಳನ್ನು ನಡೆಸಲು ಮುಂದಾಗುತ್ತಿದೆ. ಆದರೆ, ಈ ಸಾಲವನ್ನು ಭರಿಸಬೇಕಾದವರು ವಿದ್ಯಾರ್ಥಿಗಳು ಮತ್ತು ಅವರ ಪೋಷಕರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಪ್ರೊಫೆಸರ್ ಆಫ್ ಪ್ರಾಕ್ಟಿಸ್ ಜಾರಿ ಕೂಡಾ ಅಪಾಯಕಾರಿಯಾಗಿದೆ. ರಾಜ್ಯದ ವಿಶ್ವವಿದ್ಯಾಲಯದಲ್ಲಿ ಅನುದಾನಗಳು ಇಲ್ಲ, ಕಾಲೇಜುಗಳಲ್ಲಿ ಮೂಲಭೂತವಾಗಿ ಸೌಕರ್ಯಗಳು ಇಲ್ಲ. ಸರ್ಕಾರ ಬಿಡಗಡೆ ಮಾಡುತ್ತಿರುವ ಅನುದಾನ ಈ ಮೂಲ ಸೌಕರ್ಯಕ್ಕಾಗಿ ಬಳಸಲಾಗುತ್ತಿಲ್ಲ. ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿ ಸಂಘಟನೆಗಳು ಫೀಸ್ ಹೆಚ್ಚಳದ ವಿರುದ್ಧ ಹೋರಾಟ ಮಾಡುವ ಪರಿಸ್ಥಿತಿಯಿದೆ” ಎಂದು ಅವರು ಹೇಳಿದರು.

“ಉತ್ತಮ ಶಿಕ್ಷಣ ಪಡೆಯುವುದರಲ್ಲಿ ವಂಚಿತರನ್ನಾಗಿ ಮಾಡುತ್ತಿದ್ದಾರೆ. ಸರ್ಕಾರ ಖಾಸಗಿ ವಿಶ್ವವಿದ್ಯಾಲಯಗಳ ಪ್ರಾರಂಭಕ್ಕೆ ಪ್ರೋತ್ಸಾಹ ನೀಡುತ್ತಿದೆ. ಈ ಖಾಸಗಿ ಸಂಸ್ಥೆಯಲ್ಲಿ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯವನ್ನು ಎಷ್ಟು ಮಟ್ಟಿಗೆ ಪಾಲಿಸಲಾಗುತ್ತಿದೆ ಎಂಬ ಮಾಹಿತಿಯಿಲ್ಲ” ಎಂದು ಅವರು ಹೇಳಿದರು.

“ಶಿಕ್ಷಣದ ಕೋಮುವಾದಿಕರಣ ಆಗುತ್ತಿದ್ದು, ಬಿಜೆಪಿ ಸರ್ಕಾರ ಇದ್ದಾಗ, ಹಿಜಾಬ್ ಮತ್ತು ಮುಸ್ಲಿಂ ಮೀಸಲಾತಿ ರದ್ದಿ ಮಾಡಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರ ಈ ಮುಸ್ಲಿಂ ವಿದ್ಯಾರ್ಥಿಗಳ ಬಗ್ಗೆ ಮಾತನಾಡುತ್ತಿಲ್ಲ. ಸಂವಿಧಾನದ ಆಶಯಗಳನ್ನು ಪ್ರತಿಪಾದಿಸಲು, ವೈಜ್ಞಾನಿಕ ಚಿಂತನೆಗಳನ್ನು ಪ್ರತಿಪಾದಿಸಲು ಸರ್ಕಾರ ಏನು ಮಾಡತ್ತಿವೆ ಎಂದು ನಾವು ಪ್ರಶ್ನಿಸಬೇಕಾಗಿದೆ. ಜೊತೆಗೆ, ವೈಚಾರಿಕತೆ ಬೆಳೆಯಲು ಗ್ರಂಥಾಲಯಗಳ ನಿರ್ಮಾಣಕ್ಕೆ ಸರ್ಕಾರ ಯಾವುದೇ ಅನುದಾನ ಈ ಬಜೆಟ್‌ನಲ್ಲಿ ನೀಡಿಲ್ಲ” ಎಂದು ಲೇಖಾ ಅಡವಿ ದೂರಿದರು.

ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅವರು ಮಾತನಾಡಿ, “500 ಪಬ್ಲಿಕ್ ಶಾಳೆಗಳನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಹೇಳುವ ಸರ್ಕಾರ, ಅದೇ ವೇಳೆ ವಿದ್ಯಾರ್ಥಿಗಳು ಇಲ್ಲ ಎಂದು 6000 ಶಾಲೆಗಳನ್ನು ಮುಚ್ಚಲು ಹೊರಟಿದೆ. ಇದು ನೆಗಡಿ ಬಂದರೆ ಮೂಗು ಕತ್ತರಿಸಿದಂತೆ ಆಗಲಿದೆ. ಆದರೆ, ಈ ಶಾಲೆಗಳಿಗೆ ಯಾಕೆ ಮಕ್ಕಳು ಬರುತ್ತಿಲ್ಲ ಎಂದು ಸರ್ಕಾರ ಯೋಚಿಸುತ್ತಿಲ್ಲ” ಎಂದು ಹೇಳಿದರು.

“ಸಾವಿರಾರು ಏಕೋಪಧ್ಯಾ ಯ ಶಾಲೆಗಳಿವೆ, ಸರಿಯಾದ ಅಧ್ಯಾಪಕರಿಲ್ಲದ ಹಲವಾರು ಶಾಲೆಗಳು ಇಲ್ಲ. ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ನೀಡುತ್ತಿಲ್ಲ. ಅದೇ ಸರ್ಕಾರ ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎಂದು ಹೇಳುತ್ತಿದೆ. ಸರ್ಕಾರಿ ಶಾಲೆಗಳನ್ನು, ವಿಶ್ವವಿದ್ಯಾಲಗಳನ್ನು ಬಂದ್ ಮಾಡಿ ಶಿಕ್ಷಣ ನಮ್ಮ ಜವಾಬ್ದಾರಿ ಅಲ್ಲ ಎಂದು ಪ್ರತಿಪಾದಿಸುತ್ತದೆ. ಸಾರ್ವಜನಿಕ ಶಿಕ್ಷಣವನ್ನು ಉಳಿಸುವ ಯಾವುದೇ ಉದ್ದೇಶ ಆಳುವ ಸರ್ಕಾರಗಳಿಗೆ ಇಲ್ಲ” ಎಂದು ಅವರು ಹೇಳಿದರು. ಸರ್ಕಾರಿ ಶಾಲೆ

ಶಾಲೆಗಳನ್ನು ಮುಚ್ಚಲು ಹೊರಟಿದ್ದ ಬೊಮ್ಮಾಯಿ ಅವರು ಪ್ರತಿಭಟನೆ ಕಾರಣಕ್ಕೆ ಆ ಆದೇಶವನ್ನು ವಾಪಾಸು ಪಡೆದರು. ಆದರೆ ಈಗ ಸಿದ್ದರಾಂಯ್ಯ ಅವರು ಅದೇ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ, “ಶಿಕ್ಷಣಕ್ಕೆ ಇಟ್ಟ ಮೊತ್ತದಲ್ಲಿ ಕಳೆದ ಬಾರಿಗಿಂತ 2% ಕಡಿತ ಮಾಡಿದ್ದಾರೆ. ತಜ್ಞರು ಶಿಕ್ಷಣಕ್ಕಾಗಿ ಕನಿಷ್ಠ 15 ರಿಂದ 20% ಇಡಬೇಕು ಎಂದು ಹೇಳುತ್ತಿದ್ದಾರೆ. ಸರ್ಕಾರಿ ಶಾಲೆಗೆ ಮತ್ತು ಖಾಸಗಿ ಶಾಲೆಗೆ ಹೋಗುವ ಮಕ್ಕಳಿಗೆ ನಾವು ಯಾಕೆ ಸರ್ಕಾರಿ ಮತ್ತು ಖಾಸಗಿ ಶಾಲೆಗೆ ಹೋಗುತ್ತಿದ್ದೇವೆ ಎಂದು ಅವರಿಗೆ ತಿಳಿಯುತ್ತಿದೆ. ಬಡತನ ಮತ್ತು ಶ್ರೀಮಂತಿಕೆ ಕಾರಣಕ್ಕಾಗಿ ನಾವು ಇಲ್ಲಿದ್ದೇವೆ ಎಂದು ಅವರಲ್ಲಿ ಅಸಮಾನತೆಯನ್ನು ಸರ್ಕಾರವೆ ಪೋಷಿಸುತ್ತಿದೆ” ಎಂದು ಹೇಳಿದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...