Homeಕರ್ನಾಟಕಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

- Advertisement -
- Advertisement -

ಅಸೋಸಿಯೆಟಡ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಆಂಡ್ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ ಎಂಬ ಖಾಸಗಿ ಶಾಲೆಗಳ ಸಂಘ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು “ಸರ್ಕಾರಿ ಶಾಲೆ ಶಿಕ್ಷಕರು ಆಮಿಷವೊಡ್ಡಿ ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ” ಎಂದು ದೂರು ನೀಡಿದೆ.

ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಬರೆದ ಪತ್ರದಲ್ಲಿ “ಸರ್ಕಾರಿ ಶಾಲೆಗಳು ರಾಷ್ಟ್ರೀಯ ವಿಪತ್ತು ಕಾಯಿದೆಯ ಮಾರ್ಗಸೂಚಿಯಂತೆ ಯಾವುದೇ ಶಾಲಾ-ಕಾಲೇಜುಗಳು ಪ್ರಾರಂಭ ಆಗಬಾರದೆಂದು ನಿಯಮವಿದ್ದರೂ ಸಾರ್ವಜನಿಕ ಶಿಕ್ಷಣ ಇಲಾಖೆ, ನಿಯಮವನ್ನು ಉಲ್ಲಂಘಿಸಿ ರಾಜ್ಯದ ಹಲವಾರು ಕಡೆ ‘ವಿದ್ಯಾಗಮ ಯೋಜನೆ’ ಹಸರಿನಲ್ಲಿ ಶಾಲೆಯ ತರಗತಿಯ ಒಳಗೆ ಹಾಗೂ ಹೊರಗೆ ಪಾಠ ಮಾಡುತ್ತಿದೆ” ಎಂದು ಉಲ್ಲೇಖಿಸಿದೆ.

“ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಸರ್ಕಾರಿ ಶಿಕ್ಷಕರು ಮನೆಮನೆಗೆ ತೆರಳಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಈ ವರ್ಷ ಪ್ರಾರಂಭವಾಗುವುದಿಲ್ಲ. ನಮ್ಮಲ್ಲಿ ಮಾತ್ರ ಶಿಕ್ಷಣ ನೀಡುತ್ತೇವೆ ಹಾಗೂ ಆಹಾರ ಮತ್ತು ಪುಸ್ತಕ ನೀಡುತ್ತೇವೆ ಎಂದು ಆಮಿಷವೊಡ್ಡಿ, ವಾಮಮಾರ್ಗವಾಗಿ ಮಕ್ಕಳನ್ನು ಸೆಳೆಯುತ್ತಿದೆ” ಎಂದು ಪತ್ರ ಆರೋಪಿಸಿದೆ.

“ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಬಿಡದೆ, ಶಿಕ್ಷಣ ಇಲಾಖೆಯ ಈ ಧೋರಣೆ ಮತ್ತು ಕಾನೂನು ಬಾಹಿರವಾಗಿ ಶಾಲೆಗಳ ಒಳಗೆ ಯಾವುದೇ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸದೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಶಾಲೆಗಳನ್ನು ನಡೆಸುತ್ತಿದೆ” ಎಂದು ಪತ್ರದಲ್ಲಿ ದೂರಲಾಗಿದೆ.

ಆದರೆ ಖಾಸಗಿ ಶಾಲಾ ಸಂಘಟನೆಯ ಈ ಆರೋಪವನ್ನು ನಿರಾಕರಿಸಿದ ಸರ್ಕಾರಿ ಶಿಕ್ಷಕರೊಬ್ಬರು, “ಅವರು ಯಾವ ಉದ್ದೇಶದಿಂದ ಈ ಆರೋಪ ಮಾಡಿದ್ದಾರೆ ಎಂದು ತಿಳಿದಿಲ್ಲ. ನಾವು ಸರ್ಕಾರದ ನಿಯಮವನ್ನು ಎಲ್ಲಿಯೂ ಉಲ್ಲಂಘಿಸಿಲ್ಲ. ಮಕ್ಕಳಿಗೆ ಶೂನ್ಯ ಕಲಿಕೆ ಆಗಬಾರದು ಎಂಬ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ನಮ್ಮದೆ ಶಾಲೆಯ ಮಕ್ಕಳನ್ನು ಶಾಲೆಯ ಹೊರಗಡೆ ಹಿಂದಿನ ವರ್ಷದ ಪಾಠಗಳನ್ನು ಪುನರ್-ಮನನ ಮಾಡುತ್ತಿದ್ದೇವೆ. ಖಾಸಗಿ ಶಾಲೆಗಳು ಆನ್‍ಲೈನ್ ಶಿಕ್ಷಣ ಎಂದು ಈಗಾಗಲೆ ಕಲಿಕೆಯನ್ನು ಮುಂದುವರೆಸಿದೆ. ಆದರೆ ಸರ್ಕಾರಿ ಶಾಲೆಗೆ ಬರುವ ಮಕ್ಕಳಿಗೆ ಇಂತಹ ವ್ಯವಸ್ಥೆ ಇರುವುದಿಲ್ಲ. ವಿದ್ಯಾಗಮ ಯೋಜನೆ ಉತ್ತಮ ಯೋಜನೆಯಾಗಿದೆ. ಇಷ್ಟೂ ಆಗದಿದ್ದರೆ ಮಕ್ಕಳನ್ನು ಕಲಿಕೆಗೆ ಮರುಹೊಂದಿಸಿಕೊಳ್ಳಲು ಕಷ್ಟಕರವಾಗುತ್ತದೆ ಅಲ್ಲದೆ ಅವರು ಅಕ್ಷರಗಳನ್ನು ಮರೆತು ಬಿಡುವ ಅಪಾಯವಿದೆ” ಎಂದು ಹೇಳಿದ್ದಾರೆ.


ಓದಿ: ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...