Homeಕರ್ನಾಟಕಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

- Advertisement -
- Advertisement -

ಅಸೋಸಿಯೆಟಡ್ ಮ್ಯಾನೇಜ್ಮೆಂಟ್ ಆಫ್ ಪ್ರೈಮರಿ ಆಂಡ್ ಸೆಕೆಂಡರಿ ಸ್ಕೂಲ್ಸ್ ಇನ್ ಕರ್ನಾಟಕ ಎಂಬ ಖಾಸಗಿ ಶಾಲೆಗಳ ಸಂಘ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು “ಸರ್ಕಾರಿ ಶಾಲೆ ಶಿಕ್ಷಕರು ಆಮಿಷವೊಡ್ಡಿ ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ” ಎಂದು ದೂರು ನೀಡಿದೆ.

ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಬರೆದ ಪತ್ರದಲ್ಲಿ “ಸರ್ಕಾರಿ ಶಾಲೆಗಳು ರಾಷ್ಟ್ರೀಯ ವಿಪತ್ತು ಕಾಯಿದೆಯ ಮಾರ್ಗಸೂಚಿಯಂತೆ ಯಾವುದೇ ಶಾಲಾ-ಕಾಲೇಜುಗಳು ಪ್ರಾರಂಭ ಆಗಬಾರದೆಂದು ನಿಯಮವಿದ್ದರೂ ಸಾರ್ವಜನಿಕ ಶಿಕ್ಷಣ ಇಲಾಖೆ, ನಿಯಮವನ್ನು ಉಲ್ಲಂಘಿಸಿ ರಾಜ್ಯದ ಹಲವಾರು ಕಡೆ ‘ವಿದ್ಯಾಗಮ ಯೋಜನೆ’ ಹಸರಿನಲ್ಲಿ ಶಾಲೆಯ ತರಗತಿಯ ಒಳಗೆ ಹಾಗೂ ಹೊರಗೆ ಪಾಠ ಮಾಡುತ್ತಿದೆ” ಎಂದು ಉಲ್ಲೇಖಿಸಿದೆ.

“ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಸರ್ಕಾರಿ ಶಿಕ್ಷಕರು ಮನೆಮನೆಗೆ ತೆರಳಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಈ ವರ್ಷ ಪ್ರಾರಂಭವಾಗುವುದಿಲ್ಲ. ನಮ್ಮಲ್ಲಿ ಮಾತ್ರ ಶಿಕ್ಷಣ ನೀಡುತ್ತೇವೆ ಹಾಗೂ ಆಹಾರ ಮತ್ತು ಪುಸ್ತಕ ನೀಡುತ್ತೇವೆ ಎಂದು ಆಮಿಷವೊಡ್ಡಿ, ವಾಮಮಾರ್ಗವಾಗಿ ಮಕ್ಕಳನ್ನು ಸೆಳೆಯುತ್ತಿದೆ” ಎಂದು ಪತ್ರ ಆರೋಪಿಸಿದೆ.

“ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಬಿಡದೆ, ಶಿಕ್ಷಣ ಇಲಾಖೆಯ ಈ ಧೋರಣೆ ಮತ್ತು ಕಾನೂನು ಬಾಹಿರವಾಗಿ ಶಾಲೆಗಳ ಒಳಗೆ ಯಾವುದೇ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸದೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಶಾಲೆಗಳನ್ನು ನಡೆಸುತ್ತಿದೆ” ಎಂದು ಪತ್ರದಲ್ಲಿ ದೂರಲಾಗಿದೆ.

ಆದರೆ ಖಾಸಗಿ ಶಾಲಾ ಸಂಘಟನೆಯ ಈ ಆರೋಪವನ್ನು ನಿರಾಕರಿಸಿದ ಸರ್ಕಾರಿ ಶಿಕ್ಷಕರೊಬ್ಬರು, “ಅವರು ಯಾವ ಉದ್ದೇಶದಿಂದ ಈ ಆರೋಪ ಮಾಡಿದ್ದಾರೆ ಎಂದು ತಿಳಿದಿಲ್ಲ. ನಾವು ಸರ್ಕಾರದ ನಿಯಮವನ್ನು ಎಲ್ಲಿಯೂ ಉಲ್ಲಂಘಿಸಿಲ್ಲ. ಮಕ್ಕಳಿಗೆ ಶೂನ್ಯ ಕಲಿಕೆ ಆಗಬಾರದು ಎಂಬ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ನಮ್ಮದೆ ಶಾಲೆಯ ಮಕ್ಕಳನ್ನು ಶಾಲೆಯ ಹೊರಗಡೆ ಹಿಂದಿನ ವರ್ಷದ ಪಾಠಗಳನ್ನು ಪುನರ್-ಮನನ ಮಾಡುತ್ತಿದ್ದೇವೆ. ಖಾಸಗಿ ಶಾಲೆಗಳು ಆನ್‍ಲೈನ್ ಶಿಕ್ಷಣ ಎಂದು ಈಗಾಗಲೆ ಕಲಿಕೆಯನ್ನು ಮುಂದುವರೆಸಿದೆ. ಆದರೆ ಸರ್ಕಾರಿ ಶಾಲೆಗೆ ಬರುವ ಮಕ್ಕಳಿಗೆ ಇಂತಹ ವ್ಯವಸ್ಥೆ ಇರುವುದಿಲ್ಲ. ವಿದ್ಯಾಗಮ ಯೋಜನೆ ಉತ್ತಮ ಯೋಜನೆಯಾಗಿದೆ. ಇಷ್ಟೂ ಆಗದಿದ್ದರೆ ಮಕ್ಕಳನ್ನು ಕಲಿಕೆಗೆ ಮರುಹೊಂದಿಸಿಕೊಳ್ಳಲು ಕಷ್ಟಕರವಾಗುತ್ತದೆ ಅಲ್ಲದೆ ಅವರು ಅಕ್ಷರಗಳನ್ನು ಮರೆತು ಬಿಡುವ ಅಪಾಯವಿದೆ” ಎಂದು ಹೇಳಿದ್ದಾರೆ.


ಓದಿ: ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...