Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...