Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...