Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...