Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...