Homeಕರ್ನಾಟಕದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

ದಕ್ಷಿಣ ಕನ್ನಡದ ಸರ್ಕಾರಿ ಶಾಲೆಯಲ್ಲಿ ‘ಗಣಹೋಮ’: ಶಿಕ್ಷಣ ಇಲಾಖೆಯ ನಿರ್ದೇಶನ ಉಲ್ಲಂಘನೆ?

- Advertisement -
- Advertisement -

ಮೇ 16ರ ಸೋಮವಾರದಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಾಲೆಗಳು ಪ್ರಾರಂಭಗೊಂಡಿದೆ. ಶಿಕ್ಷಕರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಆದರೆ, ಈ ಮಧ್ಯೆ ದಕ್ಷಿಣ ಕನ್ನಡದ ಕೆಲವೆಡೆ ಶಾಲೆಗಳಲ್ಲಿ ‘ಗಣಹೋಮ’ ನಡೆಸುವ ಮೂಲಕ ಶಾಲೆ ಪ್ರಾರಂಭ ಮಾಡಿದ್ದು, ಕಾರ್ಯಕ್ರಮದ ಫೋಟೋಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಹಿಜಾಬ್‌ ಸಂಬಂಧಿ ವಿವಾದ ಇಡೀ ರಾಜ್ಯವನ್ನು ಆವರಿಸಿಕೊಂಡು ಜಗತ್ತಿನ ಗಮನವನ್ನೇ ಸೆಳೆದಿತ್ತು. ಧಾರ್ಮಿಕ ಸಂಕೇತವಾದ ಹಿಜಾಬ್‌ ತೊಡುವುದರ ವಿರುದ್ಧ ಬಿಜೆಪಿ ಪರ ಸಂಘಟನೆಗಳು ವಿರೋಧಿಸಿದ್ದವು. ಹೈಕೋರ್ಟ್‌ ಮೆಟ್ಟಿಲೇರಿದ್ದ ಈ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ 15ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ನೀಡಿತ್ತು. ಈ ವೇಳೆ, ‘ಧಾರ್ಮಿಕ ಸಂಕೇತ ಸೂಚಿಸುವ ಉಡುಪು ಧರಿಸುವುದನ್ನು ಕೈಬಿಡುವಂತೆ’ ಆದೇಶಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಮೇ 16ರ ಸೋಮವಾರ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಡಿಬಾಗಿಲು, ಸುಳ್ಯ ತಾಲೂಕಿನ ಹರಿಹರಪಳ್ಳತ್ತಡ್ಕ ಮತ್ತು ಪೂಂಜಾಲಕಟ್ಟೆಯಲ್ಲಿ ‘ಗಣಹೋಮ’ ಪೂಜಾವಿಧಿಯೊಂದಿಗೆ ಶಾಲಾ ಪ್ರಾರಂಭೋತ್ಸವ ನಡೆದಿದ್ದು, ಹಿಂದೂ ಧರ್ಮದ ಸಂಪ್ರದಾಯವಾದ ಹೋಮ, ಪೂಜೆಗಳನ್ನು ನಡೆಸಿರುವುದು ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಸಂವಿಧಾನಕ್ಕೆ ಅಗೌರವ ತೋರುವ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ವಿಧೇಯಕ

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ ಎಂ.ಪಿ, “ಸಂಬಂಧಪಟ್ಟವರಲ್ಲಿ ಉತ್ತರ ಕೇಳಿ ನೋಟಿಸ್ ನೀಡಲಾಗುವುದು. ಅವರ ಉತ್ತರದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾಗಿ ಈದಿನ.ಕಾಮ್ ವರದಿ ಮಾಡಿದೆ.

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ ಅವರು, “ಇಲಾಖೆ ನಿರ್ದೇಶನದಂತೆ ಶಾಲಾ ಪ್ರಾರಂಭೋತ್ಸವ ನಡೆಯಬೇಕಿತ್ತು. ಉಲ್ಲಂಘನೆ ಮಾಡಿದ್ದರೆ ಅದು ತಪ್ಪು. ಈ ಬಗ್ಗೆ ವಿಚಾರಿಸಲಾಗುವುದು” ಎಂದು ತಿಳಿಸಿದ್ದಾರೆ.

ಹಿಜಾಬ್‌ ಪ್ರಕರಣದಲ್ಲಿ ಮುನ್ನೆಲೆಯಲ್ಲಿದ್ದ ಬಿಜೆಪಿ ಶಾಸಕ, ರಘುಪತಿ ಭಟ್ ಅವರನ್ನು ಈ ದಿನ. ಕಾಮ್ ಸಂಪರ್ಕಿಸಿದಾಗ, “ನಾನು ಸದ್ಯ ದೆಹಲಿಯಲ್ಲಿದ್ದು, ನಾಳೆ ಪ್ರತಿಕ್ರಿಯಿಸುತ್ತೇನೆ” ಎಂದು ಹೇಳಿದ್ದಾರೆ.

ಫೋಟೋಗಳು ವೈರಲ್‌ ಆದ ಹಿನ್ನೆಲೆಯಲ್ಲಿ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, “ಹಿಜಾಬನ್ನು ಹಿಡಿದು ಈ ನೆಲದ ಕಾನೂನು ಅದು ಇದು ಎಂದು ಹೇಳಿರುವುದು ಕೇವಲ ಮುಸ್ಲಿಂ ದ್ವೇಷದ ರಾಜಕಾರಣದ ಭಾಗವಷ್ಟೇ. ಈ ಹಿಂದಿನಿಂದಲೂ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಒಂದು ಧರ್ಮವನ್ನು ಪ್ರತಿನಿಧಿಸುವ ಆಚರಣೆ ಮಾಡುವುದಕ್ಕೆ ಕಾನೂನಿನ ಬೆಂಬಲವಿಲ್ಲ. ಆದರೂ ಪೊಲೀಸ್ ಠಾಣೆ ಸೇರಿದಂತೆ ಹಲವೆಡೆ ಆಯುಧ ಪೂಜೆ, ಗಣೇಶ ಚೌತಿಯನ್ನು ಆಚರಿಸಲಾಗುತ್ತದೆ. ಆದರೆ ಅದನ್ನು ಯಾರೂ ಪ್ರಶ್ನಿಸಿಲ್ಲ. ಯಾಕೆಂದರೆ ದೊಡ್ಡ ಸಮಸ್ಯೆ ಎಂದು ಅನಿಸಿಲ್ಲ. ಆದರೆ ಹಿಜಾಬ್ ವಿಚಾರದಲ್ಲಿ ದ್ವೇಷ ರಾಜಕಾರಣ ಮಾಡಲಾಯಿತು. ಈ ಉದ್ದೇಶಿತ ದ್ವಂದ್ವ ನಿಲುವನ್ನು ಜನರು ಅರ್ಥ ಮಾಡಿಕೊಳ್ಳಬೇಕು” ಎಂದು ಈದಿನ.ಕಾಂ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ‘ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ’: ಯುಎಸ್ ಸಂಸ್ಥೆ ಟೀಕೆ

“ಸರ್ಕಾರದ ಯಾವುದೇ ಸಂಸ್ಥೆಯಲ್ಲೂ ಒಂದು ಧರ್ಮವನ್ನು ಮಾತ್ರ ಪ್ರತಿನಿಧಿಸುವಂತಿಲ್ಲ. ಯಾಕೆಂದರೆ ಸರ್ಕಾರ ಅದನ್ನು ತೆರಿಗೆ ಹಣದಿಂದ ನಡೆಸುತ್ತದೆ. ತೆರಿಗೆಯನ್ನು ಈ ದೇಶದ ಪ್ರತಿಯೊಬ್ಬ ನಾಗರಿಕ ನೀಡಿರುವಂಥದ್ದು. ನಿರ್ದಿಷ್ಟವಾದ ಒಂದು ಧರ್ಮದ ಆಚರಣೆ ತಪ್ಪು. ಈವರೆಗೆ ಹಲವಾರು ಆಚರಣೆಗಳು ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಲೇ ಬಂದಿದೆ. ಅದು ಇತರ ಯಾವುದೇ ಧರ್ಮದವರು ವಿರೋಧಿಸಿ ಪ್ರತಿಭಟಿಸಿಲ್ಲ. ಅವೆಲ್ಲದಕ್ಕೂ ಹೊಂದಿಕೊಂಡು ಬಂದಿದ್ದಾರೆ”

“ಆದರೆ, ಉಡುಪಿಯ ಬೆರಳೆಣಿಕೆಯ ಮುಸ್ಲಿಂ ವಿದ್ಯಾರ್ಥಿನಿಯರು ಕೇಳಿದ್ದ ಹಿಜಾಬ್ ಬೇಡಿಕೆಯನ್ನು ಬಹಳ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಿ ವಿವಾದವಾಗಿಸಲಾಯಿತು. ಹಿಜಾಬ್‌ ಧರಿಸುವುದರಿಂದ ಯಾವುದೇ ಧರ್ಮದವನಿಗೆ ಎಳ್ಳಷ್ಟೂ ಸಮಸ್ಯೆಯಾಗಲ್ಲ. ಆದರೆ ಹಿಜಾಬನ್ನು ಬಳಸಿಕೊಂಡು ಧಾರ್ಮಿಕ ವಿಭಜನೆ ಮಾಡಲಾಯಿತು. ಹೈಕೋರ್ಟ್‌ ತೀರ್ಪಿನ ಬಳಿಕದ ‘ಗಣಹೋಮ’ದ ಬೆಳವಣಿಗೆಯು ದ್ವೇಷ ಹರಡಿದವರಿಗೆ ಪಾಠ” ಎಂದು ಉಡುಪಿ ಜಿಲ್ಲೆ ಸಹಬಾಳ್ವೆ ವೇದಿಕೆಯ ಅಮೃತ್ ಶೆಣೈ ತಿಳಿಸಿದ್ದಾರೆ.

“ನಮ್ಮ ಭಾರತ ಬಹು ಸಂಸ್ಕೃತಿಯ ರಾಷ್ಟ್ರ. ಇದು ನಡೆದಿರುವುದರಲ್ಲಿ ನಮಗೆ ಸಮಸ್ಯೆ ಎನಿಸಿಲ್ಲ. ನಮ್ಮ ಸಂಸ್ಕೃತಿ ಆಚಾರ ವಿಚಾರ ತಿಳಿಯುವುದರಲ್ಲಿ ತಪ್ಪಿಲ್ಲ. ಆದರೆ ಹಿಜಾಬ್ ಅನ್ನು ದೊಡ್ಡ ಸಮಸ್ಯೆ ಎಂದು ಬಿಂಬಿಸಿದವರಿಗೆ ಇದು ಯಾಕೆ ಅರ್ಥವಾಗುವುದಿಲ್ಲ. ಸ್ಕಾರ್ಫ್ ಧಾರ್ಮಿಕ ಸಂಕೇತ ಎನ್ನುವವರು ಈಗೆಲ್ಲಿದ್ದಾರೆ? ಒಂದು ತುಂಡು ಬಟ್ಟೆಗಾಗಿ ರಂಪ ಸೃಷ್ಟಿಸಿದವರು ಈಗ ಯಾಕೆ ಸುಮ್ಮನಿದ್ದಾರೆ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ?” ಎಂದು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಶಿಕ್ಷಣ ವ್ಯವಸ್ಥೆಯನ್ನು ಧಾರ್ಮಿಕತೆಯಿಂದ ಹೊರಗಿಡಲು ಸಾಧ್ಯವೇ?

“ಹಿಜಾಬ್ ಧರಿಸುವುದು ಧಾರ್ಮಿಕ ಸಂಕೇತವಾದರೆ ಈ ಫೋಟೋಗಳು ಏನು ಸೂಚಿಸುತ್ತವೆ? ಸರಕಾರಿ ಶಾಲಾ ಕಾಲೇಜುಗಳಲ್ಲಿ ಸಮಾನತೆ ಬೇಕು. ಯಾವುದೇ ಧಾರ್ಮಿಕ ವಸ್ತ್ರ ಮಾತ್ರ ಧರಿಸಬಾರದು!. ಪೂಜೆ ಪುನಸ್ಕಾರಗಳೆಲ್ಲ ನಡೆಯಬೇಕು! ಇದು ಏನು?” ಎಂಬ ಪ್ರಶ್ನೆಯನ್ನು ಸಾಮಾಜಿಕ ಮಾಧ್ಯಮಗಲ್ಲಿ ಕೇಳಲಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shale galalli Ganahomada badalu Nemothsava, Kola bali, kuda maadbahudalva…?

    India kke yenu grahachaara bantho…? Yee shanigrahachaaradinda naavella yaavaaga paaraaguvudo yeno..?

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...